AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ
ರಣವೀರ್​ ಸಿಂಗ್​
TV9 Web
| Edited By: |

Updated on:Jun 30, 2021 | 8:14 PM

Share

ನಟ ರಣವೀರ್​ ಸಿಂಗ್​ ಆಗಾಗ ವಿಚಿತ್ರ ಉಡುಗೆ ತೊಟ್ಟು ಸುದ್ದಿಯಾಗುತ್ತಾರೆ. ಈ ಮೊದಲು ಅನೇಕ ಬಾರಿ ಚಿತ್ರವಿಚಿತ್ರ ಬಟ್ಟೆಗಳನ್ನು ತೊಟ್ಟು ಚರ್ಚೆಯಾಗಿದ್ದರು. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಚರ್ಚೆಗೆ ಒಳಗಾಗಿದ್ದಾರೆ. ಅವರು ಭಿನ್ನ ರೀತಿಯ ಬಟ್ಟೆ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ಅನೇಕರು ನಕ್ಕಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಬ್ರ್ಯಾಂಡ್ ಒಂದರ ಪ್ರಮೋಷನ್​ಗೆ ರಣವೀರ್​ ಸಿಂಗ್​ ಈ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿದ ನಟಿ ಆಲಿಯಾ ಭಟ್​, ಗಾಯಕ ಹಿಮೇಶ್​ ರೇಷಮಿಯಾ, ಜೋಯಾ ಅಖ್ತರ್​ ಸೇರಿ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ರಣವೀರ್​ ತಲೆಯ ಮೇಲಿರುವ ಕೂದಲು ಹಾಗೂ ಕತ್ತಿನ ಮೇಲಿರುವ ಚಿನ್ನ ಅಸಲಿಯೋ ಅಥವಾ ನಕಲಿಯೋ ಎಂದು ಪ್ರಶ್ನೆ ಮಾಡಿದ್ದಾರೆ. ರಣವೀರ್​ ಸಿಂಗ್​ ಈ ಫೋಟೋ ಸಾಕಷ್ಟು ಟ್ರೋಲ್​ ಆಗುತ್ತಿದೆ.

ಇನ್ನು, ಅಡ್ವೆಂಚರ್​​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಬೇರ್​ ಗ್ರಿಲ್ಸ್​ ಜತೆ ರಣವೀರ್​ ಸಿಂಗ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬೇರ್​ ಗ್ರಿಲ್ಸ್​ ನಡೆಸುವ ಸಾಹಸ ಶೋಗಳಲ್ಲಿ ಈ ಮೊದಲು ನಟ ಅಕ್ಷಯ್​ ಕುಮಾರ್​, ರಜನಿಕಾಂತ್​ ಮತ್ತು ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಈ ಬಾರಿ ರಣವೀರ್​ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Published On - 8:14 pm, Wed, 30 June 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು