AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ವೇಳೆ ಇಂಟಿಮೇಟ್​ ದೃಶ್ಯವೊಂದಿದೆ.

Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ
ಅಲ್ಲು ಅರ್ಜುನ್​-ರಶ್ಮಿಕಾ
TV9 Web
| Edited By: |

Updated on: Dec 18, 2021 | 6:11 PM

Share

‘ಪುಷ್ಪ’ ಸಿನಿಮಾಗೆ ಪಾಸಿಟಿವ್​ಗಿಂತ ನೆಗೆಟಿವ್​ ವಿಮರ್ಶೆಗಳೇ ಹೆಚ್ಚು ಕೇಳಿಬರುತ್ತಿವೆ. ಸಿನಿಮಾ ತುಂಬಾ ದೀರ್ಘವಾಯಿತು ಎಂದು ಒಂದಷ್ಟು ಜನರು ಹೇಳಿದರೆ, ಸಿನಿಮಾದ ಕಥೆಯಲ್ಲಿ ಗಟ್ಟಿತನ ಇಲ್ಲ ಎಂದು ಕೆಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ದೃಶ್ಯವೊಂದು ಅಲ್ಲು ಅರ್ಜುನ್​ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ದೃಶ್ಯಕ್ಕೆ ಕತ್ತರಿ ಹಾಕೋಕೆ ಚಿತ್ರತಂಡ ಮುಂದಾಗಿದೆ. ಹಾಗಾದರೆ, ಆ ದೃಶ್ಯದಲ್ಲಿ ಏನಿತ್ತು? ಅದಕ್ಕೆ ಇಲ್ಲಿದೆ ಉತ್ತರ.

‘ಪುಷ್ಪ’ ಸಿನಿಮಾದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಹಾಗೂ ಪುಷ್ಪರಾಜ್​ (ಅಲ್ಲು ಅರ್ಜುನ್)​ ನಡುವೆ ಆಗತಾನೇ ಪ್ರೀತಿ ಮೂಡಿರುತ್ತದೆ. ಇಬ್ಬರಿಗೂ ಕಾರಿನಲ್ಲಿ ಏಕಾಂತ ಸಿಕ್ಕಿರುತ್ತದೆ. ಈ ಸಂದರ್ಭದಲ್ಲಿ ಶ್ರೀವಲ್ಲಿ ಹೆಗಲಮೇಲೆ ಪುಷ್ಪರಾಜ್​​ ಕೈ ಇಟ್ಟುಕೊಂಡಿರುತ್ತಾನೆ. ಈ ವೇಳೆ ಕೆಲ ಇಂಟಿಮೇಟ್​ ದೃಶ್ಯಗಳಿವೆ. ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ದೃಶ್ಯ ಎನಿಸಿದರೂ, ಸೂಕ್ಷ್ಮವಾಗಿ ಗಮನಿಸಿದಾಗ ಈ ದೃಶ್ಯದಲ್ಲಿರುವ ಇಂಟಿಮೇಟ್​ನ ಆಳ ಗೊತ್ತಾಗುತ್ತದೆ. ಸಿನಿಮಾ ನೋಡಿದ ನಂತರದಲ್ಲಿ ಅಲ್ಲು ಅರ್ಜುನ್​ಗೆ ಈ ದೃಶ್ಯ ಇಷ್ಟವಾಗಿಲ್ಲ. ಫ್ಯಾಮಿಲಿ ಆಡಿಯನ್ಸ್​ ನೋಡುವ ದೃಶ್ಯ ಇದಲ್ಲ ಎನ್ನುವ ಕಾರಣಕ್ಕೆ ಅದನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಪುಷ್ಪ ಕಲೆಕ್ಷನ್​ ಎಷ್ಟು?

‘ಪುಷ್ಪ’ ಆಂಧ್ರ ಪ್ರದೇಶದ ನಿಜಾಮ್​ ಭಾಗದಲ್ಲಿ11.44 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಉಳಿದಂತೆ ಕೃಷ್ಣ ಭಾಗದಲ್ಲಿ ಒಂದು ಕೋಟಿ ರೂಪಾಯಿ, ಗುಂಟೂರು ಭಾಗದಲ್ಲಿ 2.28 ಕೋಟಿ ರೂಪಾಯಿ ಸೇರಿದಂತೆ ಒಟ್ಟೂ 24.90 ಕೋಟಿಯನ್ನು ಈ ಚಿತ್ರ ಕಲೆಕ್ಷನ್ ಮಾಡಿದೆ. ‘ಪುಷ್ಪ’ ಮೊದಲ ದಿನ 30-35 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಸಿನಿಪಂಡಿತರು ಅಂದಾಜಿಸಿದ್ದರು. ಆದರೆ, ಹಾಗಾಗಿಲ್ಲ. ತಮಿಳುನಾಡಿನಲ್ಲೂ ಚಿತ್ರದ ಕಲೆಕ್ಷನ್​ ಇಳಿಕೆ ಆಗಿದೆ. ಮೊದಲ ದಿನ ಈ ಸಿನಿಮಾ 10 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಊಹಿಸಲಾಗಿತ್ತು. ಆದರೆ, ಚಿತ್ರ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ ಮಾತ್ರ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ. ಸಿನಿಮಾ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಈ ಕಾರಣಕ್ಕೆ ಅನೇಕರು ಈ ಸಿನಿಮಾ ಟ್ರೋಲ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ

ತಗ್ಗಿದ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕಲೆಕ್ಷನ್; ಬಾಕ್ಸ್​ ಆಫೀಸ್​ ಗಳಿಕೆ​ ಬಗ್ಗೆ ಇಲ್ಲಿದೆ ಮಾಹಿತಿ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ