Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ
ರಣವೀರ್​ ಸಿಂಗ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 8:14 PM

ನಟ ರಣವೀರ್​ ಸಿಂಗ್​ ಆಗಾಗ ವಿಚಿತ್ರ ಉಡುಗೆ ತೊಟ್ಟು ಸುದ್ದಿಯಾಗುತ್ತಾರೆ. ಈ ಮೊದಲು ಅನೇಕ ಬಾರಿ ಚಿತ್ರವಿಚಿತ್ರ ಬಟ್ಟೆಗಳನ್ನು ತೊಟ್ಟು ಚರ್ಚೆಯಾಗಿದ್ದರು. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಚರ್ಚೆಗೆ ಒಳಗಾಗಿದ್ದಾರೆ. ಅವರು ಭಿನ್ನ ರೀತಿಯ ಬಟ್ಟೆ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ಅನೇಕರು ನಕ್ಕಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಬ್ರ್ಯಾಂಡ್ ಒಂದರ ಪ್ರಮೋಷನ್​ಗೆ ರಣವೀರ್​ ಸಿಂಗ್​ ಈ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿದ ನಟಿ ಆಲಿಯಾ ಭಟ್​, ಗಾಯಕ ಹಿಮೇಶ್​ ರೇಷಮಿಯಾ, ಜೋಯಾ ಅಖ್ತರ್​ ಸೇರಿ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ರಣವೀರ್​ ತಲೆಯ ಮೇಲಿರುವ ಕೂದಲು ಹಾಗೂ ಕತ್ತಿನ ಮೇಲಿರುವ ಚಿನ್ನ ಅಸಲಿಯೋ ಅಥವಾ ನಕಲಿಯೋ ಎಂದು ಪ್ರಶ್ನೆ ಮಾಡಿದ್ದಾರೆ. ರಣವೀರ್​ ಸಿಂಗ್​ ಈ ಫೋಟೋ ಸಾಕಷ್ಟು ಟ್ರೋಲ್​ ಆಗುತ್ತಿದೆ.

ಇನ್ನು, ಅಡ್ವೆಂಚರ್​​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಬೇರ್​ ಗ್ರಿಲ್ಸ್​ ಜತೆ ರಣವೀರ್​ ಸಿಂಗ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬೇರ್​ ಗ್ರಿಲ್ಸ್​ ನಡೆಸುವ ಸಾಹಸ ಶೋಗಳಲ್ಲಿ ಈ ಮೊದಲು ನಟ ಅಕ್ಷಯ್​ ಕುಮಾರ್​, ರಜನಿಕಾಂತ್​ ಮತ್ತು ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಈ ಬಾರಿ ರಣವೀರ್​ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Published On - 8:14 pm, Wed, 30 June 21

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ