Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 2ನೇ ವಾರದಲ್ಲಿ ರಶ್ಮಿಕಾ-ವಿಜಯ್​ ದೇವರಕೊಂಡ ನಿಶ್ಚಿತಾರ್ಥ? ಕೇಳಿಬರ್ತಿದೆ ಗುಸುಗುಸು

ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ಆತ್ಮೀಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಅವರು ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಿಶ್ಚಿತಾರ್ಥದ ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಅವರಿಬ್ಬರು ಮದುವೆ ಆಗಬೇಕು ಎಂಬುದು ಅಭಿಮಾನಿಗಳ ಆಸೆ ಕೂಡ ಹೌದು.

ಫೆಬ್ರವರಿ 2ನೇ ವಾರದಲ್ಲಿ ರಶ್ಮಿಕಾ-ವಿಜಯ್​ ದೇವರಕೊಂಡ ನಿಶ್ಚಿತಾರ್ಥ? ಕೇಳಿಬರ್ತಿದೆ ಗುಸುಗುಸು
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: Jan 08, 2024 | 5:16 PM

ನಟ ವಿಜಯ್​ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ ಬಳಿಕ ಅವರ ನಡುವೆ ಆಪ್ತತೆ ಬೆಳೆಯಿತು. ತಮ್ಮಿಬ್ಬರ ರಿಲೇಷನ್​ಶಿಪ್​ ಬಗ್ಗೆ ಅವರು ಈವರೆಗೂ ಮೌನ ಮುರಿದಿಲ್ಲ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ (Vijay Devarakonda) ಅವರು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಫೆಬ್ರವರಿ ಎರಡನೇ ವಾರದಲ್ಲಿ ಅವರ ಎಂಗೇಜ್​ಮೆಂಟ್​ (Rashmika Mandanna Engagement) ನಡೆಯಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಚಿತ್ರರಂಗದಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ. ಅವರಿಬ್ಬರ ಆನ್​ಸ್ಕ್ರೀನ್​ ಕೆಮಿಸ್ಟ್ರಿ ಎಂದರೆ ಅಭಿಮಾನಿಗಳಿಗೆ ಇಷ್ಟ. ರಿಯಲ್​ ಲೈಫ್​ನಲ್ಲೂ ಅವರ ನಡುವೆ ಉತ್ತಮವಾದ ಬಾಂಧವ್ಯ ಇದೆ. ಒಟ್ಟಿಗೆ ಅವರು ವಿದೇಶ ಪ್ರವಾಸ ಮಾಡಿದ್ದಾರೆ. ಅನೇಕ ಹಬ್ಬಗಳನ್ನು ವಿಜಯ್​ ದೇವರಕೊಂಡ ಅವರ ಮನೆಯಲ್ಲಿ ರಶ್ಮಿಕಾ ಆಚರಿಸಿದ್ದಾರೆ.

ಇದನ್ನೂ ಓದಿ: ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?

ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ಆತ್ಮೀಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಅವರು ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರಿಬ್ಬರು ಮದುವೆ ಆಗಬೇಕು ಎಂಬುದು ಅಭಿಮಾನಿಗಳ ಆಸೆ ಕೂಡ ಹೌದು. ಸದ್ಯಕ್ಕಂತೂ ರಶ್ಮಿಕಾ ಅವರಾಗಲಿ, ವಿಜಯ್​ ದೇವರಕೊಂಡ ಅವರಾಗಲಿ ನಿಶ್ಚಿತಾರ್ಥದ ಸುದ್ದಿ ಬಗ್ಗೆ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ವೃತ್ತಿಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಇಬ್ಬರೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ರಶ್ಮಿಕಾ ನಟಿಸಿದ ‘ಅನಿಮಲ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಅವರಿಗೆ ಬರುವ ಆಫರ್​ಗಳು ಹೆಚ್ಚಾಗಿವೆ. ವಿಜಯ್​ ದೇವರಕೊಂಡ ಅವರು ಕೂಡ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಂದರ್ಭದಲ್ಲಿ ಅವರು ಪರ್ಸನಲ್ ಲೈಫ್​ ಬಗ್ಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!