AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ಬೆನ್ನಲ್ಲೇ ಫ್ಯಾನ್ಸ್​​ಗೆ ಸರ್​​ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್​​ ಜೋಡಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ, ಅಭಿಮಾನಿಗಳಿಗೆ ದೊಡ್ಡ ಸರ್‌ಪ್ರೈಸ್ ಸಿಕ್ಕಿದೆ. ಇವರ ಹೊಸ ಚಿತ್ರ 'ರಣಬಾಲಿ'ಯ ಮೊದಲ ಪೋಸ್ಟರ್ ಅನ್ನು ಹಾಡಿನ ಮೂಲಕ ಅನಾವರಣಗೊಳಿಸಲಾಗಿದೆ. 'ಗೀತ ಗೋವಿಂದಂ' ಹಾಗೂ 'ಡಿಯರ್ ಕಾಮ್ರೇಡ್' ನಂತರ ಈ ಜೋಡಿ ಮತ್ತೆ ಒಂದಾಗಿ ತೆರೆ ಹಂಚಿಕೊಳ್ಳುತ್ತಿದ್ದು, ರಾಹುಲ್ ಸಂಕ್ರಿತ್ಯನ್ ನಿರ್ದೇಶನದ ಈ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ವಿವಾಹದ ಬೆನ್ನಲ್ಲೇ ಫ್ಯಾನ್ಸ್​​ಗೆ ಸರ್​​ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್​​ ಜೋಡಿ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Feb 28, 2026 | 2:18 PM

Share

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಸಂಭ್ರಮ ಇನ್ನೂ ಮುಗಿದಿಲ್ಲ. ಈ ಖುಷಿಯನ್ನು ಅಭಿಮಾನಿಗಳು ಇನ್ನೂ ಆಚರಿಸುತ್ತಿರುವಾಗಲೇ ಫ್ಯಾನ್ಸ್​​ಗೆ ಒಂದು ದೊಡ್ಡ ಸರ್​​ಪ್ರೈಸ್​ ಸಿಕ್ಕಿದೆ. ಅವರ ಮುಂದಿನ ಚಿತ್ರ ‘ರಣಬಾಲಿ’ ಚಿತ್ರದ ಮೊದಲ ಪೋಸ್ಟರ್​​ನ ಹಾಡಿನ ಜೊತೆ ರಿವೀಲ್ ಮಾಡಿದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಮೊದಲ ಬಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಚಿತ್ರದ ಸೆಟ್​​ ಅಲ್ಲಿ. ಮೊದಲ ಭೇಟಿಗೆ ಸುಮಾರು 9 ವರ್ಷಗಳು ತುಂಬುತ್ತಿವೆ. ಆ ಬಳಿಕ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಇವರು ಒಟ್ಟಾಗಿ ನಟಿಸಿದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. ಈ ಮಧ್ಯೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರ ಕಡೆಯಿಂದ ಒಂದು ಬಿಗ್ ಸರ್​​ಪ್ರೈಸ್ ಸಿಕ್ಕಿದೆ.

ರಶ್ಮಿಕಾ ಹಾಗೂ ವಿಜಯ್ ಮುಂದಿನ ಚಿತ್ರಕ್ಕೆ ‘ರಣಬಾಲಿ’ ಎಂದು ಹೆಸರು ಇಡಲಾಗಿದೆ. ವಿಜಯ್ ಅವರು ರಾಣಬಾಲಿಯಾಗಿ ರಶ್ಮಿಕಾ ಮಂದಣ್ಣ ಅವರು ಜಯಮ್ಮನಾಗಿ ಗಮನ ಸೆಳೆಯುತ್ತಿದ್ದಾರೆ. ಸಾಂಗ್ ಮೂಲಕ ಮೊದಲ ಪೋಸ್ಟರ್ ರಿವೀಲ್ ಆಗಿದೆ. ಡಿ ಗ್ಲಾಮ್ ಲುಕ್ ಅಲ್ಲಿ ಇವರು ಗಮನ ಸೆಳೆದಿದ್ದಾರೆ. ತೆರೆಮೇಲೆ ಹಾಗೂ ತೆರೆ ಹಿಂದೆ ಇವರ ಕೆಮಿಸ್ಟ್ರಿ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಹುಲ್ ಸಂಕ್ರಿತ್ಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ: ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ವಿಷಯದ ಕುರಿತೇ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಇವರು ಒಟ್ಟಿಗೆ ನಟಿಸುತ್ತಿರುವ ಸಿನಿಮಾದ ಬಗ್ಗೆ ಮಾಹಿತಿ ಕೊಟ್ಟರೆ ಅಭಿಮಾನಿಗಳಿಗೆ ಡಬಲ್ ಖುಷಿ ಸಿಕ್ಕಂತೆ ಆಗುತ್ತದೆ ಎಂಬುದು ಚಿತ್ರತಂಡದ ಆಲೋಚನೆ. ಈ ಸಿನಿಮಾ ಈ ವರ್ಷವೇ ರಿಲೀಸ್ ಆಗುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More