‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ತೆಲುಗು ವರ್ಷನ್​ನಲ್ಲಿ ರಮ್ಯಾ ಇಲ್ಲ; ‘ಬಾಯ್ಸ್​ ಹಾಸ್ಟೆಲ್​’ನಲ್ಲಿ ರಶ್ಮಿ ಗೌತಮ್​ಗೆ ಚಾನ್ಸ್​

ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಸಿನಿಮಾವನ್ನು ‘ಚಾಯ್ ಬಿಸ್ಕೆಟ್ ಫಿಲ್ಮ್ಸ್’ ಮತ್ತು ‘ಅನ್ನಪೂರ್ಣ ಸ್ಟುಡಿಯೋಸ್’ ಸಂಸ್ಥೆಗಳು ಜಂಟಿಯಾಗಿ ಬಿಡುಗಡೆ ಮಾಡುತ್ತಿವೆ. ಆಗಸ್ಟ್ 26ರಂದು ಈ ಸಿನಿಮಾಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ. ಈ ಸಿನಿಮಾಗೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಹಾಡುಗಳು ಸೂಪರ್ ಹಿಟ್​ ಆಗಿವೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ತೆಲುಗು ವರ್ಷನ್​ನಲ್ಲಿ ರಮ್ಯಾ ಇಲ್ಲ; ‘ಬಾಯ್ಸ್​ ಹಾಸ್ಟೆಲ್​’ನಲ್ಲಿ ರಶ್ಮಿ ಗೌತಮ್​ಗೆ ಚಾನ್ಸ್​
ರಶ್ಮಿ ಗೌತಮ್​
Follow us
|

Updated on: Aug 16, 2023 | 2:32 PM

ಜುಲೈ 21ರಂದು ಬಿಡುಗಡೆ ಆದ ಕನ್ನಡದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ಸಖತ್​ ಸದ್ದು ಮಾಡಿತು. ಈಗ ಈ ಸಿನಿಮಾ ತೆಲುಗು ಮಂದಿಗೂ ಮನರಂಜನೆ ನೀಡಲು ಸಜ್ಜಾಗಿದೆ. ಈಗಾಗಲೇ ಸುದ್ದಿ ಆಗಿರುವಂತೆ ಈ ಸಿನಿಮಾ ತೆಲುಗಿಗೆ ‘ಬಾಯ್ಸ್​ ಹಾಸ್ಟೆಲ್​’ (Boys Hostel) ಹೆಸರಿನಲ್ಲಿ ಡಬ್​ ಆಗಿದೆ. ಕನ್ನಡದಲ್ಲಿ ರಿಲೀಸ್​ ಆದಾಗ ಅತ್ಯುತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದರಿಂದ ಈ ಚಿತ್ರಕ್ಕೆ ಪಕ್ಕದ ರಾಜ್ಯದಿಂದಲೂ ಬೇಡಿಕೆ ಬಂತು. ಆಗಸ್ಟ್​ 26ರಂದು ಆಂಧ್ರ ಹಾಗೂ ತೆಲಂಗಾಣದಲ್ಲಿ ‘ಬಾಯ್ಸ್ ಹಾಸ್ಟೆಲ್’ ಬಿಡುಗಡೆ ಆಗಲಿದೆ. ಕನ್ನಡ ವರ್ಷನ್​ನಲ್ಲಿ ರಮ್ಯಾ ಅವರ ಅತಿಥಿ ಪಾತ್ರ ಹೈಲೈಟ್​ ಆಯಿತು. ಆದರೆ ತೆಲುಗಿನಲ್ಲಿ ರಮ್ಯಾ ಬದಲು ಬೇರೆ ನಟಿಯ ಆಗಮನ ಆಗಿದೆ. ಹೌದು, ನಿರೂಪಕಿಯೂ ಆಗಿರುವ ರಶ್ಮಿ ಗೌತಮ್​ (Rashmi Gautham) ಅವರು ಆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ಪ್ರಯತ್ನವಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೂಡಿಬಂತು. ರಮ್ಯಾ, ದಿಗಂತ್​, ಪವನ್​ ಕುಮಾರ್​, ರಿಷಬ್​ ಶೆಟ್ಟಿ ಮುಂತಾದವರು ಅತಿಥಿ ಪಾತ್ರ ಮಾಡಿದ್ದರಿಂದ ಸಿನಿಮಾದ ಹೈಪ್​ ಹೆಚ್ಚಿತು. ಚಿತ್ರದ ಬಿಡುಗಡೆಗೂ ಮುನ್ನ ರಮ್ಯಾ ಅವರು ಕೋರ್ಟ್​ ಮೆಟ್ಟಿಲೇರಿದ್ದರು. ಈಗ ತೆಲುಗು ವರ್ಷನಲ್ಲಿ ರಮ್ಯಾ ಅವರು ಕಾಣಿಸಿಕೊಳ್ಳುವುದೇ ಇಲ್ಲ. ರಮ್ಯಾ ಬದಲು ರಶ್ಮಿ ಗೌತಮ್​ ಅವರನ್ನು ಕರೆತರಲಾಗಿದೆ. ಅವರು ಈ ಸಿನಿಮಾದಲ್ಲಿ ಲೆಕ್ಚರರ್​ ಆಗಿ ಮನರಂಜನೆ ನೀಡಲಿದ್ದಾರೆ.

ಇದನ್ನೂ ಓದಿ: Hostel Hudugaru Bekagiddare: ಹಾಸ್ಟೆಲ್ ಹುಡುಗರು ಸಿನಿಮಾ ನೋಡಿ ಕೊಂಡಾಡಿದ ರಮೇಶ್

ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಸಿನಿಮಾವನ್ನು ‘ಚಾಯ್ ಬಿಸ್ಕೆಟ್ ಫಿಲ್ಮ್ಸ್’ ಮತ್ತು ‘ಅನ್ನಪೂರ್ಣ ಸ್ಟುಡಿಯೋಸ್’ ಸಂಸ್ಥೆಗಳು ಜಂಟಿಯಾಗಿ ಬಿಡುಗಡೆ ಮಾಡುತ್ತಿವೆ. ಆಗಸ್ಟ್ 26ರಂದು ಈ ಸಿನಿಮಾಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ. ಈ ಸಿನಿಮಾಗೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಹಾಡುಗಳು ಸೂಪರ್ ಹಿಟ್​ ಆಗಿವೆ.

ಇದನ್ನೂ ಓದಿ: ಭಿನ್ನವಾಗಿದೆ ಬಾಯ್ಸ್​ ವರ್ಸಸ್​ ವಾರ್ಡನ್​ ಸನ್ನಿವೇಶ; ನಗಿಸುವುದೇ ಹಾಸ್ಟೆಲ್​ ಹುಡುಗರ ಮುಖ್ಯ ಉದ್ದೇಶ

‘ಗುಲ್ಮೊಹರ್ ಫಿಲ್ಮ್ಸ್’ ಹಾಗೂ ‘ವರುಣ್ ಸ್ಟುಡಿಯೋಸ್’ ಜೊತೆಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿರ್ಮಿಸಿವೆ. ಕರ್ನಾಟಕದ ಅಕ್ಕ ಪಕ್ಕದ ರಾಜ್ಯಗಳು ಮಾತ್ರವಲ್ಲದೇ ವಿದೇಶದಲ್ಲಿಯೂ ಬಿಡುಗಡೆ ಆಗಿ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು ಈ ಸಿನಿಮಾದ ಹೆಚ್ಚುಗಾರಿಕೆ. ಈಗ ತೆಲುಗು ವರ್ಷನ್​ ಕೂಡ ಅಷ್ಟೇ ಪ್ರಮಾಣದಲ್ಲಿ ಸದ್ದು ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಎಂಟಿಆರ್ ಮ್ಯೂಸಿಕ್ ಮೂಲಕ ‘ಬಾಯ್ಸ್ ಹಾಸ್ಟೆಲ್’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ತರಲೆ ತಮಾಷೆಯನ್ನು ನೋಡಿ ಟಾಲಿವುಡ್​ ಮಂದಿ ಏನ್​ ಹೇಳ್ತಾರೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ