AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ.

ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಕರ್ನಾಟಕದ ಇಬ್ಬರು ಹೀರೋಯಿನ್​ಗಳು?
ಅಲ್ಲು ಅರ್ಜುನ್​
TV9 Web
| Updated By: ಮದನ್​ ಕುಮಾರ್​|

Updated on: Aug 10, 2021 | 9:31 AM

Share

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಹೊಂದಿದ್ದಾರೆ. ಇವರ ಕಾಲ್​ಶೀಟ್​ ಪಡೆಯೋಕೆ ಅನೇಕ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ಮಧ್ಯೆ ಅಚ್ಚರಿಯ ವಿಚಾರವೊಂದು ಕೇಳಿ ಬಂದಿದೆ. ಅಲ್ಲು ಅರ್ಜುನ್​ ಮುಂದಿನ ಚಿತ್ರಕ್ಕೆ ಇವರಿಬ್ಬರನ್ನು ಹೀರೋಯಿನ್​ ಆಗಿ ಆಯ್ಕೆ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದೆಯಂತೆ.

ಅಲ್ಲು ಅರ್ಜುನ್​ ‘ಐಕಾನ್’​ ಸಿನಿಮಾದಲ್ಲಿ ನಟಿಸಲಿದ್ದಾರೆ. ವೇಣು ಶ್ರೀರಾಮ್​ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ‘ಪುಷ್ಪ ಪಾರ್ಟ್​ 1’ ತೆರೆಗೆ ಬಂದ ನಂತರದಲ್ಲಿ ಈ ಚಿತ್ರ ಸೆಟ್ಟೇರಲಿದೆ. ವೇಣು ಶ್ರೀರಾಮ್​-ಅಲ್ಲು ಅರ್ಜುನ್​ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎನ್ನಲಾಗಿದೆ. ಇದಕ್ಕೆ  ಇಬ್ಬರ ಕಾಲ್​ಶೀಟ್​ ಕೇಳಲಾಗಿದೆ.

ಹೌದು, ಪೂಜಾ ಹೆಗ್ಡೆ ಹಾಗೂ ರಶ್ಮಿಕಾ ಅವರನ್ನು ಈ ಸಿನಿಮಾಗೆ ನಾಯಕಿಯರನ್ನಾಗಿ ಆಯ್ಕೆ ಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ. ಅಲ್ಲು ಅರ್ಜುನ್​ ಹಾಗೂ ಪೂಜಾ ಹೆಗ್ಡೆ ‘ಡಿಜೆ’ ಮತ್ತು ಅಲಾ ವೈಂಕುಂಟಪುರಮುಲೋ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಪುಷ್ಪ ಪಾರ್ಟ್​ 1 ಸಿನಿಮಾದಲ್ಲಿ ಅಲ್ಲುಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಇಬ್ಬರೂ ಹೀರೋಯಿನ್​ಗಳು ಒಂದೇ ಚಿತ್ರದಲ್ಲಿ ನಟಿಸುತ್ತಾರಾ ಎಂಬ ಕೌತುಕ ಮನೆ ಮಾಡಿದೆ.

ಈ ಬಗ್ಗೆ ಸದ್ಯ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಆದರೂ ಸೋಶಿಯಲ್​ ಮೀಡಿಯಾದಲ್ಲಿ ಈ ಮಾಹಿತಿ ವೈರಲ್​ ಆಗುತ್ತಿದೆ. ಅಲ್ಲು ಅರ್ಜುನ್​ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಕಮರ್ಷಿಯಲ್​ ಅಂಶಗಳು ಇರುತ್ತವೆ. ಈ ಸಿನಿಮಾ ರಿವೇಂಜ್​ ಡ್ರಾಮಾ ಕಥೆ ಹೊಂದಿರಲಿದೆ ಎನ್ನಲಾಗಿದೆ.

ಬಾಲಿವುಡ್​ನಲ್ಲಿ  ವಿಕಾಸ್​ ಬಹ್ಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ  ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಪೂಜಾ ಹೆಗ್ಡೆ ಅವರ ಕೈಯಲ್ಲಿ ಮೋಸ್ಟ್​​ ಎಲಿಜೆಬಲ್​ ಬ್ಯಾಚುಲರ್​ ಸೇರಿ ನಾಲ್ಕೈದು ಸಿನಿಮಾಗಳಿವೆ.

ಇದನ್ನೂ ಓದಿ: Rashmika Mandanna: ‘ಈಗ ನಾನು ಕಲ್ಲಾಗಿದ್ದೇನೆ’; ಟ್ರೋಲ್​ ಮಾಡುವವರಿಗೆ ತಿರುಗೇಟು ಕೊಟ್ಟ ನಟಿ ರಶ್ಮಿಕಾ ಮಂದಣ್ಣ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ