AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?
ಅಲ್ಲು ಅರ್ಜುನ್​
TV9 Web
| Edited By: |

Updated on: Aug 10, 2021 | 9:31 AM

Share

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಹೊಂದಿದ್ದಾರೆ. ಇವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ಮಧ್ಯೆ ಅಚ್ಚರಿಯ ವಿಚಾರವೊಂದು ಕೇಳಿ ಬಂದಿದೆ. ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಇವರಿಬ್ಬರನ್ನು ಹೀರೋಯಿನ್​ ಆಗಿ ಆಯ್ಕೆ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದೆಯಂತೆ.

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ. ವೇಣು ಶ್ರೀರಾಮ್​-ಅಲ್ಲು ಅರ್ಜುನ್​ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎನ್ನಲಾಗಿದೆ. ಇದಕ್ಕೆ  ಇಬ್ಬರ ಕಾಲ್​ಶೀಟ್​ ಕೇಳಲಾಗಿದೆ.

ಹೌದು, ಪೂಜಾ ಹೆಗ್ಡೆ ಹಾಗೂ ರಶ್ಮಿಕಾ ಅವರನ್ನು ಈ ಸಿನಿಮಾಗೆ ನಾಯಕಿಯರನ್ನಾಗಿ ಆಯ್ಕೆ ಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ. ಅಲ್ಲು ಅರ್ಜುನ್​ ಹಾಗೂ ಪೂಜಾ ಹೆಗ್ಡೆ ‘ಡಿಜೆ’ ಮತ್ತು ಅಲಾ ವೈಂಕುಂಟಪುರಮುಲೋ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಪುಷ್ಪ ಪಾರ್ಟ್​ 1 ಸಿನಿಮಾದಲ್ಲಿ ಅಲ್ಲುಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಹೀರೋಯಿನ್​ಗಳು ಒಂದೇ ಚಿತ್ರದಲ್ಲಿ ನಟಿಸುತ್ತಾರಾ ಎಂಬ ಕೌತುಕ ಮನೆ ಮಾಡಿದೆ.

ಈ ಬಗ್ಗೆ ಸದ್ಯ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಆದರೂ ಸೋಶಿಯಲ್​ ಮೀಡಿಯಾದಲ್ಲಿ ಈ ಮಾಹಿತಿ ವೈರಲ್​ ಆಗುತ್ತಿದೆ. ಅಲ್ಲು ಅರ್ಜುನ್​ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಕಮರ್ಷಿಯಲ್​ ಅಂಶಗಳು ಇರುತ್ತವೆ. ಈ ಸಿನಿಮಾ ರಿವೇಂಜ್​ ಡ್ರಾಮಾ ಕಥೆ ಹೊಂದಿರಲಿದೆ ಎನ್ನಲಾಗಿದೆ.

ಬಾಲಿವುಡ್​ನಲ್ಲಿ  ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಪೂಜಾ ಹೆಗ್ಡೆ ಅವರ ಕೈಯಲ್ಲಿ ಮೋಸ್ಟ್​​ ಎಲಿಜೆಬಲ್​ ಬ್ಯಾಚುಲರ್​ ಸೇರಿ ನಾಲ್ಕೈದು ಸಿನಿಮಾಗಳಿವೆ.

ಇದನ್ನೂ ಓದಿ: Rashmika Mandanna: ‘ಈಗ ನಾನು ಕಲ್ಲಾಗಿದ್ದೇನೆ’; ಟ್ರೋಲ್​ ಮಾಡುವವರಿಗೆ ತಿರುಗೇಟು ಕೊಟ್ಟ ನಟಿ ರಶ್ಮಿಕಾ ಮಂದಣ್ಣ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ