AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಷ್ಯಾದಲ್ಲೂ ರಶ್ಮಿಕಾ ಮಂದಣ್ಣ ಹವಾ; ಮತ್ತೆ ಹೆಚ್ಚಲಿದೆ ‘ಪುಷ್ಪ’ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​

Allu Arjun | Pushpa Movie: ‘ಪುಷ್ಪ’ ಚಿತ್ರದ ರಷ್ಯನ್​ ರಿಲೀಸ್​ ಬಗ್ಗೆ ಸಿನಿಮಾದ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈ ವಿಚಾರ ಹೆಮ್ಮೆ ತಂದಿದೆ.

Rashmika Mandanna: ರಷ್ಯಾದಲ್ಲೂ ರಶ್ಮಿಕಾ ಮಂದಣ್ಣ ಹವಾ; ಮತ್ತೆ ಹೆಚ್ಚಲಿದೆ ‘ಪುಷ್ಪ’ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Nov 29, 2022 | 7:30 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ‘ಪುಷ್ಪ’ ಸಿನಿಮಾದಿಂದ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತು. ಹಿಂದಿಗೆ ಡಬ್​ ಆಗಿ ತೆರೆಕಂಡ ಆ ಚಿತ್ರದ ಗೆಲುವಿನ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬರಲು ಆರಂಭಿಸಿದವು. ಅಷ್ಟೇ ಅಲ್ಲ, ‘ಪುಷ್ಪ’ (Pushpa Movie) ಸಿನಿಮಾದಿಂದಾಗಿ ರಶ್ಮಿಕಾ ಮಂದಣ್ಣ ಅವರು ರಷ್ಯಾದಲ್ಲೂ ಫೇಮಸ್​ ಆಗಲಿದ್ದಾರೆ! ಹೌದು, ಈ ಸಿನಿಮಾ ಶೀಘ್ರದಲ್ಲೇ ರಷ್ಯನ್​ ಭಾಷೆಯಲ್ಲಿ ರಿಲೀಸ್​ ಆಗಲಿದೆ. ಅದರ ಪ್ರೀಮಿಯರ್​ ಶೋ ಸಲುವಾಗಿ ಇಡೀ ಚಿತ್ರತಂಡ ರಷ್ಯಾಗೆ ತೆರಳಲಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ (Allu Arjun), ನಿರ್ದೇಶಕ ಸುಕುಮಾರ್​ ಸೇರಿದಂತೆ ಅನೇಕರು ರಷ್ಯಾದಲ್ಲಿ ಈ ಚಿತ್ರದ ಪ್ರಚಾರ ಮಾಡಲಿದ್ದಾರೆ.

ಭಾರತದಲ್ಲಿ ‘ಪುಷ್ಪ’ ಚಿತ್ರ ತೆರೆಕಂಡಿದ್ದು 2021ರ ಡಿಸೆಂಬರ್​ 17ರಂದು. ಅದಾಗಿ ಒಂದು ವರ್ಷ ಕಳೆಯುವುದಕ್ಕೂ ಮುನ್ನವೇ ಈ ಸಿನಿಮಾ ರಷ್ಯಾದ ಮಾರುಕಟ್ಟೆಯಲ್ಲಿ ಕಮಾಯಿ ಮಾಡಲು ಮುಂದಾಗಿದೆ. ರಷ್ಯನ್​ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲು ದಿನಾಂಕ​ ನಿಗದಿ ಆಗಿದೆ. ಡಿಸೆಂಬರ್​ 8ರಂದು ರಷ್ಯಾದ ಅನೇಕ ಕಡೆಗಳಲ್ಲಿ ಈ ಚಿತ್ರ ತೆರೆಕಾಣಲಿದೆ. ಅದಕ್ಕೂ ಮುನ್ನ ಡಿ.1ರಂದು ಮಾಸ್ಕೋ ಹಾಗೂ ಡಿ.3ರಂದು ಪೀಟರ್ಸ್​ಬರ್ಗ್​ನಲ್ಲಿ ಈ ಚಿತ್ರದ ಪ್ರೀಮಿಯರ್​ ಶೋ ನಡೆಯಲಿದೆ. ‘ಪುಷ್ಪ’ ಚಿತ್ರದ ರಷ್ಯನ್​ ರಿಲೀಸ್​ ಬಗ್ಗೆ ಸಿನಿಮಾದ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈ ವಿಚಾರ ಹೆಮ್ಮೆ ತಂದಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಕಳೆದ ವರ್ಷ ವಿಶ್ವಾದ್ಯಂತ ತೆರೆಕಂಡಿದ್ದ ಈ ಚಿತ್ರ 360 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತ್ತು. ನಂತರ ಒಟಿಟಿಗೆ ಕಾಲಿಟ್ಟಿತು. ಈಗ ಮತ್ತೆ ರಷ್ಯಾದ ಚಿತ್ರಮಂದಿರಗಳಲ್ಲಿ ತನ್ನ ಅಬ್ಬರ ಶುರುಮಾಡಲಿದೆ. ರಷ್ಯಾದಲ್ಲಿನ ಕಲೆಕ್ಷನ್​ ಕೂಡ ಸೇರ್ಪಡೆಯಾದರೆ ಈ ಚಿತ್ರದ ಒಟ್ಟು ಬಾಕ್ಸ್​ ಆಫೀಸ್​ ಗಳಿಕೆಯ ಮೊತ್ತ ಹೆಚ್ಚಾಗಲಿದೆ. ಆ ಕಾರಣದಿಂದಲೂ ರಷ್ಯಾದ ರಿಲೀಸ್​ ತುಂಬ ಮುಖ್ಯವಾಗುತ್ತಿದೆ.

ಡಿಸೆಂಬರ್​ 1ರಂದು ರಷ್ಯಾದಲ್ಲಿ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ ನಡೆಯಲಿದೆ. ಭಾರತದ ಅನೇಕ ಸಿನಿಮಾಗಳು ಇದರಲ್ಲಿ ಪ್ರದರ್ಶನ ಆಗಲಿವೆ. ‘ಪುಷ್ಪ’ ಜೊತೆಗೆ ‘ದಂಗಲ್​’, ‘ವಾರ್​’, ‘ಆರ್​ಆರ್​ಆರ್​’, ‘ಮೈ ನೇಮ್​ ಈಸ್​ ಖಾನ್​’ ಮುಂತಾದ ಚಿತ್ರಗಳನ್ನು ಪ್ರದರ್ಶನ ಮಾಡಲಾಗುವುದು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಈಗಾಗಲೇ ಅಲ್ಲು ಅರ್ಜುನ್​ ಅವರು ಪಾಲ್ಗೊಂಡಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗುತ್ತಿವೆ. ‘ಪುಷ್ಪ 2’ ಬಗ್ಗೆ ಆದಷ್ಟು ಬೇಗ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ