AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಜೊತೆ ಚಿರತೆ ಹಲ್ಲು ಪತ್ತೆ; ಖ್ಯಾತ ರ‍್ಯಾಪ್ ಸಿಂಗರ್ ವೇಡನ್ ಬಂಧನ

ವೇಡನ್ ಅಲಿಯಾನ್ ಹಿರಣ್​ದಾಸ್ ಮುರಳಿ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ಮೇಲೆ ಹಲವು ಆರೋಪಗಳು ಕೇಳಿಬಂದಿವೆ. ವೇಡನ್ ಮನೆಯಲ್ಲಿ ಚಿರತೆ ಹಲ್ಲು ಮತ್ತು ಮಾದಕ ವಸ್ತು ಪತ್ತೆ ಆಗಿದೆ. ಈ ಬಗ್ಗೆ ತನಿಖೆ ಜಾರಿಯಲ್ಲಿದೆ. ಪೊಲೀಸರು ಜಾಮೀನು ನೀಡಿದ ಬಳಿಕ ವೇಡನ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾಂಜಾ ಜೊತೆ ಚಿರತೆ ಹಲ್ಲು ಪತ್ತೆ; ಖ್ಯಾತ ರ‍್ಯಾಪ್ ಸಿಂಗರ್ ವೇಡನ್ ಬಂಧನ
Rapper Vedan
ಮದನ್​ ಕುಮಾರ್​
|

Updated on: Apr 29, 2025 | 6:20 PM

Share

ಮಲಯಾಳಂ ಚಿತ್ರರಂಗಕ್ಕೆ ಈಗ ಕೆಟ್ಟಕಾಲ. ಮಾಲಿವುಡ್​ನ ಅನೇಕ ಸೆಲೆಬ್ರಿಟಿಗಳ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಮಾದಕ ವಸ್ತು ಸೇವನೆ ಕೇಸ್​ನಲ್ಲಿ ಹಲವರನ್ನು ಅರೆಸ್ಟ್ ಮಾಡಲಾಗಿದೆ. ಒಳ್ಳೊಳ್ಳೆಯ ಸಿನಿಮಾಗಳ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಮಲಯಾಳಂ ಚಿತ್ರರಂಗ (Malayalam Film Industry) ಈಗ ಒಂದಷ್ಟು ಕೆಟ್ಟ ಕಾರಣಗಳಿಂದ ಸುದ್ದಿ ಆಗುತ್ತಿವೆ. ಇತ್ತೀಚೆಗೆ ಶೈನ್ ಟಾಮ್ ಚಾಕೋ ಅರೆಸ್ಟ್ ಆಗಿ, ಜಾಮೀನು ಪಡೆದು ಹೊರಬಂದಿದ್ದರು. ಈಗ ಮಲಯಾಳಂನ ಫೇಮಸ್ ರ‍್ಯಾಪ್ ಸಿಂಗರ್ ವೇಡನ್ (Rapper Vedan) ಅವರನ್ನು ಕೂಡ ಬಂಧಿಸಲಾಗಿದೆ.

ರ‍್ಯಾಪರ್ ವೇಡನ್ ಮೇಲೆ ಹಲವು ಆರೋಪಗಳಿವೆ. ಅವರು ಮಾದಕ ವಸ್ತು ಸೇವನೆ ಮಾಡುತ್ತಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಅಪಾರ್ಟ್​ಮೆಂಟ್ ಮೇಲೆ ದಾಳಿ ಮಾಡಿದ್ದರು. ಆಗ 5 ಗ್ರಾಂ ಗಾಂಜಾ ಹಾಗೂ ಅದನ್ನು ಸೇವಿಸಲು ಬಳಸುವ ಉಪಕರಣಗಳು ಪತ್ತೆ ಆಗಿವೆ. ಅವರ ಜೊತೆ ಇನ್ನೂ 8 ಜನರನ್ನು ಬಂಧಿಸಲಾಯಿತು. ಬಳಿಕ ವೇಡನ್ ಅವರಿಂದ ಹೇಳಿಕೆ ಪಡೆದುಕೊಂಡು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಯಿತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟ್ವಿಸ್ಟ್ ಏನೆಂದರೆ, ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ವೇಡನ್ ಅವರ ಮನೆಯಲ್ಲಿ ಚಿರತೆ ಹಲ್ಲು ಪತ್ತೆ ಆಗಿದೆ! ಈ ಹಿನ್ನೆಲೆಯಲ್ಲಿ ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ವೇಡನ್ ಹಿಂದೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಈ ಚಿರತೆ ಹಲ್ಲು ಅವರ ಬಳಿ ಹೇಗೆ ಬಂತು ಎಂದು ಪ್ರಶ್ನಿಸಲಾಗುತ್ತಿದೆ.

ಇದನ್ನೂ ಓದಿ
Image
ಡ್ರಗ್ಸ್ ಪ್ರಕರಣ ಇಬ್ಬರು ಮಲಯಾಳಂ ನಿರ್ದೇಶಕರ ಬಂಧನ
Image
ಮಲಯಾಳಂ ನಟ ಶೈಮ್ ಟಾಮ್ ಚಾಕೊಗೆ ಕೊನೆ ಎಚ್ಚರಿಕೆ
Image
ಮಲಯಾಳಂ ಚಿತ್ರರಂಗ: ಒಂದೇ ತಿಂಗಳಲ್ಲಿ 52 ಕೋಟಿ ನಷ್ಟ
Image
ಈ ವರ್ಷ 700 ಕೋಟಿ ನಷ್ಟ ಕಂಡ ಮಲಯಾಳಂ ಚಿತ್ರರಂಗ: ಗೆದ್ದ ಸಿನಿಮಾಗಳೆಷ್ಟು?

ಇದಕ್ಕೆ ಸಂಬಂಧಿಸಿದಂತೆ ವೇಡನ್ ಅವರು ಅರಣ್ಯಾಧಿಕಾರಿಗಳ ದಾರಿ ತಪ್ಪಿಸುತ್ತಿದ್ದಾರೆ. ಮೊದಲಿಗೆ ಇದನ್ನು ಥೈಲೆಂಡ್​ನಲ್ಲಿ ಖರೀದಿಸಿದ್ದಾಗಿ ಹೇಳಿದರು. ನಂತರ ಇದು ತಮಗೆ ಅಭಿಮಾನಿಗಳು ಗಿಫ್ಟ್ ನೀಡಿದ್ದು ಎಂದು ಹೇಳಿದರು. ವೇಡನ್ ಮೇಲೆ ಈ ಮೊದಲು ಕೂಡ ಆರೋಪಗಳು ಎದುರಾಗಿದ್ದರಿಂದ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಣು ಇಟ್ಟಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್​ನಲ್ಲಿ ನಟ ಶೈನ್ ಟಾಮ್ ಚಾಕೋ ಬಂಧನ; ಕೆಲವೇ ಗಂಟೆಗಳಲ್ಲಿ ಸಿಕ್ತು ಜಾಮೀನು

ಚಿರತೆ ಹಲ್ಲು ಪತ್ತೆ ಆಗಿರುವ ಬಗ್ಗೆ ಅರಣ್ಯ ಅಧಿಕಾರಿಗಳು ವರದಿ ಸಿದ್ಧಪಡಿಸಿ ಕೋರ್ಟ್​ಗೆ ನೀಡಲಿದ್ದಾರೆ. ಕೋರ್ಟ್ ನೀಡುವ ತೀರ್ಪಿನ ಆಧಾರದ ಮೇಲೆ ವೇಡನ್ ಭವಿಷ್ಯ ನಿರ್ಧಾರ ಆಗಲಿದೆ. ವೇಡನ್ ಅವರ ಮೂಲ ಹೆಸರು ಹಿರಣ್​ದಾಸ್ ಮುರಳಿ. ರ‍್ಯಾಪ್ ಸಾಂಗ್​ಗಳ ಮೂಲಕ ಅವರು ವೇಡನ್ ಎಂಬ ಹೆಸರಿನಿಂದ ಫೇಮಸ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು