AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ವೇಳೆ ಇಂಟಿಮೇಟ್​ ದೃಶ್ಯವೊಂದಿದೆ.

Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ
ಅಲ್ಲು ಅರ್ಜುನ್​-ರಶ್ಮಿಕಾ
TV9 Web
| Edited By: |

Updated on: Dec 18, 2021 | 6:11 PM

Share

‘ಪುಷ್ಪ’ ಸಿನಿಮಾಗೆ ಪಾಸಿಟಿವ್​ಗಿಂತ ನೆಗೆಟಿವ್​ ವಿಮರ್ಶೆಗಳೇ ಹೆಚ್ಚು ಕೇಳಿಬರುತ್ತಿವೆ. ಸಿನಿಮಾ ತುಂಬಾ ದೀರ್ಘವಾಯಿತು ಎಂದು ಒಂದಷ್ಟು ಜನರು ಹೇಳಿದರೆ, ಸಿನಿಮಾದ ಕಥೆಯಲ್ಲಿ ಗಟ್ಟಿತನ ಇಲ್ಲ ಎಂದು ಕೆಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ದೃಶ್ಯವೊಂದು ಅಲ್ಲು ಅರ್ಜುನ್​ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ದೃಶ್ಯಕ್ಕೆ ಕತ್ತರಿ ಹಾಕೋಕೆ ಚಿತ್ರತಂಡ ಮುಂದಾಗಿದೆ. ಹಾಗಾದರೆ, ಆ ದೃಶ್ಯದಲ್ಲಿ ಏನಿತ್ತು? ಅದಕ್ಕೆ ಇಲ್ಲಿದೆ ಉತ್ತರ.

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ಸಂದರ್ಭದಲ್ಲಿ ಶ್ರೀವಲ್ಲಿ ಹೆಗಲಮೇಲೆ ಪುಷ್ಪರಾಜ್​​ ಕೈ ಇಟ್ಟುಕೊಂಡಿರುತ್ತಾನೆ. ಈ ವೇಳೆ ಕೆಲ ಇಂಟಿಮೇಟ್​ ದೃಶ್ಯಗಳಿವೆ. ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ದೃಶ್ಯ ಎನಿಸಿದರೂ, ಸೂಕ್ಷ್ಮವಾಗಿ ಗಮನಿಸಿದಾಗ ಈ ದೃಶ್ಯದಲ್ಲಿರುವ ಇಂಟಿಮೇಟ್​ನ ಆಳ ಗೊತ್ತಾಗುತ್ತದೆ. ಸಿನಿಮಾ ನೋಡಿದ ನಂತರದಲ್ಲಿ ಅಲ್ಲು ಅರ್ಜುನ್​ಗೆ ಈ ದೃಶ್ಯ ಇಷ್ಟವಾಗಿಲ್ಲ. ಫ್ಯಾಮಿಲಿ ಆಡಿಯನ್ಸ್​ ನೋಡುವ ದೃಶ್ಯ ಇದಲ್ಲ ಎನ್ನುವ ಕಾರಣಕ್ಕೆ ಅದನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಪುಷ್ಪ ಕಲೆಕ್ಷನ್​ ಎಷ್ಟು?

‘ಪುಷ್ಪ’ ಆಂಧ್ರ ಪ್ರದೇಶದ ನಿಜಾಮ್​ ಭಾಗದಲ್ಲಿ11.44 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಉಳಿದಂತೆ ಕೃಷ್ಣ ಭಾಗದಲ್ಲಿ ಒಂದು ಕೋಟಿ ರೂಪಾಯಿ, ಗುಂಟೂರು ಭಾಗದಲ್ಲಿ 2.28 ಕೋಟಿ ರೂಪಾಯಿ ಸೇರಿದಂತೆ ಒಟ್ಟೂ 24.90 ಕೋಟಿಯನ್ನು ಈ ಚಿತ್ರ ಕಲೆಕ್ಷನ್ ಮಾಡಿದೆ. ‘ಪುಷ್ಪ’ ಮೊದಲ ದಿನ 30-35 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಸಿನಿಪಂಡಿತರು ಅಂದಾಜಿಸಿದ್ದರು. ಆದರೆ, ಹಾಗಾಗಿಲ್ಲ. ತಮಿಳುನಾಡಿನಲ್ಲೂ ಚಿತ್ರದ ಕಲೆಕ್ಷನ್​ ಇಳಿಕೆ ಆಗಿದೆ. ಮೊದಲ ದಿನ ಈ ಸಿನಿಮಾ 10 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಊಹಿಸಲಾಗಿತ್ತು. ಆದರೆ, ಚಿತ್ರ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ ಮಾತ್ರ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ. ಸಿನಿಮಾ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಈ ಕಾರಣಕ್ಕೆ ಅನೇಕರು ಈ ಸಿನಿಮಾ ಟ್ರೋಲ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ

ತಗ್ಗಿದ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕಲೆಕ್ಷನ್; ಬಾಕ್ಸ್​ ಆಫೀಸ್​ ಗಳಿಕೆ​ ಬಗ್ಗೆ ಇಲ್ಲಿದೆ ಮಾಹಿತಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ