AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ
ರಣವೀರ್​ ಸಿಂಗ್​
TV9 Web
| Edited By: |

Updated on:Jun 30, 2021 | 8:14 PM

Share

ನಟ ರಣವೀರ್​ ಸಿಂಗ್​ ಆಗಾಗ ವಿಚಿತ್ರ ಉಡುಗೆ ತೊಟ್ಟು ಸುದ್ದಿಯಾಗುತ್ತಾರೆ. ಈ ಮೊದಲು ಅನೇಕ ಬಾರಿ ಚಿತ್ರವಿಚಿತ್ರ ಬಟ್ಟೆಗಳನ್ನು ತೊಟ್ಟು ಚರ್ಚೆಯಾಗಿದ್ದರು. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಚರ್ಚೆಗೆ ಒಳಗಾಗಿದ್ದಾರೆ. ಅವರು ಭಿನ್ನ ರೀತಿಯ ಬಟ್ಟೆ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ಅನೇಕರು ನಕ್ಕಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಬ್ರ್ಯಾಂಡ್ ಒಂದರ ಪ್ರಮೋಷನ್​ಗೆ ರಣವೀರ್​ ಸಿಂಗ್​ ಈ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿದ ನಟಿ ಆಲಿಯಾ ಭಟ್​, ಗಾಯಕ ಹಿಮೇಶ್​ ರೇಷಮಿಯಾ, ಜೋಯಾ ಅಖ್ತರ್​ ಸೇರಿ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ರಣವೀರ್​ ತಲೆಯ ಮೇಲಿರುವ ಕೂದಲು ಹಾಗೂ ಕತ್ತಿನ ಮೇಲಿರುವ ಚಿನ್ನ ಅಸಲಿಯೋ ಅಥವಾ ನಕಲಿಯೋ ಎಂದು ಪ್ರಶ್ನೆ ಮಾಡಿದ್ದಾರೆ. ರಣವೀರ್​ ಸಿಂಗ್​ ಈ ಫೋಟೋ ಸಾಕಷ್ಟು ಟ್ರೋಲ್​ ಆಗುತ್ತಿದೆ.

ಇನ್ನು, ಅಡ್ವೆಂಚರ್​​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಬೇರ್​ ಗ್ರಿಲ್ಸ್​ ಜತೆ ರಣವೀರ್​ ಸಿಂಗ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬೇರ್​ ಗ್ರಿಲ್ಸ್​ ನಡೆಸುವ ಸಾಹಸ ಶೋಗಳಲ್ಲಿ ಈ ಮೊದಲು ನಟ ಅಕ್ಷಯ್​ ಕುಮಾರ್​, ರಜನಿಕಾಂತ್​ ಮತ್ತು ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಈ ಬಾರಿ ರಣವೀರ್​ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Published On - 8:14 pm, Wed, 30 June 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ