AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ
ರಣವೀರ್​ ಸಿಂಗ್​ - ದೀಪಿಕಾ ಪಡುಕೋಣೆ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 16, 2021 | 5:30 PM

ನಟಿ ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನವರು. ಆದರೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕ ಬಳಿಕ ಸಿನಿಮಾ ಚಟುವಟಿಕೆಗಳ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚಾಗಿ ವಾಸಿಸಲು ಆರಂಭಿಸಿದರು. ನಟ ರಣವೀರ್​ ಸಿಂಗ್ ಜೊತೆ ಮದುವೆ ಆದ ಬಳಿಕ ಅಲ್ಲಿಯೇ ಸೆಟ್ಲ್​ ಆದರು. ಆದರೆ ಈಗ ಅವರು ರಾತ್ರೋ ರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನೇಕ ಬಗೆಯ ಗುಸುಗುಸು ಹರಿದಾಡುತ್ತಿದೆ. ಈ ಸ್ಟಾರ್​ ದಂಪತಿ ಯಾಕೆ ಧಿಡೀರ್​ ಅಂತ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದೆ ಎಂಬ ಬಗ್ಗೆ ಕೆಲವೆಡೆ ವರದಿ ಆಗಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಇತ್ತೀಚೆಗೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀಗೆ ಏಕಾಏಕಿ ವಾಣಿಜ್ಯ ನಗರಿ ಬಿಟ್ಟು ಉದ್ಯಾನ ನಗರಿಯತ್ತ ಪ್ರಯಾಣ ಬೆಳೆಸಿದ್ದಕ್ಕೆ ಕೊರೊನಾ ವೈರಸ್​ ಕಾರಣ ಎನ್ನಲಾಗುತ್ತಿದೆ! ಹಾಗಂತ ಈ ಸೆಲೆಬ್ರಿಟಿ ಜೋಡಿಗೆ ಕೊವಿಡ್​-19 ಪಾಸಿಟಿವ್​ ಆಗಿಲ್ಲ. ಬದಲಿಗೆ, ಕೊರೊನಾದಿಂದಾಗಿ ಮುಂಬೈನಲ್ಲಿ ಆಗಿರುವ ಜನತಾ ಕರ್ಫ್ಯೂನಿಂದ ತಪ್ಪಿಸಿಕೊಳ್ಳಲು ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ. ಅತಿ ಅವಶ್ಯಕ ಕೆಲಸಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾ ಚಿತ್ರೀಕರಣದ ಮೇಲೂ ನಿರ್ಬಂಧ ಹೇರಲಾಗಿದೆ. ಹಾಗಾಗಿ ಈ ಸಮಯದಲ್ಲಿ ದೀಪಿಕಾ-ರಣವೀರ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವ ಅನಿವಾರ್ಯತೆ ಎದುರಾಗಿದೆ.

ಮುಂಬೈನಲ್ಲಿ ಕರ್ಫ್ಯೂ ಸಂದರ್ಭವನ್ನು ತಪ್ಪಿಸಿಕೊಳ್ಳಲು ದೀಪಿಕಾ ಮತ್ತು ರಣವೀರ್​ ಸಿಂಗ್​ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಈ ಸ್ಟಾರ್ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕರ್ನಾಟಕದಲ್ಲಿಯೂ ಮತ್ತೆ ಲಾಕ್​ಡೌನ್​ ಆಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈ ವೇಳೆ ಬೆಂಗಳೂರಿನಲ್ಲಿ ಇಬ್ಬರೂ ಜೊತೆಯಾಗಿ ಕಾಲ ಕಳೆಯಲಿದ್ದಾರೆ. ದೀಪಿಕಾ-ರಣವೀರ್ ನಟಿಸಿರುವ ‘83’ ಸಿನಿಮಾ ಜೂ.4ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ