AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟೂ ಬಿರುಗಾಳಿ: ಪ್ರೇಮಂ ಸಿನಿಮಾ ನಟ ನಿವಿನ್ ಪೌಲಿ ವಿರುದ್ಧ ರೇಪ್​ ಕೇಸ್​ ದಾಖಲು

‘ಹೇಮಾ ಸಮಿತಿ ವರದಿ’ ಪ್ರಕಟವಾದ ನಂತರ ಮಲಯಾಳಂ ಚಿತ್ರರಂಗದ ಹಲವರ ಮೇಲೆ ಮೀಟೂ ಆರೋಪ ಕೇಳಿಬಂದಿದೆ. ನಟ ವಿಲಿನ್ ಪೌಲಿ ವಿರುದ್ಧ ಅತ್ಯಾಚಾರದ ಕೇಸ್ ದಾಖಲಾಗಿದೆ. ಆದರೆ ಈ ಆರೋಪ ಸಂಪೂರ್ಣ ಸುಳ್ಳು ಎಂದು ನಿವಿನ್​ ಪೌಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೀಟೂ ಅಭಿಯಾನಕ್ಕೆ ಮತ್ತೆ ಬಲ ಬಂದಿದ್ದು, ಅನೇಕ ನಟರ ಹೆಸರುಗಳು ಹೊರಬರುತ್ತಿವೆ.

ಮೀಟೂ ಬಿರುಗಾಳಿ: ಪ್ರೇಮಂ ಸಿನಿಮಾ ನಟ ನಿವಿನ್ ಪೌಲಿ ವಿರುದ್ಧ ರೇಪ್​ ಕೇಸ್​ ದಾಖಲು
ನಿವಿನ್ ಪೌಲಿ
ಮದನ್​ ಕುಮಾರ್​
|

Updated on: Sep 03, 2024 | 9:15 PM

Share

ಮಲಯಾಳಂ ಚಿತ್ರರಂಗದ ಖ್ಯಾತ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ನಟಿಯೊಬ್ಬರು ಈ ಆರೋಪ ಮಾಡಿದ್ದು, ಅದಕ್ಕೆ ಸಂಬಂಧಿಸಿದಂತೆ ಕೇಸ್​ ಕೂಡ ದಾಖಲಾಗಿದೆ. ಈ ವಿಷಯ ತಿಳಿದು ನಿವಿನ್ ಪೌಲಿ ಅಭಿಮಾನಿಗಳಿಗೆ ಶಾಕ್​ ಆಗಿದೆ. ಮಾಲಿವುಡ್​ನಲ್ಲಿ ಅನೇಕ ನಟರ ವಿರುದ್ಧ ಗಂಭೀರ ಆರೋಪ ಎದುರಾಗುತ್ತಿದೆ. ಅನೇಕ ಮಹಿಳೆಯರು ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮುಕ್ತವಾಗಿ ಮಾತನಾಡುತ್ತಿದ್ದಾರೆ. ‘ಹೇಮಾ ಸಮಿತಿ ವರದಿ’ ಪ್ರಕಟ ಆದ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಮೀಟೂ ಬಿರುಗಾಳಿ ಜೋರಾಗಿದೆ.

‘ಹೇಮಾ ಕಮಿಟಿ ವರದಿ’ಯಲ್ಲಿ ಮಲಯಾಳಂ ಚಿತ್ರರಂಗ ಕರಾಳ ಮುಖ ಬಯಲಾಗಿದೆ. ಈಗ ನಟಿಯೊಬ್ಬರು ‘ಪ್ರೇಮಂ’ ಸಿನಿಮಾದ ಖ್ಯಾತಿಯ ಹೀರೋ ನಿವಿನ್​ ಪೌಲಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾದ ಮಾತುಕಥೆ ಸಲುವಾಗಿ ದುಬೈಗೆ ತೆರಳಿದ್ದಾಗ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಕೇಸ್​ನಲ್ಲಿ ನಟ ನಿವಿನ್​ ಪೌಲಿ 6ನೇ ಆರೋಪಿ ಆಗಿದ್ದಾರೆ. ಶ್ರೇಯಾ ಎಂಬ ಮಹಿಳೆ ಎ1 ಆಗಿದ್ದಾರೆ. ನಿರ್ಮಾಪಕ ಎ.ಕೆ. ಸುನಿಲ್​ ಎ2 ಆಗಿದ್ದಾರೆ. ದೂರಿನಲ್ಲಿ ಉಲ್ಲೇಖ ಆಗಿರುವ ಪ್ರಕಾರ, ಸಿನಿಮಾದ ಮಾತುಕಥೆಗಾಗಿ ಶ್ರೇಯಾ ಎಂಬಾಕೆಯು ನಟಿಯನ್ನು ದುಬೈಗೆ ಕರೆಸಿಕೊಂಡಿದ್ದರು. ಅಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿಸಲಾಗಿದೆ.

ನಿವಿನ್​ ಪೌಲಿ ಪ್ರತಿಕ್ರಿಯೆ:

ಮಹಿಳೆ ನೀಡಿದ ದೂರಿಗೆ ಸಂಬಂಧಿಸಿದಂತೆ ನಿವಿನ್​ ಪೌಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ. ‘ಯುವತಿಯೊಬ್ಬಳ ಮೇಲೆ ನಾನು ಲೈಂಗಿಕ ದೌರ್ಜನ್ಯ ಎಸಗಿದ್ದೇನೆ ಎಂದು ಆರೋಪಿಸಿರುವ ಸುಳ್ಳು ಸುದ್ದಿ ನನ್ನ ಗಮನಕ್ಕೆ ಬಂದಿದೆ. ಇದು ಸಂಪೂರ್ಣ ಸುಳ್ಳು ಅಂತ ದಯವಿಟ್ಟು ತಿಳಿಯಿರಿ’ ಎಂದಿದ್ದಾರೆ ನಿವಿನ್​ ಪೌಲಿ.

ಇದನ್ನೂ ಓದಿ: ‘ಹೇಮಾ ಸಮಿತಿ ರೀತಿ ಟಾಲಿವುಡ್​ನಲ್ಲೂ ವರದಿ ಪ್ರಕಟವಾಗಲಿ’: ಸಮಂತಾ ಒತ್ತಾಯ

‘ನನ್ನ ಮೇಲೆ ಬಂದಿರುವ ಆರೋಪಗಳು ಆಧಾರ ರಹಿತ ಎಂದು ಸಾಬೀತು ಮಾಡುತ್ತೇನೆ ಹಾಗೂ ಅದಕ್ಕೆ ಕಾರಣ ಆದವರನ್ನು ಪತ್ತೆ ಹಚ್ಚಲು ಎಲ್ಲ ಪ್ರಯತ್ನ ಮಾಡುತ್ತೇನೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು. ಉಳಿದ ಎಲ್ಲವನ್ನೂ ಕಾನೂನಿನ ಮೂಲಕ ನೋಡಿಕೊಳ್ಳಲಾಗುವುದು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ನಿವಿನ್​ ಪೌಲಿ ಅವರು ಪೋಸ್ಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ