AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​

Ranveer Singh: ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ‘ಗಲ್ಲಿ ಬಾಯ್​’ ಚಿತ್ರದ ಮೂಲಕ ಸೂಪರ್​ ಹಿಟ್​ ಎನಿಸಿಕೊಂಡ ಜೋಡಿ ಇದು.

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​
ರಣವೀರ್​ ಸಿಂಗ್​- ಆಲಿಯಾ ಭಟ್​
TV9 Web
| Edited By: |

Updated on:Jul 06, 2021 | 11:01 AM

Share

ನಟಿ ಆಲಿಯಾ ಭಟ್​ ಅವರು ರಣಬೀರ್​ ಕಪೂರ್​ ಜೊತೆ ಡೇಟಿಂಗ್​ ಮಾಡುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಅದರ ನಡುವೆಯೇ ಆಲಿಯಾ ಮತ್ತು ರಣವೀರ್​ ಸಿಂಗ್​ ಜೋಡಿಯ ಒಂದು ಪ್ರೇಮ್​ ಕಹಾನಿಯನ್ನು ಜಗತ್ತಿಗೆ ತೋರಿಸಲು ಕರಣ್​ ಜೋಹರ್​ ಪ್ಲ್ಯಾನ್​ ಮಾಡಿದ್ದಾರೆ. ಅಂದಹಾಗೆ, ಇದು ಇವರಿಬ್ಬರ ರಿಯಲ್​ ಲವ್​ಸ್ಟೋರಿ ಅಲ್ಲ. ಹೊಸದೊಂದು ಸಿನಿಮಾದಲ್ಲಿ ರಣವೀರ್​ ಸಿಂಗ್​ ಹಾಗೂ ಆಲಿಯಾ ಒಂದಾಗುತ್ತಿದ್ದು, ಅದಕ್ಕೆ ಕರಣ್​ ಜೋಹರ್​ ನಿರ್ದೇಶನ ಮಾಡಲಿದ್ದಾರೆ. ಆ ಸಿನಿಮಾ ಹೆಸರು, ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’.

ಇಂದು (ಜು.6) ರಣವೀರ್​ ಸಿಂಗ್​ ಜನ್ಮದಿನ. ಆ ಪ್ರಯುಕ್ತ ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಅನೌನ್ಸ್​ ಆಗುವ ನಿರೀಕ್ಷೆ ಇದೆ. ಕರಣ್​ ಜೋಹರ್​ ಹಲವು ವರ್ಷಗಳ ಬಳಿಕ ನಿರ್ದೇಶನ ಮಾಡುತ್ತಿರುವುದರಿಂದ ಸಿನಿಪ್ರಿಯರಲ್ಲಿ ಕುತೂಹಲ ಮೂಡಿದೆ. 2016ರಲ್ಲಿ ಐಶ್ವರ್ಯಾ ರೈ ಮತ್ತು ರಣಬೀರ್​ ಕಪೂರ್​ ಜೋಡಿಯ ‘ಯೇ ದಿಲ್​ ಹೈ ಮುಷ್ಕಿಲ್​’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾಗೂ ಕರಣ್​ ನಿರ್ದೇಶನ ಮಾಡಿರಲಿಲ್ಲ.

ಇನ್ನು, ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿ ಎಂದ ತಕ್ಷಣ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚುತ್ತದೆ. ಯಾಕೆಂದರೆ, ಈ ಪ್ರತಿಭಾವಂತ ಕಲಾವಿದರಿಬ್ಬರು ಜೊತೆಯಾಗಿ ನಟಿಸಿದ್ದ ‘ಗಲ್ಲಿ ಬಾಯ್​’ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್​ ಮಾಡಿದ್ದೂ ಅಲ್ಲದೆ, ಹಲವು ಪ್ರಶಸ್ತಿಗಳನ್ನು ಬಾಚಿ ಕೊಂಡಿತ್ತು. ಹಾಗಾಗಿ ಇವರಿಬ್ಬರು ಮತ್ತೆ ಜೊತೆಯಾಗಿ ನಟಿಸಲಿರುವ ‘ರಾಖಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದ ಬಗ್ಗೆ ಹೈಪ್​ ಸೃಷ್ಟಿ ಆಗುತ್ತಿದೆ.

ಇದೇ ಸಿನಿಮಾದಲ್ಲಿ ಶಬನಾ ಆಜ್ಮಿ, ಧರ್ಮೇಂದ್ರ, ಜಯಾ ಬಚ್ಚನ್​ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಿರ್ದೇಶಕರೇ ಅಧಿಕೃತ ಮಾಹಿತಿ ನೀಡಬೇಕಿದೆ. ಇಂದು ರಣವೀರ್​ ಸಿಂಗ್​ ಜನ್ಮದಿನಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು, ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅದರ ಜೊತೆ ಹೊಸ ಸಿನಿಮಾ ಅನೌನ್ಸ್​ ಆದರೆ ಫ್ಯಾನ್ಸ್​ಗೆ ಹೆಚ್ಚು ಖುಷಿ ಆಗಲಿದೆ.

ಇದನ್ನೂ ಓದಿ:

ರಣವೀರ್​ ಸಿಂಗ್​ ನಟಿಸಿದ ಈ ಟಾಪ್​ 10 ಚಿತ್ರಗಳಲ್ಲಿ ನಿಮಗೆ ಯಾವುದು ಇಷ್ಟ?

ಬೆಳ್ಳಿ ಪರದೆಯಲ್ಲಿ ಉತ್ತುಂಗದಲ್ಲಿರುವಾಗಲೇ ಕಿರುತೆರೆಗೆ ಕಾಲಿಟ್ಟ ನಟ ರಣವೀರ್​ ಸಿಂಗ್​

Published On - 9:53 am, Tue, 6 July 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!