AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ನಿರ್ದೇಶಕನ ವಿರುದ್ಧ ನಟಿಯಿಂದ ಅತ್ಯಾಚಾರ ಪ್ರಕರಣ ದಾಖಲು

ಪ್ರಿಯಾ ಪ್ರಕಾಶ್ ವಾರಿಯರ್ ಅನ್ನು ಸ್ಟಾರ್ ಅನ್ನಾಗಿ ಮಾಡಿದ ‘ಒರು ಅಡಾರ್ ಲವ್’ ಸಿನಿಮಾ ನಿರ್ದೇಶಕ ಓಮರ್ ಲುಲು ವಿರುದ್ಧ ಯುವನಟಿಯೊಬ್ಬರು ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಆರೋಪಗಳಿಗೆ ಪ್ರತಿಕ್ರಿಯೆಯನ್ನು ನಿರ್ದೇಶಕ ನೀಡಿದ್ದಾರೆ.

ಮಲಯಾಳಂ ನಿರ್ದೇಶಕನ ವಿರುದ್ಧ ನಟಿಯಿಂದ ಅತ್ಯಾಚಾರ ಪ್ರಕರಣ ದಾಖಲು
ಮಂಜುನಾಥ ಸಿ.
|

Updated on: May 29, 2024 | 5:40 PM

Share

ಒರು ಅಡಾರ್ ಲವ್’ (Oru Adar Love) ಸೇರಿದಂತೆ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಲಯಾಳಂ ನಿರ್ದೇಶಕ ಒಮರ್ ಲುಲು ವಿರುದ್ಧ ನಟಿಯೊಬ್ಬರು ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಎರ್ನಾಕುಲಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವನಟಿ, ನಿರ್ದೇಶಕ ಒಮರ್ ವಿರುದ್ಧ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಪ್ರಕರಣವನ್ನು ಇದೀಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ನಿರ್ದೇಶಕ ಒಮರ್ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಜಾರಿಯಲ್ಲಿದೆ.

ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ನನ್ನ ವಿರುದ್ಧ ಹಲವು ಬಾರಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಮಾಡಲಾಗಿದೆ ಎಂದು ಯುವನಟಿ ನಿರ್ದೇಶಕ ಒಮರ್ ವಿರುದ್ಧ ಆರೋಪ ಮಾಡಿದ್ದಾರೆ. ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ನಿರ್ದೇಶಕ ಒಮರ್ ಲುಲು, ‘ಇದು ಬ್ಲಾಕ್ ಮೇಲ್ ಮಾಡುವ ತಂತ್ರವಷ್ಟೆ. ಆರೋಪ ಮಾಡಿ ನನ್ನ ಘನತೆ ಹಾಳು ಮಾಡುವ ಹಾಗೂ ನನ್ನಿಂದ ಹಣ ವಸೂಲಿ ಮಾಡುವುದು ಆ ನಟಿಯ ಉದ್ದೇಶ. ನನ್ನ ಈ ಹಿಂದಿನ ಸಿನಿಮಾದಲ್ಲಿ ಆ ನಟಿ ನಟಿಸಿದ್ದರು. ಈಗ ನಾನು ಹೊಸ ಸಿನಿಮಾ ಮಾಡುತ್ತಿದ್ದೇನೆ ಅದರ ಬೆನ್ನಲ್ಲೆ ಆ ನಟಿ ದೂರು ನೀಡಿದ್ದಾಳೆ. ಆಕೆಗೆ ನನ್ನ ಹೊಸ ಸಿನಿಮಾದಲ್ಲಿ ಅವಕಾಶ ಕೊಟ್ಟಿಲ್ಲವೆಂಬ ಕೋಪಕ್ಕೆ ಹೀಗೆ ಮಾಡಿದ್ದಾಳೆ’ ಎಂದಿದ್ದಾರೆ ನಿರ್ದೇಶಕ ಒಮರ್.

ಇದನ್ನೂ ಓದಿ:ಮಲಯಾಳಂ ಸೂಪರ್ ಸ್ಟಾರ್​ ಮೋಹನ್​ಲಾಲ್​ಗೆ ಟಾಸ್ಕ್ ಕೊಟ್ಟ ಕಮಲ್ ಹಾಸನ್

ಮನೋರಮಾಗೆ ನೀಡಿರುವ ಹೇಳಿಕೆಯಂತೆ, ‘ಆ ಯುವನಟಿ ಹಾಗೂ ನಾನು ಒಳ್ಳೆಯ ಗೆಳೆಯರಾಗಿದ್ದೆವು. ಕೆಲವು ಪ್ರವಾಸಗಳಿಗಳಿಗೂ ಒಟ್ಟಿಗೆ ಹೋಗಿದ್ದೆವು. ಆದರೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿ ಕಳೆದ ಆರು ತಿಂಗಳಿನಿಂದಲೂ ಒಬ್ಬರಿಗೊಬ್ಬರು ಸಂಪರ್ಕದಲ್ಲಿಲ್ಲ. ಈಗ ನಾನು ಹೊಸ ಸಿನಿಮಾ ಪ್ರಾರಂಭ ಮಾಡಿದ್ದೇನೆ. ಆ ನಟಿಗೆ ನನ್ನ ಸಿನಿಮಾದಲ್ಲಿ ಅವಕಾಶ ಕೊಟ್ಟಿಲ್ಲವಾದ್ದರಿಂದ ಈಗ ಈ ದೂರು ದಾಖಲಿಸಿದ್ದಾಳೆ ಎಂದಿದ್ದಾರೆ.

ನಿರ್ದೇಶಕ ಓಮರ್ ಲುಲು, ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾ ನಿರ್ದೇಶನ ಮಾಡಿದ್ದರು. ಆ ಸಿನಿಮಾದ ಪ್ರಿಯಾ ಪ್ರಕಾಶ್ ವಾರಿಯರ್​ರ ಒಂದು ದೃಶ್ಯ ಭಾರಿ ವೈರಲ್ ಆಗಿ, ಪ್ರಿಯಾ ರಾತ್ರೋ ರಾತ್ರಿ ಸ್ಟಾರ್ ಆಗಿದ್ದರು. ಆ ಸಿನಿಮಾದ ಬಳಿಕ ‘ಧಮಾಕಾ’ ಹೆಸರಿನ ಸಿನಿಮಾ ಮಾಡಿದ್ದರು. ಅದಾದ ಬಳಿಕ ‘ನಲ್ಲ ಸಮಯಂ’ ಹೆಸರಿನ ಸಿನಿಮಾ ಮಾಡಿದ್ದರು. ಈ ಸಿನಿಮಾನಲ್ಲಿ ಈಗ ದೂರು ನೀಡಿರುವ ನಟಿ ಸಹ ನಟಿಸಿದ್ದರು ಎನ್ನಲಾಗುತ್ತಿದೆ. ‘ನಲ್ಲ ಸಮಯಂ’ ಸಿನಿಮಾನಲ್ಲಿ ಡ್ರಗ್ಸ್ ಬಳಕೆ ಹಾಗೂ ಮದ್ಯ ಸೇವನೆಯನ್ನು ಗ್ಲೋರಿಫೈ ಮಾಡಿದ್ದಾರೆಂಬ ಆರೋಪ ನಿರ್ದೇಶಕರ ಮೇಲೆ ಕೇಳಿ ಬಂದಿತ್ತು. ಇತ್ತೀಚೆಗೆ ‘ಪವರ್ ಸ್ಟಾರ್’ ಸಿನಿಮಾ ಮಾಡುವುದಾಗಿ ಓಮರ್ ಘೋಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ