AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋಷಕರು ಲೈಂಗಿಕ ಕ್ರಿಯೆ ನಡೆಸೋದನ್ನು ನೋಡ್ತಾ ಇರ್ತೀರಾ’; ವಿವಾದಕ್ಕೆ ಸಿಲುಕಿದ ರಣವೀರ್ ಅಲಾಹಾಬಾದಿಯಾ

ರಣವೀರ್ ಅಲಾಹಾಬಾದಿಯಾ ಅವರು ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ಕೇಳಿದ ವಿವಾದಾತ್ಮಕ ಪ್ರಶ್ನೆಯಿಂದಾಗಿ ಭಾರಿ ವಿರೋಧ ಎದುರಿಸುತ್ತಿದ್ದಾರೆ. ಅವರ ಪ್ರಶ್ನೆ ಅನೇಕರನ್ನು ಅಸಮಾಧಾನಗೊಳಿಸಿದ್ದು, ಮಹರಾಷ್ಟ್ರ ಮಹಿಳಾ ಆಯೋಗ ದೂರು ದಾಖಲಿಸಿದೆ. ಇದರಿಂದಾಗಿ ಎಫ್‌ಐಆರ್ ದಾಖಲಾಗಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

‘ಪೋಷಕರು ಲೈಂಗಿಕ ಕ್ರಿಯೆ ನಡೆಸೋದನ್ನು ನೋಡ್ತಾ ಇರ್ತೀರಾ’; ವಿವಾದಕ್ಕೆ ಸಿಲುಕಿದ ರಣವೀರ್ ಅಲಾಹಾಬಾದಿಯಾ
ರಣವೀರ್
ರಾಜೇಶ್ ದುಗ್ಗುಮನೆ
|

Updated on:Feb 11, 2025 | 11:42 AM

Share

ರಣವೀರ್ ಅಲಾಹಾಬಾದಿಯಾ ಅವರು ಸಾಕಷ್ಟು ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿ ಫೇಮಸ್ ಆದವರು.  ಅವರ ‘ಬೀರ್ ಬೈಸೆಪ್ಸ್’​ ಯೂಟ್ಯೂಬ್ ಚಾನೆಲ್ ಬರೋಬ್ಬರಿ 82 ಲಕ್ಷ ಸಬ್​ಸ್ಕ್ರೈಬರ್​​ಗಳನ್ನು ಒಳಗೊಂಡಿದೆ. ಇತ್ತೀಚೆಗೆ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಅತಿಥಿಯಾಗಿ ಬಂದಿದ್ದರು. ಈ ವೇಳೆ ಅವರು ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ.

ಸಮಯ್ ರೈನಾ ಕೂಡ ಯೂಟ್ಯೂಬರ್. ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋ ಮೂಲಕ ಅವರು ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದಾರೆ. ಈ ಶೋನಲ್ಲಿ ಫಿಲ್ಟರ್ ಇಲ್ಲದೆ ಮಾತನಾಡಲಾಗುತ್ತದೆ. ಈ ಶೋಗೆ ಬಂದಿದ್ದ ರಣವೀರ್ ಅವರು ಎಲ್ಲೆ ಮೀರಿ ಮಾತನಾಡಿದ್ದರು. ಹೀಗಾಗಿ, ಸಮಯ್ ರೈನಾ, ಅಪೂರ್ವಾ ಮಖಿಜಾ, ರಣವೀರ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಾಗಿದೆ.

ನೀಡಿದ ಹೇಳಿಕೆ ಏನು?

ಶೋನಲ್ಲಿ ಪರ್ಫಾರ್ಮ್ ಮಾಡಲು ಬಂದ ಸ್ಪರ್ಧಿಗೆ ರಣವೀರ್ ಅವರು ಪ್ರಶ್ನೆ ಒಂದನ್ನು ಕೇಳಿದ್ದರು. ‘ನಿಮ್ಮ ಜೀವನದುದ್ದಕ್ಕೂ ನಿಮ್ಮ ಹೆತ್ತವರು ಪ್ರತಿದಿನ ಲೈಂಗಿಕತೆಯನ್ನು ಹೊಂದುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರ ಜೊತೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ’ ಎಂದು ಕೇಳಿದ್ದರು.

ವಿವಾದ

ಈ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಅನೇಕ ನಾಯಕರು ಇದನ್ನು ವಿರೋಧಿಸಿದ್ದಾರೆ. ಮಹರಾಷ್ಟ್ರ ಮಹಿಳಾ ಕಮಿಷನ್​​ನವರು ಮುಂಬೈ ಕಮಿಷನರ್​ಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ.

ದಂಗಾದರೂ

ರಣವೀರ್ ಅಲಾಹಾಬಾದಿಯಾ ಅವರು ಸದಾ ಅಧ್ಯಾತ್ಮದ ಬಗ್ಗೆ ಹಾಗೂ ಆ ರೀತಿಯ ಪ್ರಶ್ನೆಗಳನ್ನು ಕೇಳುತ್ತಾ ಗಮನ ಸೆಳೆದವರು. ವೇದಿಕೆ ಮೇಲೆ ರಣವೀರ್ ನೀಡಿದ ಹೇಳಿಕೆ ಕೇಳಿ ಸಮಯ್ ರೈನಾ, ಯೂಟ್ಯೂಬರ್ ಆಶಿಶ್ ಚಂಚಲಾನಿ, ಅಪೂರ್ವ ಮಖಿಜಾ ಮೊದಲಾದವರು ಶಾಕ್ ಆದರು. ಅವರಿಗೆ ಮಾತು ಬರಲೇ ಇಲ್ಲ.

ಇದನ್ನೂ ಓದಿ: ರಣವೀರ್-ದೀಪಿಕಾ ಇರುವ ಮನೆಯ ಒಂದು ತಿಂಗಳ ಬಾಡಿಗೆ ಇಷ್ಟೊಂದಾ?

ಕ್ಷಮೆ

ವಿವಾದ ದೊಡ್ಡದಾಗುತ್ತಿದ್ದಂತೆ ಸಮಯ್ ರೈನಾ ಅವರು ಕ್ಷಮೆ ಕೇಳಿದ್ದಾರೆ. ‘ನನ್ನಿಂದ ತಪ್ಪಾಗಿದೆ ಕ್ಷಮಿಸಿ’ ಎಂದು ಕೇಳಿದ್ದಾರೆ. ಹೀಗಿರುವಾಗಲೇ ಇಂಡಿಯಾಸ್ ಗಾಟ್ ಲೇಟೆಂಟ್ ಶೋನ ಬ್ಯಾನ್ ಮಾಡುವ ಆಗ್ರಹವೂ ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Tue, 11 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ