AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 2ನೇ ವಾರದಲ್ಲಿ ರಶ್ಮಿಕಾ-ವಿಜಯ್​ ದೇವರಕೊಂಡ ನಿಶ್ಚಿತಾರ್ಥ? ಕೇಳಿಬರ್ತಿದೆ ಗುಸುಗುಸು

ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ಆತ್ಮೀಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಅವರು ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿಶ್ಚಿತಾರ್ಥದ ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಅವರಿಬ್ಬರು ಮದುವೆ ಆಗಬೇಕು ಎಂಬುದು ಅಭಿಮಾನಿಗಳ ಆಸೆ ಕೂಡ ಹೌದು.

ಫೆಬ್ರವರಿ 2ನೇ ವಾರದಲ್ಲಿ ರಶ್ಮಿಕಾ-ವಿಜಯ್​ ದೇವರಕೊಂಡ ನಿಶ್ಚಿತಾರ್ಥ? ಕೇಳಿಬರ್ತಿದೆ ಗುಸುಗುಸು
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jan 08, 2024 | 5:16 PM

Share

ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ ಬಳಿಕ ಅವರ ನಡುವೆ ಆಪ್ತತೆ ಬೆಳೆಯಿತು. ತಮ್ಮಿಬ್ಬರ ರಿಲೇಷನ್​ಶಿಪ್​ ಬಗ್ಗೆ ಅವರು ಈವರೆಗೂ ಮೌನ ಮುರಿದಿಲ್ಲ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ (Vijay Devarakonda) ಅವರು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಫೆಬ್ರವರಿ ಎರಡನೇ ವಾರದಲ್ಲಿ ಅವರ ಎಂಗೇಜ್​ಮೆಂಟ್​ (Rashmika Mandanna Engagement) ನಡೆಯಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಚಿತ್ರರಂಗದಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ. ಅವರಿಬ್ಬರ ಆನ್​ಸ್ಕ್ರೀನ್​ ಕೆಮಿಸ್ಟ್ರಿ ಎಂದರೆ ಅಭಿಮಾನಿಗಳಿಗೆ ಇಷ್ಟ. ರಿಯಲ್​ ಲೈಫ್​ನಲ್ಲೂ ಅವರ ನಡುವೆ ಉತ್ತಮವಾದ ಬಾಂಧವ್ಯ ಇದೆ. ಒಟ್ಟಿಗೆ ಅವರು ವಿದೇಶ ಪ್ರವಾಸ ಮಾಡಿದ್ದಾರೆ. ಅನೇಕ ಹಬ್ಬಗಳನ್ನು ವಿಜಯ್​ ದೇವರಕೊಂಡ ಅವರ ಮನೆಯಲ್ಲಿ ರಶ್ಮಿಕಾ ಆಚರಿಸಿದ್ದಾರೆ.

ಇದನ್ನೂ ಓದಿ: ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?

ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ಆತ್ಮೀಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಅವರು ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರಿಬ್ಬರು ಮದುವೆ ಆಗಬೇಕು ಎಂಬುದು ಅಭಿಮಾನಿಗಳ ಆಸೆ ಕೂಡ ಹೌದು. ಸದ್ಯಕ್ಕಂತೂ ರಶ್ಮಿಕಾ ಅವರಾಗಲಿ, ವಿಜಯ್​ ದೇವರಕೊಂಡ ಅವರಾಗಲಿ ನಿಶ್ಚಿತಾರ್ಥದ ಸುದ್ದಿ ಬಗ್ಗೆ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ವೃತ್ತಿಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಇಬ್ಬರೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ರಶ್ಮಿಕಾ ನಟಿಸಿದ ‘ಅನಿಮಲ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಅವರಿಗೆ ಬರುವ ಆಫರ್​ಗಳು ಹೆಚ್ಚಾಗಿವೆ. ವಿಜಯ್​ ದೇವರಕೊಂಡ ಅವರು ಕೂಡ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಂದರ್ಭದಲ್ಲಿ ಅವರು ಪರ್ಸನಲ್ ಲೈಫ್​ ಬಗ್ಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ