AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​

Pushpa 2 Pooja Ceremony: ‘ಪುಷ್ಪ’ ಚಿತ್ರದ ಮೊದಲ ಪಾರ್ಟ್​ಗೆ ಹೋಲಿಸಿದರೆ ಎರಡನೇ ಪಾರ್ಟ್​ನ ಬಜೆಟ್​ ಹೆಚ್ಚಾಗುತ್ತಿದೆ. ಅದ್ದೂರಿಯಾಗಿ ಈ ಸಿನಿಮಾವನ್ನು ಕಟ್ಟಿಕೊಡಲು ತೀರ್ಮಾನಿಸಲಾಗಿದೆ.

Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Aug 22, 2022 | 8:15 AM

Share

ಇಷ್ಟು ದಿನ ಅಲ್ಲು ಅರ್ಜುನ್ (Allu Arjun)​ ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆ ಒಂದೇ; ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ ಯಾವಾಗ ಶುರುವಾಗುತ್ತೆ? ಅದಕ್ಕೀಗ ಉತ್ತರ ಸಿಕ್ಕಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಮುಹೂರ್ತ ನೆರವೇರಿಸುವ ಸಮಯ ಬಂದಿದೆ. ಇಂದು (ಆಗಸ್ಟ್​ 22) ಮುಹೂರ್ತ ನಡೆಯಲಿದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ (Rashmika Mandanna) ಸೇರಿದಂತೆ ಹಲವರು ಈ ಸಂದರ್ಭಕ್ಕೆ ಸಾಕ್ಷಿ ಆಗಲಿದ್ದಾರೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಅದರ ಸೀಕ್ವೆಲ್​ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಎರಡನೇ ಪಾರ್ಟ್​ ಹೇಗಿರಬಹುದು ಎಂದು ತಿಳಿದುಕೊಳ್ಳುವ ಕೌತುಕ ಎಲ್ಲರಲ್ಲೂ ಮನೆ ಮಾಡಿದೆ. ಸಾಕಷ್ಟು ತಯಾರಿ ಮಾಡಿಕೊಂಡು ನಿರ್ದೇಶಕ ಸುಕುಮಾರ್​ ಅವರು ಶೂಟಿಂಗ್​ ಆರಂಭಿಸುತ್ತಿದ್ದಾರೆ. ಅದರ ಮೊದಲ ಹಂತವಾಗಿ ಮುಹೂರ್ತ ನೆರವೇರಿಸಲಾಗುತ್ತಿದೆ.

‘ಪುಷ್ಪ’ ಟಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ದೇಶದ ಎಲ್ಲ ರಾಜ್ಯಗಳಲ್ಲೂ ಧೂಳೆಬ್ಬಿಸಿತ್ತು. 2021ರ ಡಿಸೆಂಬರ್​ನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಹಿಂದಿ ಪ್ರೇಕ್ಷಕರು ಮುಗಿಬಿದ್ದು ನೋಡಿದರು. ಪರಿಣಾಮವಾಗಿ ಹಿಂದಿ ವರ್ಷನ್​ನಿಂದಲೇ ನೂರು ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಯಿತು. ಈಗ ಎರಡನೇ ಪಾರ್ಟ್​ ಶೂಟಿಂಗ್​ ಶುರುವಾಗುತ್ತಿದೆ. ಈ ಮಾಹಿತಿಯನ್ನು ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಖಚಿತ ಪಡಿಸಿದೆ.

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಅವರು ಜೋಡಿಯಾಗಿ ‘ಪುಷ್ಪ 2’ ಚಿತ್ರದಲ್ಲಿ ನಟಿಸಲಿದ್ದಾರೆ. ಪಾತ್ರವರ್ಗಕ್ಕೆ ಹೊಸದಾಗಿ ಯಾರೆಲ್ಲ ಸೇರ್ಪಡೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮೊದಲ ಪಾರ್ಟ್​ನಲ್ಲಿ ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದವರು ಧೂಳೆಬ್ಬಿಸಿದ್ದರು. ಈಗ ಎರಡನೇ ಪಾರ್ಟ್​ನಲ್ಲಿ ಕೆಲವು ಘಟಾನುಘಟಿ ಕಲಾವಿದರು ಸೇರ್ಪಡೆ ಆಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಮೊದಲ ಪಾರ್ಟ್​ಗೆ ಹೋಲಿಸಿದರೆ ಎರಡನೇ ಪಾರ್ಟ್​ಗಾಗಿ ಬಜೆಟ್​ ಕೂಡ ಹೆಚ್ಚಾಗುತ್ತಿದೆ. ಅದ್ದೂರಿಯಾಗಿ ಈ ಚಿತ್ರವನ್ನು ಕಟ್ಟಿಕೊಡಲು ತೀರ್ಮಾನಿಸಲಾಗಿದೆ. ಮುಹೂರ್ತದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಚಿತ್ರತಂಡವು ‘ಭಾರತದ ಬಹುನಿರೀಕ್ಷಿತ ಸಿನಿಮಾ’ ಎಂದು ಕರೆದುಕೊಳ್ಳುವ ಮೂಲಕ ಸೆನ್ಸೇಷನ್​ ಸೃಷ್ಟಿ ಮಾಡಿದೆ.

‘ಪುಷ್ಪ’ ಸಿನಿಮಾದಿಂದ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶಸ್ಸು ಸಿಕ್ಕಿತು. ಈವರೆಗೂ ಪ್ರೇಕ್ಷಕರು ನೋಡಿರುವುದು ಅರ್ಧ ಕಥೆ ಮಾತ್ರ. ರಕ್ತಚಂದನ ಸಾಗಣೆಯ ದಂಧೆ ಮೇಲೆ ಹಿಡಿತ ಸಾಧಿಸಿದ ಕಥಾನಾಯಕ ಪುಷ್ಪರಾಜ್​ ಬದುಕಿನಲ್ಲಿ ಮುಂದೇನಾಯಿತು ಎಂಬುದನ್ನು ತಿಳಿಯುವ ಕುತೂಹಲ ಪ್ರೇಕ್ಷಕರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:15 am, Mon, 22 August 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?