AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

Rashmika Mandanna | Allu Arjun: ಈಗಾಗಲೇ ಎಲ್ಲ ಕಡೆ ಪುಷ್ಪ ಎಂಬ ಹೆಸರು ಹೈಲೈಟ್​ ಆಗಿದೆ. ಆದರೆ ಈಗ ಶೀರ್ಷಿಕೆ ಬದಲಾವಣೆಯ ಬಗ್ಗೆ ಗುಸುಗುಸು ಕೇಳಿಬರುತ್ತದೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?
ರಶ್ಮಿಕಾ ಮಂದಣ್ಣ - ಅಲ್ಲು ಅರ್ಜುನ್
ಮದನ್​ ಕುಮಾರ್​
| Edited By: |

Updated on:May 18, 2021 | 12:57 PM

Share

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಜೋಡಿಯಾಗಿ ನಟಿಸಿರುವ ‘ಪುಷ್ಪ’ ಸಿನಿಮಾದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ಇದಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ ನೋಡಿರುವ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರಲಿದೆ ಎಂಬ ಸುದ್ದಿ ಕೇಳಿ ಸಿನಿಪ್ರಿಯರು ಖುಷಿ ಆಗಿದ್ದಾರೆ. ಅಚ್ಚರಿ ಏನೆಂದರೆ, ಈ ಚಿತ್ರಕ್ಕೆ ಹೆಸರು ಬದಲಾವಣೆ ಮಾಡುವ ಬಗ್ಗೆ ಚಿತ್ರತಂಡದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಈಗಾಗಲೇ ಎಲ್ಲ ಕಡೆ ಪುಷ್ಪ ಎಂಬ ಹೆಸರು ಹೈಲೈಟ್​ ಆಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರಕ್ಕೆ ಪುಷ್ಪ ಎಂಬ ಟೈಟಲ್​ ಇಡಲಾಯಿತು. ಆದರೆ ಈಗ ಶೀರ್ಷಿಕೆ ಬದಲಾವಣೆಯ ಬಗ್ಗೆ ಗುಸುಗುಸು ಕೇಳಿಬರುತ್ತದೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿರುವುದರಿಂದ ಎರಡೂ ಪಾರ್ಟ್​ಗಳಿಗೆ ಬೇರೆ ಬೇರೆ ಹೆಸರು ಇದ್ದರೆ ಉತ್ತಮ ಎಂಬ ಅಭಿಪ್ರಾಯ ಚಿತ್ರತಂಡದವರಲ್ಲಿ ಮೂಡಿದೆ ಎನ್ನಲಾಗಿದೆ.

ಮೊದಲ ಪಾರ್ಟ್​ಗೆ ‘ಪುಷ್ಪ’ ಎಂಬ ಶೀರ್ಷಿಕೆಯೇ ಇರಲಿದೆ. ಆದರೆ ಎರಡನೇ ಪಾರ್ಟ್​ಗೆ ‘ಪುಷ್ಪ 2’ ಎಂದು ಟೈಟಲ್​ ಇಡುವ ಬದಲು ಬೇರೆ ಏನಾದರೂ ಶೀರ್ಷಿಕೆ ಇಟ್ಟರೆ ಒಳಿತು ಎಂದು ನಿರ್ದೇಶಕ ಸುಕುಮಾರ್​ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಂತಿಮವಾಗಿ ಅವರು ಯಾವ ಹೆಸರು ಆಯ್ಕೆ ಮಾಡಲಿದ್ದಾರೆ ಎಂಬ ಕುತೂಹಲ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮೊದಲ ಪಾರ್ಟ್​ಗೆ ಇನ್ನೂ ಒಂದು ತಿಂಗಳು ಶೂಟಿಂಗ್​ ಬಾಕಿ ಇದ್ದು, ಕೊರೊನಾ ವೈರಸ್​ ಕಾರಣದಿಂದ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲಾಗಿದೆ. ಆದಷ್ಟು ಬೇಗ ಕೊರೊನಾ ಹಾವಳಿ ಕಡಿಮೆಯಾದರೆ ಈ ವರ್ಷವೇ ಪುಷ್ಪ ಬಿಡುಗಡೆ ಆಗಬಹುದು. ಇಲ್ಲದಿದ್ದರೆ ಮುಂದಿನ ವರ್ಷಕ್ಕೆ ಕಾಯಬೇಕಾಗುವುದು ಅನಿವಾರ್ಯ. ಈ ಸಿನಿಮಾ ಮೇಲೆ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ನೀಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ:

ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Published On - 12:12 pm, Tue, 18 May 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್