AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷ ಕಿರಿಯ ನಟಿಯ ಜೊತೆ ರಣವೀರ್ ಸಿಂಗ್ ರೊಮ್ಯಾನ್ಸ್; ಕೇಳಿಬಂತು ಟೀಕೆ

Sara Arjun: ರಣವೀರ್ ಸಿಂಗ್ ಅವರ ಹೊಸ ಚಿತ್ರ 'ಧುರಂಧರ್' ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ತಮಗಿಂತ 20 ವರ್ಷ ಕಿರಿಯ ನಟಿ ಸಾರಾ ಅರ್ಜುನ್ ಜೊತೆ ನಟಿಸಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಾರಾ ಅವರು 'ಪೊನ್ನಿಯಿನ್ ಸೆಲ್ವನ್'ನಲ್ಲೂ ನಟಿಸಿದ್ದಾರೆ.

20 ವರ್ಷ ಕಿರಿಯ ನಟಿಯ ಜೊತೆ ರಣವೀರ್ ಸಿಂಗ್ ರೊಮ್ಯಾನ್ಸ್; ಕೇಳಿಬಂತು ಟೀಕೆ
ರಣವೀರ್-ಸಾರಾ
ರಾಜೇಶ್ ದುಗ್ಗುಮನೆ
|

Updated on:Jul 07, 2025 | 11:54 AM

Share

ರಣವೀರ್ ಸಿಂಗ್ (Ranveer Singh) ಅವರು ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಇದಕ್ಕೆ ಸಿನಿಮಾ ಬದುಕು ಹಾಗೂ ಅವರ ವೈಯಕ್ತಿಕ ಜೀವನ ಎರಡೂ ಕಾರಣ. ಈಗ ರಣವೀರ್ ಸಿಂಗ್ ಅವರ ಹೆಸರು ಸಾಕಷ್ಟು ಚರ್ಚೆಯಲ್ಲಿ ಇದೆ. ಅವರ ನಟನೆಯ ‘ಧುರಂಧರ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಅವರು ತಮಗಿಂತ 20 ವರ್ಷ ಸಣ್ಣ ನಟಿಯ ಜೊತೆ ರೊಮ್ಯಾನ್ಸ್ ಮಾಡಿರೋದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

ರಣವೀರ್ ಸಿಂಗ್ ಅವರು ‘ಧುರಂದರ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ‘ಉರಿ’ ಖ್ಯಾತಿಯ ಆದಿತ್ಯ ಧಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಸಾರಾ ಅರ್ಜುನ್ ನಾಯಕಿ. ಅವರಿಗೆ ಈಗಿನ್ನೂ 20 ವರ್ಷ. ರಣವೀರ್ ಸಿಂಗ್​ಗೆ 40 ವರ್ಷ. ಇಬ್ಬರ ಮಧ್ಯೆ 20 ವರ್ಷಗಳ ವಯಸ್ಸಿನ ಅಂತರ ಇದೆ. ಮಗಳ ವಯಸ್ಸಿನವರ ಜೊತೆ ರೊಮ್ಯಾನ್ಸ್ ಮಾಡೋಕೆ ಹೇಗೆ ಸಾಧ್ಯ ಎಂದು ಅನೇಕರು ಕೇಳಿದ್ದಾರೆ.

ಸಾರಾ ಅವರು 2005ರ ಜೂನ್ 18ರಂದು ಜನಿಸಿದರು. ಅವರು ಹುಟ್ಟಿದ್ದು ಮುಂಬೈನಲ್ಲಿ. ತೊಟ್ಟಿಲಲ್ಲಿ ಇದ್ದಾಗಲೇ ಬಣ್ಣದ ಲೋಕದಲ್ಲಿ ಕಾಣಿಸಿಕೊಂಡರು. ಕೇವಲ 5ನೇ ವಯಸ್ಸಿಗೆ ಸಿನಿಮಾ ಲೋಕದ ಜೊತೆ ಒಳ್ಳೆಯ ನಂಟು ಬೆಳೆಯಿತು. ಆಗಲೇ ಅವರು 100ಕ್ಕೂ ಅಧಿಕ ಕಮರ್ಷಿಯಲ್​ಗಳಲ್ಲಿ ಕಾಣಿಸಿಕೊಂಡಿದ್ದರು. ವಿಕ್ರಮ್ ನಟನೆಯ ‘ದೈವ ತಿರುಮಗಳ್’ (2011) ಚಿತ್ರದಲ್ಲಿ ಸಾರಾ ಮಾಡಿದ ಪಾತ್ರ ಗಮನ ಸೆಳೆಯಿತು. ಅವರು ಹಿಂದಿಯಲ್ಲೂ ಮಿಂಚಿದರು.

ಇದನ್ನೂ ಓದಿ
Image
‘ನನಗೆ ಗಾಯತ್ರಿ ಮಂತ್ರ, ಹನುಮಾನ್ ಚಾಲೀಸ್ ಕೇಳೋದು ಇಷ್ಟ’; ಮುಸ್ಲಿಂ ನಟಿ
Image
‘ಬಂಧನ’ ಸಿನಿಮಾ ತಡೆಯಲು ಬ್ಲೇಡ್ ಹೊಡೆದು, ಖಾರದ ಪುಡಿ ಎರಚಿದ್ದರು
Image
‘ಟಾಕ್ಸಿಕ್’ ಚಿತ್ರದಿಂದ ರವಿ ಬಸ್ರೂರು ಔಟ್? ರಾಕ್​ಸ್ಟಾರ್​ಗೆ ಮಣೆ?  
Image
ಮತ್ತೊಂದು ‘ಅನಿಮಲ್’; ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ರಕ್ಕಸ ಅವತಾರ

ಇದನ್ನೂ ಓದಿ: ಬಾಲಿವುಡ್​ನಲ್ಲಿ ಮತ್ತೊಂದು ‘ಅನಿಮಲ್’; ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ರಕ್ಕಸ ಅವತಾರ

ಈ ಮೊದಲು ರಿಲೀಸ್ ಆಗಿ ಸೂಪರ್ ಹಿಟ್ ಆದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದಲ್ಲಿ ಸಾರಾ ನಟಿಸಿದ್ದರು. ಸಾರಾ 19 ವರ್ಷದಲ್ಲಿದ್ದಾಗ ಅವರಿಗೆ ‘ಧುರಂಧರ್’ ಸಿನಿಮಾ ಆಫರ್ ಬಂತು. ರಣವೀರ್ ಎದುರು ಅವರು ನಟಿಸುತ್ತಿದ್ದಾರೆ. ನಾಯಕಿ ಆಗಿ ಅವರಿಗೆ ಇದು ಮೊದಲ ಚಿತ್ರ. ಸಾರಾ ಅವರು ರಾಜ್ ಅರ್ಜುನ್ ಮಗಳು. ತಂದೆಯ ಕಾರಣದಿಂದ ಅವರಿಗೆ ಸುಲಭದಲ್ಲಿ ಬಣ್ಣದ ಲೋಕದಲ್ಲಿ ನಟಿಸೋ ಅವಕಾಶ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:50 am, Mon, 7 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು