AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ
ರಣವೀರ್​ ಸಿಂಗ್​
TV9 Web
| Edited By: |

Updated on:Jun 30, 2021 | 8:14 PM

Share

ನಟ ರಣವೀರ್​ ಸಿಂಗ್​ ಆಗಾಗ ವಿಚಿತ್ರ ಉಡುಗೆ ತೊಟ್ಟು ಸುದ್ದಿಯಾಗುತ್ತಾರೆ. ಈ ಮೊದಲು ಅನೇಕ ಬಾರಿ ಚಿತ್ರವಿಚಿತ್ರ ಬಟ್ಟೆಗಳನ್ನು ತೊಟ್ಟು ಚರ್ಚೆಯಾಗಿದ್ದರು. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಚರ್ಚೆಗೆ ಒಳಗಾಗಿದ್ದಾರೆ. ಅವರು ಭಿನ್ನ ರೀತಿಯ ಬಟ್ಟೆ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ಅನೇಕರು ನಕ್ಕಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಬ್ರ್ಯಾಂಡ್ ಒಂದರ ಪ್ರಮೋಷನ್​ಗೆ ರಣವೀರ್​ ಸಿಂಗ್​ ಈ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿದ ನಟಿ ಆಲಿಯಾ ಭಟ್​, ಗಾಯಕ ಹಿಮೇಶ್​ ರೇಷಮಿಯಾ, ಜೋಯಾ ಅಖ್ತರ್​ ಸೇರಿ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ರಣವೀರ್​ ತಲೆಯ ಮೇಲಿರುವ ಕೂದಲು ಹಾಗೂ ಕತ್ತಿನ ಮೇಲಿರುವ ಚಿನ್ನ ಅಸಲಿಯೋ ಅಥವಾ ನಕಲಿಯೋ ಎಂದು ಪ್ರಶ್ನೆ ಮಾಡಿದ್ದಾರೆ. ರಣವೀರ್​ ಸಿಂಗ್​ ಈ ಫೋಟೋ ಸಾಕಷ್ಟು ಟ್ರೋಲ್​ ಆಗುತ್ತಿದೆ.

ಇನ್ನು, ಅಡ್ವೆಂಚರ್​​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಬೇರ್​ ಗ್ರಿಲ್ಸ್​ ಜತೆ ರಣವೀರ್​ ಸಿಂಗ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬೇರ್​ ಗ್ರಿಲ್ಸ್​ ನಡೆಸುವ ಸಾಹಸ ಶೋಗಳಲ್ಲಿ ಈ ಮೊದಲು ನಟ ಅಕ್ಷಯ್​ ಕುಮಾರ್​, ರಜನಿಕಾಂತ್​ ಮತ್ತು ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಈ ಬಾರಿ ರಣವೀರ್​ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Published On - 8:14 pm, Wed, 30 June 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ