AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​

Ranveer Singh: ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ‘ಗಲ್ಲಿ ಬಾಯ್​’ ಚಿತ್ರದ ಮೂಲಕ ಸೂಪರ್​ ಹಿಟ್​ ಎನಿಸಿಕೊಂಡ ಜೋಡಿ ಇದು.

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​
ರಣವೀರ್​ ಸಿಂಗ್​- ಆಲಿಯಾ ಭಟ್​
TV9 Web
| Edited By: |

Updated on:Jul 06, 2021 | 11:01 AM

Share

ನಟಿ ಆಲಿಯಾ ಭಟ್​ ಅವರು ರಣಬೀರ್​ ಕಪೂರ್​ ಜೊತೆ ಡೇಟಿಂಗ್​ ಮಾಡುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಅದರ ನಡುವೆಯೇ ಆಲಿಯಾ ಮತ್ತು ರಣವೀರ್​ ಸಿಂಗ್​ ಜೋಡಿಯ ಒಂದು ಪ್ರೇಮ್​ ಕಹಾನಿಯನ್ನು ಜಗತ್ತಿಗೆ ತೋರಿಸಲು ಕರಣ್​ ಜೋಹರ್​ ಪ್ಲ್ಯಾನ್​ ಮಾಡಿದ್ದಾರೆ. ಅಂದಹಾಗೆ, ಇದು ಇವರಿಬ್ಬರ ರಿಯಲ್​ ಲವ್​ಸ್ಟೋರಿ ಅಲ್ಲ. ಹೊಸದೊಂದು ಸಿನಿಮಾದಲ್ಲಿ ರಣವೀರ್​ ಸಿಂಗ್​ ಹಾಗೂ ಆಲಿಯಾ ಒಂದಾಗುತ್ತಿದ್ದು, ಅದಕ್ಕೆ ಕರಣ್​ ಜೋಹರ್​ ನಿರ್ದೇಶನ ಮಾಡಲಿದ್ದಾರೆ. ಆ ಸಿನಿಮಾ ಹೆಸರು, ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’.

ಇಂದು (ಜು.6) ರಣವೀರ್​ ಸಿಂಗ್​ ಜನ್ಮದಿನ. ಆ ಪ್ರಯುಕ್ತ ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಅನೌನ್ಸ್​ ಆಗುವ ನಿರೀಕ್ಷೆ ಇದೆ. ಕರಣ್​ ಜೋಹರ್​ ಹಲವು ವರ್ಷಗಳ ಬಳಿಕ ನಿರ್ದೇಶನ ಮಾಡುತ್ತಿರುವುದರಿಂದ ಸಿನಿಪ್ರಿಯರಲ್ಲಿ ಕುತೂಹಲ ಮೂಡಿದೆ. 2016ರಲ್ಲಿ ಐಶ್ವರ್ಯಾ ರೈ ಮತ್ತು ರಣಬೀರ್​ ಕಪೂರ್​ ಜೋಡಿಯ ‘ಯೇ ದಿಲ್​ ಹೈ ಮುಷ್ಕಿಲ್​’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾಗೂ ಕರಣ್​ ನಿರ್ದೇಶನ ಮಾಡಿರಲಿಲ್ಲ.

ಇನ್ನು, ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿ ಎಂದ ತಕ್ಷಣ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚುತ್ತದೆ. ಯಾಕೆಂದರೆ, ಈ ಪ್ರತಿಭಾವಂತ ಕಲಾವಿದರಿಬ್ಬರು ಜೊತೆಯಾಗಿ ನಟಿಸಿದ್ದ ‘ಗಲ್ಲಿ ಬಾಯ್​’ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್​ ಮಾಡಿದ್ದೂ ಅಲ್ಲದೆ, ಹಲವು ಪ್ರಶಸ್ತಿಗಳನ್ನು ಬಾಚಿ ಕೊಂಡಿತ್ತು. ಹಾಗಾಗಿ ಇವರಿಬ್ಬರು ಮತ್ತೆ ಜೊತೆಯಾಗಿ ನಟಿಸಲಿರುವ ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದ ಬಗ್ಗೆ ಹೈಪ್​ ಸೃಷ್ಟಿ ಆಗುತ್ತಿದೆ.

ಇದೇ ಸಿನಿಮಾದಲ್ಲಿ ಶಬನಾ ಆಜ್ಮಿ, ಧರ್ಮೇಂದ್ರ, ಜಯಾ ಬಚ್ಚನ್​ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಿರ್ದೇಶಕರೇ ಅಧಿಕೃತ ಮಾಹಿತಿ ನೀಡಬೇಕಿದೆ. ಇಂದು ರಣವೀರ್​ ಸಿಂಗ್​ ಜನ್ಮದಿನಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು, ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅದರ ಜೊತೆ ಹೊಸ ಸಿನಿಮಾ ಅನೌನ್ಸ್​ ಆದರೆ ಫ್ಯಾನ್ಸ್​ಗೆ ಹೆಚ್ಚು ಖುಷಿ ಆಗಲಿದೆ.

ಇದನ್ನೂ ಓದಿ:

ರಣವೀರ್​ ಸಿಂಗ್​ ನಟಿಸಿದ ಈ ಟಾಪ್​ 10 ಚಿತ್ರಗಳಲ್ಲಿ ನಿಮಗೆ ಯಾವುದು ಇಷ್ಟ?

ಬೆಳ್ಳಿ ಪರದೆಯಲ್ಲಿ ಉತ್ತುಂಗದಲ್ಲಿರುವಾಗಲೇ ಕಿರುತೆರೆಗೆ ಕಾಲಿಟ್ಟ ನಟ ರಣವೀರ್​ ಸಿಂಗ್​

Published On - 9:53 am, Tue, 6 July 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ