AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ಸಿಂಗ್​ಗೆ ಗಂಡು ಮಗು ಬೇಕೋ ಅಥವಾ ಹೆಣ್ಣು ಮಗು? ನಟನ ಉತ್ತರ ಏನು?

ದೀಪಿಕಾ ಪಡುಕೋಣೆ ಅವರು 2024ರ ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಫೆಬ್ರವರಿಯಲ್ಲಿ ಅವರು ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ರಿವೀಲ್ ಮಾಡಿದ್ದಾರೆ. ರಣವೀರ್ ಮಗುವಿನ ಬಗ್ಗೆ ಹೇಳಿದ್ದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ ಗಂಡು ಮಗು ಬೇಕೆ ಅಥವಾ ಹೆಣ್ಣು ಮಗುವೇ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ್ದರು.  

ರಣವೀರ್ ಸಿಂಗ್​ಗೆ ಗಂಡು ಮಗು ಬೇಕೋ ಅಥವಾ ಹೆಣ್ಣು ಮಗು? ನಟನ ಉತ್ತರ ಏನು?
ರಣವೀರ್​-ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 08, 2024 | 8:47 AM

Share

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ಪಾಲಕರಾಗುತ್ತಿರುವ ಖುಷಿಯಲ್ಲಿದ್ದಾರೆ. ದೀಪಿಕಾ ಪಡುಕೋಣೆ ಅವರು 2024ರ ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಫೆಬ್ರವರಿಯಲ್ಲಿ ಅವರು ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ರಿವೀಲ್ ಮಾಡಿದ್ದಾರೆ. ಮದುವೆ ಆಗಿ ಹಲವು ವರ್ಷಗಳ ಬಳಿಕ ಅವರು ಫ್ಯಾನ್ಸ್​ಗೆ ಸಿಹಿಸುದ್ದಿ ನೋಡಿದ್ದಾರೆ. ಆಗಾಗ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈಗ ರಣವೀರ್ ಮಗುವಿನ ಬಗ್ಗೆ ಹೇಳಿದ್ದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರ ಗಂಡು ಮಗು ಬೇಕೆ ಅಥವಾ ಹೆಣ್ಣು ಮಗುವೇ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ್ದರು.

ರಣವೀರ್ ಸಿಂಗ್ ಅವರು ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಪ್ರಮೋಷನ್ ವೇಳೆ ಅವರಿಗೆ ಗಂಡು ಮಗು ಬೇಕೆ ಅಥವಾ ಹೆಣ್ಣು ಮಗುವೇ ಎಂದು ಕೇಳಲಾಯಿತು. ಆ ಬಗ್ಗೆ ರಣವೀರ್ ಸಿಂಗ್ ಮಾತನಾಡಿದ್ದರು. ‘ಅದು ನನ್ನ ಆಯ್ಕೆ ಅಲ್ಲ’ ಎಂದಿದ್ದಾರೆ. ಅಂದರೆ ಅದು ನನ್ನ ಕೈಯಲ್ಲಿ ಇಲ್ಲ ಎಂದಿದ್ದಾರೆ.

ಮತ್ತೊಂದು ಸಂದರ್ಶನದಲ್ಲಿ ಅವರು ಹೆಣ್ಣು ಮಗು ಬೇಕು ಎಂದಿದ್ದರು. ‘ದೀಪಿಕಾ ರೀತಿಯ ಹೆಣ್ಣು ಮಗಳು ನನಗೆ ಬೇಕು’ ಎಂದು ರಣವೀರ್ ಹೇಳಿದ್ದರು. ರಣವೀರ್ ಸಿಂಗ್ ಅವರು ದೀಪಿಕಾನ ಅತಿಯಾಗಿ ಪ್ರೀತಿಸುತ್ತಾರೆ. ಸಾರ್ವಜನಿಕವಾಗಿ ಇದನ್ನು ಅವರು ತೋರಿಸುತ್ತಾರೆ. ‘ಕಾಫಿ ವಿತ್ ಕರಣ್’ ಶೋನಲ್ಲಿ ರಣವೀರ್ ಹಾಗೂ ದೀಪಿಕಾ ಕಿತ್ತಾಡಿಕೊಂಡಿದ್ದರು. ಇದರಿಂದ ಅವರು ಬೇರೆ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್-ದೀಪಿಕಾ ಪಡುಕೋಣೆ ಪೈಕಿ ಶ್ರೀಮಂತರು ಯಾರು? ಇಲ್ಲಿದೆ ಅಚ್ಚರಿಯ ವಿಚಾರ

ದೀಪಿಕಾ ಪಡುಕೋಣೆ ಅವರು ‘ಕಲ್ಕಿ 2898 ಎಡಿ’ ಸಿನಿಮಾ ಗೆಲುವಿನ ಖುಷಿಯಲ್ಲಿದ್ದಾರೆ. ದೇವ ಕಲ್ಕಿಯನ್ನು ಗರ್ಭದಲ್ಲಿ ಇರಿಸಿಕೊಳ್ಳುವ ತಾಯಿ ಆಗಿ ದೀಪಿಕಾ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಅವರು ರೋಹಿತ್ ಶೆಟ್ಟಿ ನಟನೆಯ ‘ಸಿಂಗಂ ಅಗೇನ್’ ಇನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಕೂಡ ನಟಿಸುತ್ತಿದ್ದರೆ ಅನ್ನೋದು ವಿಶೇಷ. ರಣವೀರ್ ಸಿಂಗ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಡಾನ್ 3’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಡಾನ್’ ಸರಣಿಯಲ್ಲಿ ಇಷ್ಟು ವರ್ಷ ಶಾರುಖ್ ಖಾನ್ ನಟಿಸಿದ್ದರು. ಈಗ ಆ ಸ್ಥಾನವನ್ನು ರಣವೀರ್ ತುಂಬುತ್ತಿದ್ದಾರೆ. ಹೀಗಾಗಿ ಅವರಿಗೆ ಹೆಚ್ಚು ಚಾಲೆಂಜ್ ಇದೆ. ‘ಶಕ್ತಿಮಾನ್’ ಸಿನಿಮಾ ಕೂಡ ಅವರ ಕೈಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ