Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿ ಪರದೆಯಲ್ಲಿ ಉತ್ತುಂಗದಲ್ಲಿರುವಾಗಲೇ ಕಿರುತೆರೆಗೆ ಕಾಲಿಟ್ಟ ನಟ ರಣವೀರ್​ ಸಿಂಗ್​

ಕಲರ್ಸ್​ನಲ್ಲಿ ಪ್ರಸಾರವಾಗುವ ‘ದಿ ಬಿಗ್​ ಪಿಕ್ಚರ್ಸ್​’ ಕ್ವಿಜ್​ ಶೋಅನ್ನು ರಣವೀರ್​ ಸಿಂಗ್​ ನಡೆಸಿಕೊಡಲಿದ್ದಾರೆ. ಈ ಶೋ ವೂಟ್​ ಹಾಗೂ ಜಿಯೋ ಟಿವಿಯಲ್ಲೂ ಪ್ರಸಾರವಾಗಲಿದೆ.

ಬೆಳ್ಳಿ ಪರದೆಯಲ್ಲಿ ಉತ್ತುಂಗದಲ್ಲಿರುವಾಗಲೇ ಕಿರುತೆರೆಗೆ ಕಾಲಿಟ್ಟ ನಟ ರಣವೀರ್​ ಸಿಂಗ್​
ರಣವೀರ್​ ಸಿಂಗ್
Follow us
TV9 Web
| Updated By: ಮದನ್​ ಕುಮಾರ್​

Updated on: Jul 03, 2021 | 4:17 PM

ಬೆಳ್ಳಿ ಪರದೆಯಲ್ಲಿ ಉತ್ತುಂಗಕ್ಕೆ ತೆರಳಿದ ನಟ-ನಟಿಯರಿಗೆ ಕಿರುತೆರೆ ಶೋ ನಡೆಸಿಕೊಡೋಕೆ ಬೇಡಿಕೆ ಬರುತ್ತದೆ. ಕಿಚ್ಚ ಸುದೀಪ್​, ಪುನೀತ್ ರಾಜ್​ಕುಮಾರ್​, ಸಲ್ಮಾನ್​ ಖಾನ್, ಅಮಿತಾಭ್​ ಬಚ್ಚನ್​,​ ಕಮಲ್​ ಹಾಸನ್​ ಸೇರಿ ಸಾಕಷ್ಟು ನಟರು ಈಗಾಗಲೇ ಕಿರುತೆರೆಗೆ ಕಾಲಿಟ್ಟಿದ್ದಾರೆ. ಈಗ ನಟ ರಣವೀರ್​ ಸಿಂಗ್​ ಸರದಿ. ​ ಚಿತ್ರರಂಗದಲ್ಲಿ ರಣವೀರ್ ಬಹುಬೇಡಿಕೆಯ ನಟ. ಅವರ ಕೈಯಲ್ಲಿ ಸದ್ಯ ಹಲವು ಸಿನಿಮಾಗಳಿವೆ. ಹೀಗಿರುವಾಗಲೇ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಕಲರ್ಸ್​ನಲ್ಲಿ ಪ್ರಸಾರವಾಗುವ ‘ದಿ ಬಿಗ್​ ಪಿಕ್ಚರ್ಸ್​’ ಕ್ವಿಜ್​ ಶೋಅನ್ನು ರಣವೀರ್​ ಸಿಂಗ್​ ನಡೆಸಿಕೊಡಲಿದ್ದಾರೆ. ಈ ಶೋ ವೂಟ್​ ಹಾಗೂ ಜಿಯೋ ಟಿವಿಯಲ್ಲೂ ಪ್ರಸಾರವಾಗಲಿದೆ. ರಣವೀರ್​ ಸಿಂಗ್​ ಈ ಶೋನ ನಿರೂಪಣೆ ಮಾಡಲಿದ್ದಾರೆ. ಈ ಕ್ವಿಜ್​ ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ಬುದ್ಧಿಮಟ್ಟ ಮತ್ತು ವಿಶ್ಯುವಲ್​ ಮೆಮೋರಿಯನ್ನು ಪರೀಕ್ಷೆ ಮಾಡಲಾಗುತ್ತದೆ.

ಈ ಬಗ್ಗೆ ರಣವೀರ್​ ಸಿಂಗ್​ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ‘ಭಾರತೀಯ ಚಿತ್ರರಂಗ ನನಗೆ ಸಾಕಷ್ಟು ಅವಕಾಶ ನೀಡಿದೆ. ನನ್ನ ನಟನೆಯನ್ನು ತೋರಿಸೋಕೆ ನನಗೆ ಸಾಧ್ಯವಾಗಿದೆ. ಭಾರತಿಯರಿಂದ ನನಗೆ ಸಾಕಷ್ಟು ಪ್ರೀತಿ ಸಿಕ್ಕಿದೆ. ಈಗ ನಾನು ಕಲರ್ಸ್​ನ ದಿ ಬಿಗ್​ ಪಿಕ್ಚರ್ಸ್​ ಕಾರ್ಯಕ್ರಮದ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದೇನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸದ್ಯದಲ್ಲಿ ಈ ಶೋನ ಶೂಟಿಂಗ್​ ಆರಂಭಗೊಳ್ಳಲಿದೆ. ಆಗಸ್ಟ್ ವೇಳೆಗೆ ಇದು ಪ್ರಸಾರವಾಗುವ ನಿರೀಕ್ಷೆ ಇದೆ.

ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಕಬೀರ್​ ಖಾನ್​ ನಿರ್ದೇಶನದ ಈ ಸಿನಿಮಾ 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಹೇಳಲಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಪಿಲ್​ ದೇವ್​ ಪಾತ್ರಕ್ಕೆ ರಣವೀರ್​ ಸಿಂಗ್​ ಲುಕ್​ ಸರಿಯಾಗಿ ಹೊಂದುತ್ತಿದೆ. ಇದಲ್ಲದೆ, ‘ಸೂರ್ಯವಂಶಿ’ ಸಿನಿಮಾದಲ್ಲಿ ರಣವೀರ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸರ್ಕಸ್’​ ಹಾಗೂ ‘ತಖ್ತ್’​ ಸಿನಿಮಾಗಳಲ್ಲೂ ರಣವೀರ್ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ:

ಉದ್ದನೆಯ ಕೂದಲು, ವಿಚಿತ್ರ ಬಟ್ಟೆ, ಅರ್ಧ ಕೆಜಿ ಚಿನ್ನ; ಟ್ರೋಲ್​ ಆದ ರಣವೀರ್​ ಸಿಂಗ್​ ಹೊಸ ಅವತಾರ

ಸಾರ್ವಜನಿಕವಾಗಿ ಅಭಿಮಾನಿಗಳಿಗೆ ಕಾಣಿಸಿಕೊಂಡ ರಣವೀರ್​ ಸಿಂಗ್​; ಇಲ್ಲೊಂದು ಅಚ್ಚರಿಯ ವಿಚಾರ ಗಮನಿಸಿದ್ರಾ?

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ