AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಂದುವರಿದ ಕಿಸ್ಸಿಂಗ್ ಸರಣಿ; ‘ಅನಿಮಲ್’ ಹೊಸ ಹಾಡಿನಲ್ಲಿ ರಣಬೀರ್-ರಶ್ಮಿಕಾ ಲಿಪ್ ಲಾಕ್

ರಶ್ಮಿಕಾ ಮಂದಣ್ಣ ಈ ರೀತಿಯ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಲಿಪ್ ಲಾಕ್ ದೃಶ್ಯ ಇತ್ತು. ಈಗ ‘ಅನಿಮಲ್’ ಸಿನಿಮಾದಲ್ಲಿ ಅವರು ರಣಬೀರ್ ಕಪೂರ್ ಜೊತೆ ಲಿಪ್ ಲಾಕ್ ಮಾಡಿದ್ದಾರೆ.

ಮತ್ತೆ ಮುಂದುವರಿದ ಕಿಸ್ಸಿಂಗ್ ಸರಣಿ; ‘ಅನಿಮಲ್’ ಹೊಸ ಹಾಡಿನಲ್ಲಿ ರಣಬೀರ್-ರಶ್ಮಿಕಾ ಲಿಪ್ ಲಾಕ್
ರಶ್ಮಿಕಾ ಮಂದಣ್ಣ-ರಣಬೀರ್
ರಾಜೇಶ್ ದುಗ್ಗುಮನೆ
|

Updated on:Oct 28, 2023 | 8:40 AM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಚಿತ್ರ ಡಿಸೆಂಬರ್ 1ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇತ್ತೀಚೆಗೆ ರಿಲೀಸ್ ಆದ ಈ ಸಿನಿಮಾದ ‘ಹುವಾ ಮೇ..’ ಹಾಡಿನಲ್ಲಿ ಲಿಪ್ ಲಾಕ್ ದೃಶ್ಯಗಳು ಹೇರಳವಾಗಿ ಇದ್ದವು. ಈಗ, ‘ಸತ್ರಂಗ..’ ಹೆಸರಿನ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲೂ ಲಿಪ್ ಲಾಕ್ ದೃಶ್ಯ ಇದೆ. ಈ ಸಾಂಗ್ ರಿಲೀಸ್ ಆದ 15 ಗಂಟೆಯಲ್ಲಿ ಒಂದೂವರೆ ಕೋಟಿ ವೀಕ್ಷಣೆ ಕಂಡಿದೆ.

ರಶ್ಮಿಕಾ ಮಂದಣ್ಣ ಈ ರೀತಿಯ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಲಿಪ್ ಲಾಕ್ ದೃಶ್ಯ ಇತ್ತು. ಈಗ ‘ಅನಿಮಲ್’ ಸಿನಿಮಾದಲ್ಲಿ ಅವರು ರಣಬೀರ್ ಕಪೂರ್ ಜೊತೆ ಲಿಪ್ ಲಾಕ್ ಮಾಡಿದ್ದಾರೆ. ಈಗ ರಿಲೀಸ್ ಆಗಿರೋ ‘ಸತ್ರಂಗ..’ ಹಾಡು ಕೂಡ ಗಮನ ಸೆಳೆಯುತ್ತಿದೆ.

ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ನಿರ್ದೇಶನ ಮಾಡಿದ್ದ ‘ಅರ್ಜುನ್ ರೆಡ್ಡಿ’ ಚಿತ್ರದಲ್ಲೂ ಸಾಕಷ್ಟು ಬೋಲ್ಡ್ ದೃಶ್ಯಗಳು ಇದ್ದವು. ಅದು ‘ಅನಿಮಲ್’ ಸಿನಿಮಾದಲ್ಲೂ ಮುಂದುವರಿದಂತೆ ಇದೆ. ರಣಬೀರ್ ಕಪೂರ್ ಅವರ ಪತ್ನಿಯಾಗಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಿನಲ್ಲಿ ಮುಳುಗುತ್ತಿರುವ ಗರ್ಲ್​ಫ್ರೆಂಡ್  ರಶ್ಮಿಕಾ ಮಂದಣ್ಣ: ಕಾಪಾಡುವ ನಾಯಕ ಯಾರು?

ರಶ್ಮಿಕಾ ಮಂದಣ್ಣ ಅವರ ಲಿಪ್ ಲಾಕ್ ದೃಶ್ಯಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದೊಂದು ರೀತಿಯ ಚರ್ಚೆ ನಡೆಯುತ್ತಿದೆ. ಕೆಲವರು ನಟಿಯನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅವರನ್ನು ತೆಗಳಿದ್ದಾರೆ. ‘ಅನಿಮಲ್’ ಚಿತ್ರಕ್ಕೆ ಭೂಷಣ್ ಕುಮಾರ್, ಪ್ರಣಯ್ ರೆಡ್ಡಿ ವಂಗ ಮೊದಲಾದವರು ಬಂಡವಾಳ ಹೂಡಿದ್ದಾರೆ. ರಣಬೀರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Sat, 28 October 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ