AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?
ಅಲ್ಲು ಅರ್ಜುನ್​
TV9 Web
| Edited By: |

Updated on: Aug 10, 2021 | 9:31 AM

Share

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಹೊಂದಿದ್ದಾರೆ. ಇವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ಮಧ್ಯೆ ಅಚ್ಚರಿಯ ವಿಚಾರವೊಂದು ಕೇಳಿ ಬಂದಿದೆ. ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಇವರಿಬ್ಬರನ್ನು ಹೀರೋಯಿನ್​ ಆಗಿ ಆಯ್ಕೆ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದೆಯಂತೆ.

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ. ವೇಣು ಶ್ರೀರಾಮ್​-ಅಲ್ಲು ಅರ್ಜುನ್​ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎನ್ನಲಾಗಿದೆ. ಇದಕ್ಕೆ  ಇಬ್ಬರ ಕಾಲ್​ಶೀಟ್​ ಕೇಳಲಾಗಿದೆ.

ಹೌದು, ಪೂಜಾ ಹೆಗ್ಡೆ ಹಾಗೂ ರಶ್ಮಿಕಾ ಅವರನ್ನು ಈ ಸಿನಿಮಾಗೆ ನಾಯಕಿಯರನ್ನಾಗಿ ಆಯ್ಕೆ ಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ. ಅಲ್ಲು ಅರ್ಜುನ್​ ಹಾಗೂ ಪೂಜಾ ಹೆಗ್ಡೆ ‘ಡಿಜೆ’ ಮತ್ತು ಅಲಾ ವೈಂಕುಂಟಪುರಮುಲೋ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಪುಷ್ಪ ಪಾರ್ಟ್​ 1 ಸಿನಿಮಾದಲ್ಲಿ ಅಲ್ಲುಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಹೀರೋಯಿನ್​ಗಳು ಒಂದೇ ಚಿತ್ರದಲ್ಲಿ ನಟಿಸುತ್ತಾರಾ ಎಂಬ ಕೌತುಕ ಮನೆ ಮಾಡಿದೆ.

ಈ ಬಗ್ಗೆ ಸದ್ಯ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಆದರೂ ಸೋಶಿಯಲ್​ ಮೀಡಿಯಾದಲ್ಲಿ ಈ ಮಾಹಿತಿ ವೈರಲ್​ ಆಗುತ್ತಿದೆ. ಅಲ್ಲು ಅರ್ಜುನ್​ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಕಮರ್ಷಿಯಲ್​ ಅಂಶಗಳು ಇರುತ್ತವೆ. ಈ ಸಿನಿಮಾ ರಿವೇಂಜ್​ ಡ್ರಾಮಾ ಕಥೆ ಹೊಂದಿರಲಿದೆ ಎನ್ನಲಾಗಿದೆ.

ಬಾಲಿವುಡ್​ನಲ್ಲಿ  ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಪೂಜಾ ಹೆಗ್ಡೆ ಅವರ ಕೈಯಲ್ಲಿ ಮೋಸ್ಟ್​​ ಎಲಿಜೆಬಲ್​ ಬ್ಯಾಚುಲರ್​ ಸೇರಿ ನಾಲ್ಕೈದು ಸಿನಿಮಾಗಳಿವೆ.

ಇದನ್ನೂ ಓದಿ: Rashmika Mandanna: ‘ಈಗ ನಾನು ಕಲ್ಲಾಗಿದ್ದೇನೆ’; ಟ್ರೋಲ್​ ಮಾಡುವವರಿಗೆ ತಿರುಗೇಟು ಕೊಟ್ಟ ನಟಿ ರಶ್ಮಿಕಾ ಮಂದಣ್ಣ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ