AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?

ಸೆಲೆಬ್ರಿಟಿಗಳ ಜೀವನದಲ್ಲಿ ಲವ್​ ಮತ್ತು ಬ್ರೇಕಪ್​ ತುಂಬ ಕಾಮನ್​ ಎಂಬಂತೆ ಆಗಿದೆ. ಈಗ ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ವಿಚಾರದ ಬಗ್ಗೆ ಒಂದು ಅನುಮಾನ ಮೂಡಿದೆ.

Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jul 06, 2023 | 6:22 PM

Share

ರಿಲೇಷನ್​ಶಿಪ್ ವಿಚಾರದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಾಧ್ಯವಾದಷ್ಟು ಗೌಪ್ಯತೆ ಕಾಯ್ದುಕೊಳ್ಳುತ್ತಾರೆ. ರಕ್ಷಿತ್​ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದುಕೊಂಡ ಬಳಿಕ ಅವರು ವೃತ್ತಿಜೀವನದ ಕಡೆಗೆ ಹೆಚ್ಚು ಗಮನ ಹರಿಸಿದರು. ಹಾಗಿದ್ದರೂ ಕೂಡ ಅವರು ವೈಯಕ್ತಿಕ ಕಾರಣಕ್ಕಾಗಿ ಆಗಾಗ ಸುದ್ದಿ ಆಗುತ್ತಲೇ ಇದ್ದರು. ಟಾಲಿವುಡ್​ ನಟ ವಿಜಯ್​ ದೇವರಕೊಂಡ (Vijay Devarakonda) ಜೊತೆ ರಶ್ಮಿಕಾ ಮಂದಣ್ಣ ಹೆಚ್ಚು ಆಪ್ತವಾಗಿದ್ದಾರೆ. ಆದರೆ ತಮ್ಮ ರಿಲೇಷನ್​ಶಿಪ್​ ಬಗ್ಗೆ ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿಲ್ಲ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ನಡುವೆ ಬಿರುಕು ಮೂಡಿರಬಹುದೇ ಎಂಬ ಅನುಮಾನ ಶುರುವಾಗಿದೆ. ಬ್ರೇಕಪ್​ (Breakup) ಸುದ್ದಿಗೆ ಪೂರಕವಾಗುವಂತಹ ವಿಡಿಯೋವನ್ನು ರಶ್ಮಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ನಮ್ಮನ್ನು ಯಾರಾದರೂ ಬಿಟ್ಟು ಹೋದರೆ ಅದರ ಬಗ್ಗೆ ಜಾಸ್ತಿ ಚಿಂತೆ ಮಾಡಬಾರದು. ಆ ಬೆಳವಣಿಗೆಗೆ ಒಂದು ಅರ್ಥ ಇರುತ್ತದೆ. ಕಾಲ ಕಳೆದಂತೆ ಎಲ್ಲ ನೋವುಗಳು ಮಾಯವಾಗುತ್ತವೆ. ಹೊಸ ಜೀವನ ಸಿಗುತ್ತದೆ ಎಂಬರ್ಥ ಬರುವಂತಹ ಮೋಟಿವೇಷನಲ್​ ವಿಡಿಯೋವನ್ನು ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಎಲ್ಲರ ತಲೆಯಲ್ಲೂ ಅನುಮಾನದ ಪ್ರಶ್ನೆ ಹುಟ್ಟಿಕೊಂಡಿದೆ. ವಿಜಯ್​ ದೇವರಕೊಂಡ ಜೊತೆಗಿನ ಬ್ರೇಕಪ್​ಗೆ ಮುನ್ಸೂಚನೆಯಾಗಿ ಅವರು ಈ ವಿಡಿಯೋ ಹಂಚಿಕೊಂಡಿರಬಹುದೇ ಎಂದು ನೆಟ್ಟಿಗರು ಅನುಮಾನಪಟ್ಟಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ವೃತ್ತಿ ಏಳಿಗೆಗೆ ಕಾರಣವಾಗಿದ್ದ ಸ್ವಾಮೀಜಿಯಿಂದ ವಿಶೇಷ ಪೂಜೆ ಮಾಡಿಸಿದ ಮತ್ತೊಬ್ಬ ನಟಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದು ‘ಗೀತ ಗೋವಿಂದಂ’ ಸಿನಿಮಾದಲ್ಲಿ. ಆ ಚಿತ್ರ ಸೂಪರ್​ ಹಿಟ್​ ಆಯಿತು. ಬಳಿಕ ಅವರು ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡರು. ಸಾರ್ವಜನಿಕವಾಗಿ ಅವರಿಬ್ಬರು ಅನೇಕ ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ಹಾಗಾಗಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಪ್ರೀತಿ ಚಿಗುರಿದೆ ಎಂದೇ ಜನರು ಭಾವಿಸಿದ್ದಾರೆ. ಈ ನಡುವೆ ಬ್ರೇಕಪ್​ ಬಗ್ಗೆ ಅಂತೆ-ಕಂತೆಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಪ್ರತಿಯೊಂದು ವಿಡಿಯೋ, ಫೋಟೋಗಳಿಗೂ ನೆಟ್ಟಿಗರು ಬೇರೆ ಬೇರೆ ಅರ್ಥ ಕಲ್ಪಿಸುತ್ತಾರೆ. ರಶ್ಮಿಕಾ ಮಂದಣ್ಣ ಅವರ ವಿಚಾರದಲ್ಲೂ ಹಾಗೆಯೇ ಆಗಿದೆ. ವ್ಯಕ್ತಿಗಳನ್ನು ಕಳೆದುಕೊಳ್ಳುವ ಬಗ್ಗೆ ರಶ್ಮಿಕಾ ಮಂದಣ್ಣ ಅವರು ಮೋಟಿವೇಷನಲ್​ ವಿಡಿಯೋ ಹಂಚಿಕೊಂಡಿರುವುದರಿಂದ ಇದು ಅವರ ಬ್ರೇಕಪ್​ಗೆ ಸಂಬಂಧಿಸಿದ್ದೇ ಇರಬಹುದು ಎಂದು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಸ್ಪಷ್ಟನೆ ನೀಡುವ ತನಕ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ