AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ
ರಣವೀರ್​ ಸಿಂಗ್​ - ದೀಪಿಕಾ ಪಡುಕೋಣೆ
ಮದನ್​ ಕುಮಾರ್​
| Edited By: |

Updated on: Apr 16, 2021 | 5:30 PM

Share

ನಟಿ ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನವರು. ಆದರೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕ ಬಳಿಕ ಸಿನಿಮಾ ಚಟುವಟಿಕೆಗಳ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚಾಗಿ ವಾಸಿಸಲು ಆರಂಭಿಸಿದರು. ನಟ ರಣವೀರ್​ ಸಿಂಗ್ ಜೊತೆ ಮದುವೆ ಆದ ಬಳಿಕ ಅಲ್ಲಿಯೇ ಸೆಟ್ಲ್​ ಆದರು. ಆದರೆ ಈಗ ಅವರು ರಾತ್ರೋ ರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನೇಕ ಬಗೆಯ ಗುಸುಗುಸು ಹರಿದಾಡುತ್ತಿದೆ. ಈ ಸ್ಟಾರ್​ ದಂಪತಿ ಯಾಕೆ ಧಿಡೀರ್​ ಅಂತ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದೆ ಎಂಬ ಬಗ್ಗೆ ಕೆಲವೆಡೆ ವರದಿ ಆಗಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಇತ್ತೀಚೆಗೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀಗೆ ಏಕಾಏಕಿ ವಾಣಿಜ್ಯ ನಗರಿ ಬಿಟ್ಟು ಉದ್ಯಾನ ನಗರಿಯತ್ತ ಪ್ರಯಾಣ ಬೆಳೆಸಿದ್ದಕ್ಕೆ ಕೊರೊನಾ ವೈರಸ್​ ಕಾರಣ ಎನ್ನಲಾಗುತ್ತಿದೆ! ಹಾಗಂತ ಈ ಸೆಲೆಬ್ರಿಟಿ ಜೋಡಿಗೆ ಕೊವಿಡ್​-19 ಪಾಸಿಟಿವ್​ ಆಗಿಲ್ಲ. ಬದಲಿಗೆ, ಕೊರೊನಾದಿಂದಾಗಿ ಮುಂಬೈನಲ್ಲಿ ಆಗಿರುವ ಜನತಾ ಕರ್ಫ್ಯೂನಿಂದ ತಪ್ಪಿಸಿಕೊಳ್ಳಲು ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ. ಅತಿ ಅವಶ್ಯಕ ಕೆಲಸಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾ ಚಿತ್ರೀಕರಣದ ಮೇಲೂ ನಿರ್ಬಂಧ ಹೇರಲಾಗಿದೆ. ಹಾಗಾಗಿ ಈ ಸಮಯದಲ್ಲಿ ದೀಪಿಕಾ-ರಣವೀರ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವ ಅನಿವಾರ್ಯತೆ ಎದುರಾಗಿದೆ.

ಮುಂಬೈನಲ್ಲಿ ಕರ್ಫ್ಯೂ ಸಂದರ್ಭವನ್ನು ತಪ್ಪಿಸಿಕೊಳ್ಳಲು ದೀಪಿಕಾ ಮತ್ತು ರಣವೀರ್​ ಸಿಂಗ್​ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಈ ಸ್ಟಾರ್ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕರ್ನಾಟಕದಲ್ಲಿಯೂ ಮತ್ತೆ ಲಾಕ್​ಡೌನ್​ ಆಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈ ವೇಳೆ ಬೆಂಗಳೂರಿನಲ್ಲಿ ಇಬ್ಬರೂ ಜೊತೆಯಾಗಿ ಕಾಲ ಕಳೆಯಲಿದ್ದಾರೆ. ದೀಪಿಕಾ-ರಣವೀರ್ ನಟಿಸಿರುವ ‘83’ ಸಿನಿಮಾ ಜೂ.4ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ