AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ.

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ
ರಣವೀರ್​ ಸಿಂಗ್​ - ದೀಪಿಕಾ ಪಡುಕೋಣೆ
ಮದನ್​ ಕುಮಾರ್​
| Edited By: |

Updated on: Apr 16, 2021 | 5:30 PM

Share

ನಟಿ ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನವರು. ಆದರೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕ ಬಳಿಕ ಸಿನಿಮಾ ಚಟುವಟಿಕೆಗಳ ಸಲುವಾಗಿ ಅವರು ಮುಂಬೈನಲ್ಲಿ ಹೆಚ್ಚಾಗಿ ವಾಸಿಸಲು ಆರಂಭಿಸಿದರು. ನಟ ರಣವೀರ್​ ಸಿಂಗ್ ಜೊತೆ ಮದುವೆ ಆದ ಬಳಿಕ ಅಲ್ಲಿಯೇ ಸೆಟ್ಲ್​ ಆದರು. ಆದರೆ ಈಗ ಅವರು ರಾತ್ರೋ ರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನೇಕ ಬಗೆಯ ಗುಸುಗುಸು ಹರಿದಾಡುತ್ತಿದೆ. ಈ ಸ್ಟಾರ್​ ದಂಪತಿ ಯಾಕೆ ಧಿಡೀರ್​ ಅಂತ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದೆ ಎಂಬ ಬಗ್ಗೆ ಕೆಲವೆಡೆ ವರದಿ ಆಗಿದೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಇತ್ತೀಚೆಗೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀಗೆ ಏಕಾಏಕಿ ವಾಣಿಜ್ಯ ನಗರಿ ಬಿಟ್ಟು ಉದ್ಯಾನ ನಗರಿಯತ್ತ ಪ್ರಯಾಣ ಬೆಳೆಸಿದ್ದಕ್ಕೆ ಕೊರೊನಾ ವೈರಸ್​ ಕಾರಣ ಎನ್ನಲಾಗುತ್ತಿದೆ! ಹಾಗಂತ ಈ ಸೆಲೆಬ್ರಿಟಿ ಜೋಡಿಗೆ ಕೊವಿಡ್​-19 ಪಾಸಿಟಿವ್​ ಆಗಿಲ್ಲ. ಬದಲಿಗೆ, ಕೊರೊನಾದಿಂದಾಗಿ ಮುಂಬೈನಲ್ಲಿ ಆಗಿರುವ ಜನತಾ ಕರ್ಫ್ಯೂನಿಂದ ತಪ್ಪಿಸಿಕೊಳ್ಳಲು ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿ ಹರಡುತ್ತಿದೆ. ಮುಂಬೈ ಮಹಾನಗರದಲ್ಲೂ ಕೊವಿಡ್​-19 ಹಾವಳಿ ಮಿತಿ ಮೀರುತ್ತಿದೆ. ಅದನ್ನು ನಿಯಂತ್ರಿಸಲು ಮಹಾರಾಷ್ಟ್ರ ಸರ್ಕಾರ 15 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ. ಅತಿ ಅವಶ್ಯಕ ಕೆಲಸಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾ ಚಿತ್ರೀಕರಣದ ಮೇಲೂ ನಿರ್ಬಂಧ ಹೇರಲಾಗಿದೆ. ಹಾಗಾಗಿ ಈ ಸಮಯದಲ್ಲಿ ದೀಪಿಕಾ-ರಣವೀರ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವ ಅನಿವಾರ್ಯತೆ ಎದುರಾಗಿದೆ.

ಮುಂಬೈನಲ್ಲಿ ಕರ್ಫ್ಯೂ ಸಂದರ್ಭವನ್ನು ತಪ್ಪಿಸಿಕೊಳ್ಳಲು ದೀಪಿಕಾ ಮತ್ತು ರಣವೀರ್​ ಸಿಂಗ್​ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಈ ಸ್ಟಾರ್ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕರ್ನಾಟಕದಲ್ಲಿಯೂ ಮತ್ತೆ ಲಾಕ್​ಡೌನ್​ ಆಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈ ವೇಳೆ ಬೆಂಗಳೂರಿನಲ್ಲಿ ಇಬ್ಬರೂ ಜೊತೆಯಾಗಿ ಕಾಲ ಕಳೆಯಲಿದ್ದಾರೆ. ದೀಪಿಕಾ-ರಣವೀರ್ ನಟಿಸಿರುವ ‘83’ ಸಿನಿಮಾ ಜೂ.4ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?