ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ.

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ
ರಣವೀರ್​ ಸಿಂಗ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 8:14 PM

ನಟ ರಣವೀರ್​ ಸಿಂಗ್​ ಆಗಾಗ ವಿಚಿತ್ರ ಉಡುಗೆ ತೊಟ್ಟು ಸುದ್ದಿಯಾಗುತ್ತಾರೆ. ಈ ಮೊದಲು ಅನೇಕ ಬಾರಿ ಚಿತ್ರವಿಚಿತ್ರ ಬಟ್ಟೆಗಳನ್ನು ತೊಟ್ಟು ಚರ್ಚೆಯಾಗಿದ್ದರು. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಚರ್ಚೆಗೆ ಒಳಗಾಗಿದ್ದಾರೆ. ಅವರು ಭಿನ್ನ ರೀತಿಯ ಬಟ್ಟೆ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ಅನೇಕರು ನಕ್ಕಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ಕೂದಲು. ವಿಚಿತ್ರ ಬಟ್ಟೆ, ಅದಕ್ಕೂ ವಿಚಿತ್ರವಾದ ಕನ್ನಡಕ,​ ಬ್ಯಾಗ್​. ಕತ್ತಿಗೆ ಒಂದಷ್ಟು ಚಿನ್ನ. ಒಮ್ಮೆ ನೋಡಿದವರಿಗೆ ಇದು ರಣವೀರ್​ ಸಿಂಗ್​ ಅವರೇನಾ ಎಂದು ಅನುಮಾನ ಮೂಡುವಷ್ಟು ವಿಚಿತ್ರವಾಗಿ ಉಡುಗೆ ತೊಟ್ಟು ​ಕಾಣಿಸಿಕೊಂಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ.

ಬ್ರ್ಯಾಂಡ್ ಒಂದರ ಪ್ರಮೋಷನ್​ಗೆ ರಣವೀರ್​ ಸಿಂಗ್​ ಈ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿದ ನಟಿ ಆಲಿಯಾ ಭಟ್​, ಗಾಯಕ ಹಿಮೇಶ್​ ರೇಷಮಿಯಾ, ಜೋಯಾ ಅಖ್ತರ್​ ಸೇರಿ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ರಣವೀರ್​ ತಲೆಯ ಮೇಲಿರುವ ಕೂದಲು ಹಾಗೂ ಕತ್ತಿನ ಮೇಲಿರುವ ಚಿನ್ನ ಅಸಲಿಯೋ ಅಥವಾ ನಕಲಿಯೋ ಎಂದು ಪ್ರಶ್ನೆ ಮಾಡಿದ್ದಾರೆ. ರಣವೀರ್​ ಸಿಂಗ್​ ಈ ಫೋಟೋ ಸಾಕಷ್ಟು ಟ್ರೋಲ್​ ಆಗುತ್ತಿದೆ.

ಇನ್ನು, ಅಡ್ವೆಂಚರ್​​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಬೇರ್​ ಗ್ರಿಲ್ಸ್​ ಜತೆ ರಣವೀರ್​ ಸಿಂಗ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬೇರ್​ ಗ್ರಿಲ್ಸ್​ ನಡೆಸುವ ಸಾಹಸ ಶೋಗಳಲ್ಲಿ ಈ ಮೊದಲು ನಟ ಅಕ್ಷಯ್​ ಕುಮಾರ್​, ರಜನಿಕಾಂತ್​ ಮತ್ತು ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಈ ಬಾರಿ ರಣವೀರ್​ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Published On - 8:14 pm, Wed, 30 June 21

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ