AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋಷಕರು ಲೈಂಗಿಕ ಕ್ರಿಯೆ ನಡೆಸೋದನ್ನು ನೋಡ್ತಾ ಇರ್ತೀರಾ’; ವಿವಾದಕ್ಕೆ ಸಿಲುಕಿದ ರಣವೀರ್ ಅಲಾಹಾಬಾದಿಯಾ

ರಣವೀರ್ ಅಲಾಹಾಬಾದಿಯಾ ಅವರು ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ಕೇಳಿದ ವಿವಾದಾತ್ಮಕ ಪ್ರಶ್ನೆಯಿಂದಾಗಿ ಭಾರಿ ವಿರೋಧ ಎದುರಿಸುತ್ತಿದ್ದಾರೆ. ಅವರ ಪ್ರಶ್ನೆ ಅನೇಕರನ್ನು ಅಸಮಾಧಾನಗೊಳಿಸಿದ್ದು, ಮಹರಾಷ್ಟ್ರ ಮಹಿಳಾ ಆಯೋಗ ದೂರು ದಾಖಲಿಸಿದೆ. ಇದರಿಂದಾಗಿ ಎಫ್‌ಐಆರ್ ದಾಖಲಾಗಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

‘ಪೋಷಕರು ಲೈಂಗಿಕ ಕ್ರಿಯೆ ನಡೆಸೋದನ್ನು ನೋಡ್ತಾ ಇರ್ತೀರಾ’; ವಿವಾದಕ್ಕೆ ಸಿಲುಕಿದ ರಣವೀರ್ ಅಲಾಹಾಬಾದಿಯಾ
ರಣವೀರ್
ರಾಜೇಶ್ ದುಗ್ಗುಮನೆ
|

Updated on:Feb 11, 2025 | 11:42 AM

Share

ರಣವೀರ್ ಅಲಾಹಾಬಾದಿಯಾ ಅವರು ಸಾಕಷ್ಟು ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿ ಫೇಮಸ್ ಆದವರು.  ಅವರ ‘ಬೀರ್ ಬೈಸೆಪ್ಸ್’​ ಯೂಟ್ಯೂಬ್ ಚಾನೆಲ್ ಬರೋಬ್ಬರಿ 82 ಲಕ್ಷ ಸಬ್​ಸ್ಕ್ರೈಬರ್​​ಗಳನ್ನು ಒಳಗೊಂಡಿದೆ. ಇತ್ತೀಚೆಗೆ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಅತಿಥಿಯಾಗಿ ಬಂದಿದ್ದರು. ಈ ವೇಳೆ ಅವರು ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ.

ಸಮಯ್ ರೈನಾ ಕೂಡ ಯೂಟ್ಯೂಬರ್. ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋ ಮೂಲಕ ಅವರು ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದಾರೆ. ಈ ಶೋನಲ್ಲಿ ಫಿಲ್ಟರ್ ಇಲ್ಲದೆ ಮಾತನಾಡಲಾಗುತ್ತದೆ. ಈ ಶೋಗೆ ಬಂದಿದ್ದ ರಣವೀರ್ ಅವರು ಎಲ್ಲೆ ಮೀರಿ ಮಾತನಾಡಿದ್ದರು. ಹೀಗಾಗಿ, ಸಮಯ್ ರೈನಾ, ಅಪೂರ್ವಾ ಮಖಿಜಾ, ರಣವೀರ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಾಗಿದೆ.

ನೀಡಿದ ಹೇಳಿಕೆ ಏನು?

ಶೋನಲ್ಲಿ ಪರ್ಫಾರ್ಮ್ ಮಾಡಲು ಬಂದ ಸ್ಪರ್ಧಿಗೆ ರಣವೀರ್ ಅವರು ಪ್ರಶ್ನೆ ಒಂದನ್ನು ಕೇಳಿದ್ದರು. ‘ನಿಮ್ಮ ಜೀವನದುದ್ದಕ್ಕೂ ನಿಮ್ಮ ಹೆತ್ತವರು ಪ್ರತಿದಿನ ಲೈಂಗಿಕತೆಯನ್ನು ಹೊಂದುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರ ಜೊತೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ’ ಎಂದು ಕೇಳಿದ್ದರು.

ವಿವಾದ

ಈ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಅನೇಕ ನಾಯಕರು ಇದನ್ನು ವಿರೋಧಿಸಿದ್ದಾರೆ. ಮಹರಾಷ್ಟ್ರ ಮಹಿಳಾ ಕಮಿಷನ್​​ನವರು ಮುಂಬೈ ಕಮಿಷನರ್​ಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ.

ದಂಗಾದರೂ

ರಣವೀರ್ ಅಲಾಹಾಬಾದಿಯಾ ಅವರು ಸದಾ ಅಧ್ಯಾತ್ಮದ ಬಗ್ಗೆ ಹಾಗೂ ಆ ರೀತಿಯ ಪ್ರಶ್ನೆಗಳನ್ನು ಕೇಳುತ್ತಾ ಗಮನ ಸೆಳೆದವರು. ವೇದಿಕೆ ಮೇಲೆ ರಣವೀರ್ ನೀಡಿದ ಹೇಳಿಕೆ ಕೇಳಿ ಸಮಯ್ ರೈನಾ, ಯೂಟ್ಯೂಬರ್ ಆಶಿಶ್ ಚಂಚಲಾನಿ, ಅಪೂರ್ವ ಮಖಿಜಾ ಮೊದಲಾದವರು ಶಾಕ್ ಆದರು. ಅವರಿಗೆ ಮಾತು ಬರಲೇ ಇಲ್ಲ.

ಇದನ್ನೂ ಓದಿ: ರಣವೀರ್-ದೀಪಿಕಾ ಇರುವ ಮನೆಯ ಒಂದು ತಿಂಗಳ ಬಾಡಿಗೆ ಇಷ್ಟೊಂದಾ?

ಕ್ಷಮೆ

ವಿವಾದ ದೊಡ್ಡದಾಗುತ್ತಿದ್ದಂತೆ ಸಮಯ್ ರೈನಾ ಅವರು ಕ್ಷಮೆ ಕೇಳಿದ್ದಾರೆ. ‘ನನ್ನಿಂದ ತಪ್ಪಾಗಿದೆ ಕ್ಷಮಿಸಿ’ ಎಂದು ಕೇಳಿದ್ದಾರೆ. ಹೀಗಿರುವಾಗಲೇ ಇಂಡಿಯಾಸ್ ಗಾಟ್ ಲೇಟೆಂಟ್ ಶೋನ ಬ್ಯಾನ್ ಮಾಡುವ ಆಗ್ರಹವೂ ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Tue, 11 February 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು