AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ
ರಣವೀರ್​ ಸಿಂಗ್​ - ದೀಪಿಕಾ ಪಡುಕೋಣೆ
ಮದನ್​ ಕುಮಾರ್​
| Edited By: |

Updated on: Apr 16, 2021 | 5:30 PM

Share

ನಟಿ ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನವರು. ಆದರೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕ ಬಳಿಕ ಸಿನಿಮಾ ಚಟುವಟಿಕೆಗಳ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚಾಗಿ ವಾಸಿಸಲು ಆರಂಭಿಸಿದರು. ನಟ ರಣವೀರ್​ ಸಿಂಗ್ ಜೊತೆ ಮದುವೆ ಆದ ಬಳಿಕ ಅಲ್ಲಿಯೇ ಸೆಟ್ಲ್​ ಆದರು. ಆದರೆ ಈಗ ಅವರು ರಾತ್ರೋ ರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನೇಕ ಬಗೆಯ ಗುಸುಗುಸು ಹರಿದಾಡುತ್ತಿದೆ. ಈ ಸ್ಟಾರ್​ ದಂಪತಿ ಯಾಕೆ ಧಿಡೀರ್​ ಅಂತ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದೆ ಎಂಬ ಬಗ್ಗೆ ಕೆಲವೆಡೆ ವರದಿ ಆಗಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಇತ್ತೀಚೆಗೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀಗೆ ಏಕಾಏಕಿ ವಾಣಿಜ್ಯ ನಗರಿ ಬಿಟ್ಟು ಉದ್ಯಾನ ನಗರಿಯತ್ತ ಪ್ರಯಾಣ ಬೆಳೆಸಿದ್ದಕ್ಕೆ ಕೊರೊನಾ ವೈರಸ್​ ಕಾರಣ ಎನ್ನಲಾಗುತ್ತಿದೆ! ಹಾಗಂತ ಈ ಸೆಲೆಬ್ರಿಟಿ ಜೋಡಿಗೆ ಕೊವಿಡ್​-19 ಪಾಸಿಟಿವ್​ ಆಗಿಲ್ಲ. ಬದಲಿಗೆ, ಕೊರೊನಾದಿಂದಾಗಿ ಮುಂಬೈನಲ್ಲಿ ಆಗಿರುವ ಜನತಾ ಕರ್ಫ್ಯೂನಿಂದ ತಪ್ಪಿಸಿಕೊಳ್ಳಲು ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ. ಅತಿ ಅವಶ್ಯಕ ಕೆಲಸಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾ ಚಿತ್ರೀಕರಣದ ಮೇಲೂ ನಿರ್ಬಂಧ ಹೇರಲಾಗಿದೆ. ಹಾಗಾಗಿ ಈ ಸಮಯದಲ್ಲಿ ದೀಪಿಕಾ-ರಣವೀರ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವ ಅನಿವಾರ್ಯತೆ ಎದುರಾಗಿದೆ.

ಮುಂಬೈನಲ್ಲಿ ಕರ್ಫ್ಯೂ ಸಂದರ್ಭವನ್ನು ತಪ್ಪಿಸಿಕೊಳ್ಳಲು ದೀಪಿಕಾ ಮತ್ತು ರಣವೀರ್​ ಸಿಂಗ್​ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಈ ಸ್ಟಾರ್ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕರ್ನಾಟಕದಲ್ಲಿಯೂ ಮತ್ತೆ ಲಾಕ್​ಡೌನ್​ ಆಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈ ವೇಳೆ ಬೆಂಗಳೂರಿನಲ್ಲಿ ಇಬ್ಬರೂ ಜೊತೆಯಾಗಿ ಕಾಲ ಕಳೆಯಲಿದ್ದಾರೆ. ದೀಪಿಕಾ-ರಣವೀರ್ ನಟಿಸಿರುವ ‘83’ ಸಿನಿಮಾ ಜೂ.4ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್