Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ವೇಳೆ ಇಂಟಿಮೇಟ್​ ದೃಶ್ಯವೊಂದಿದೆ.

Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ
ಅಲ್ಲು ಅರ್ಜುನ್​-ರಶ್ಮಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 18, 2021 | 6:11 PM

‘ಪುಷ್ಪ’ ಸಿನಿಮಾಗೆ ಪಾಸಿಟಿವ್​ಗಿಂತ ನೆಗೆಟಿವ್​ ವಿಮರ್ಶೆಗಳೇ ಹೆಚ್ಚು ಕೇಳಿಬರುತ್ತಿವೆ. ಸಿನಿಮಾ ತುಂಬಾ ದೀರ್ಘವಾಯಿತು ಎಂದು ಒಂದಷ್ಟು ಜನರು ಹೇಳಿದರೆ, ಸಿನಿಮಾದ ಕಥೆಯಲ್ಲಿ ಗಟ್ಟಿತನ ಇಲ್ಲ ಎಂದು ಕೆಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ದೃಶ್ಯವೊಂದು ಅಲ್ಲು ಅರ್ಜುನ್​ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ದೃಶ್ಯಕ್ಕೆ ಕತ್ತರಿ ಹಾಕೋಕೆ ಚಿತ್ರತಂಡ ಮುಂದಾಗಿದೆ. ಹಾಗಾದರೆ, ಆ ದೃಶ್ಯದಲ್ಲಿ ಏನಿತ್ತು? ಅದಕ್ಕೆ ಇಲ್ಲಿದೆ ಉತ್ತರ.

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ಸಂದರ್ಭದಲ್ಲಿ ಶ್ರೀವಲ್ಲಿ ಹೆಗಲಮೇಲೆ ಪುಷ್ಪರಾಜ್​​ ಕೈ ಇಟ್ಟುಕೊಂಡಿರುತ್ತಾನೆ. ಈ ವೇಳೆ ಕೆಲ ಇಂಟಿಮೇಟ್​ ದೃಶ್ಯಗಳಿವೆ. ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ದೃಶ್ಯ ಎನಿಸಿದರೂ, ಸೂಕ್ಷ್ಮವಾಗಿ ಗಮನಿಸಿದಾಗ ಈ ದೃಶ್ಯದಲ್ಲಿರುವ ಇಂಟಿಮೇಟ್​ನ ಆಳ ಗೊತ್ತಾಗುತ್ತದೆ. ಸಿನಿಮಾ ನೋಡಿದ ನಂತರದಲ್ಲಿ ಅಲ್ಲು ಅರ್ಜುನ್​ಗೆ ಈ ದೃಶ್ಯ ಇಷ್ಟವಾಗಿಲ್ಲ. ಫ್ಯಾಮಿಲಿ ಆಡಿಯನ್ಸ್​ ನೋಡುವ ದೃಶ್ಯ ಇದಲ್ಲ ಎನ್ನುವ ಕಾರಣಕ್ಕೆ ಅದನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಪುಷ್ಪ ಕಲೆಕ್ಷನ್​ ಎಷ್ಟು?

‘ಪುಷ್ಪ’ ಆಂಧ್ರ ಪ್ರದೇಶದ ನಿಜಾಮ್​ ಭಾಗದಲ್ಲಿ11.44 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಉಳಿದಂತೆ ಕೃಷ್ಣ ಭಾಗದಲ್ಲಿ ಒಂದು ಕೋಟಿ ರೂಪಾಯಿ, ಗುಂಟೂರು ಭಾಗದಲ್ಲಿ 2.28 ಕೋಟಿ ರೂಪಾಯಿ ಸೇರಿದಂತೆ ಒಟ್ಟೂ 24.90 ಕೋಟಿಯನ್ನು ಈ ಚಿತ್ರ ಕಲೆಕ್ಷನ್ ಮಾಡಿದೆ. ‘ಪುಷ್ಪ’ ಮೊದಲ ದಿನ 30-35 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಸಿನಿಪಂಡಿತರು ಅಂದಾಜಿಸಿದ್ದರು. ಆದರೆ, ಹಾಗಾಗಿಲ್ಲ. ತಮಿಳುನಾಡಿನಲ್ಲೂ ಚಿತ್ರದ ಕಲೆಕ್ಷನ್​ ಇಳಿಕೆ ಆಗಿದೆ. ಮೊದಲ ದಿನ ಈ ಸಿನಿಮಾ 10 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಊಹಿಸಲಾಗಿತ್ತು. ಆದರೆ, ಚಿತ್ರ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ ಮಾತ್ರ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ. ಸಿನಿಮಾ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಈ ಕಾರಣಕ್ಕೆ ಅನೇಕರು ಈ ಸಿನಿಮಾ ಟ್ರೋಲ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ

ತಗ್ಗಿದ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕಲೆಕ್ಷನ್; ಬಾಕ್ಸ್​ ಆಫೀಸ್​ ಗಳಿಕೆ​ ಬಗ್ಗೆ ಇಲ್ಲಿದೆ ಮಾಹಿತಿ

ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು