AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಮುಗಿಸಿ ಒಟ್ಟಿಗೆ ಕೆಲಸಕ್ಕೆ ಮರಳಿದ ವಿಜಯ್-ರಶ್ಮಿಕಾಗೆ ಭರ್ಜರಿ ಸ್ವಾಗತ

Rashmika Mandanna and Vijay Deverakonda: ವಿವಾಹದ ಬಳಿಕ ರಶ್ಮಿಕಾ ಮತ್ತು ವಿಜಯ್ ಥಾಯ್ಲೆಂಡ್​​ಗೆ ಹನಿಮೂನ್ ಪ್ರವಾಸಕ್ಕೆ ಹೋಗಿ ಬಂದರು. ಇದೀಗ ಮದುವೆಯಾಗಿ ತಿಂಗಳ ಬಳಿಕ ಇಬ್ಬರೂ ಕೆಲಸಕ್ಕೆ ಮರಳಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ‘ರಣಬಲಿ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸೆಟ್​​ಗೆ ಒಟ್ಟಿಗೆ ಮರಳಿದ್ದಾರೆ. ನವ ವಧು-ವರರನ್ನು ಆರತಿ ಮಾಡುವ ಮೂಲಕ ಸೆಟ್​​ಗೆ ಸ್ವಾಗತಿಸಿರುವುದು ವಿಶೇಷ.

ಹನಿಮೂನ್ ಮುಗಿಸಿ ಒಟ್ಟಿಗೆ ಕೆಲಸಕ್ಕೆ ಮರಳಿದ ವಿಜಯ್-ರಶ್ಮಿಕಾಗೆ ಭರ್ಜರಿ ಸ್ವಾಗತ
Vijay Rashmika
ಮಂಜುನಾಥ ಸಿ.
|

Updated on: Mar 27, 2026 | 12:44 PM

Share

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ದಂಪತಿ ಕಳೆದ ತಿಂಗಳು ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಜೈಪುರದಲ್ಲಿ ನಡೆದ ಇವರ ಮದುವೆ ದೇಶದಾದ್ಯಂತ ಸುದ್ದಿ ಆಗಿತ್ತು, ರಶ್ಮಿಕಾ-ವಿಜಯ್ ಅವರ ಫೋಟೊಗಳು ಸಖತ್ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ಅದ್ಧೂರಿ ರಿಸೆಪ್ಷನ್ ಸಹ ನಡೆಯಿತು. ವಿವಾಹದ ಬಳಿಕ ಥಾಯ್ಲೆಂಡ್​​ಗೆ ಹನಿಮೂನ್ ಪ್ರವಾಸಕ್ಕೂ ಸಹ ಈ ಜೋಡಿ ಹೋಗಿ ಬಂತು. ಇದೀಗ ಮದುವೆಯಾಗಿ ತಿಂಗಳ ಬಳಿಕ ಇಬ್ಬರೂ ಕೆಲಸಕ್ಕೆ ಮರಳಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ‘ರಣಬಲಿ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸೆಟ್​​ಗೆ ಒಟ್ಟಿಗೆ ಮರಳಿದ್ದಾರೆ. ನವ ವಧು-ವರರನ್ನು ಆರತಿ ಮಾಡುವ ಮೂಲಕ ಸೆಟ್​​ಗೆ ಸ್ವಾಗತಿಸಿರುವುದು ವಿಶೇಷ.

ಮದುವೆಗೆ ಮುಂಚೆ ಈ ಜೋಡಿ ‘ರಣಬಲಿ’ ಸಿನಿಮಾ ಒಪ್ಪಿಕೊಂಡಿದ್ದರು. ಇದೀಗ ಮದುವೆ ಬಳಿಕ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಒಟ್ಟಿಗೆ ಸೆಟ್​​ಗೆ ಬಂದಿದ್ದಾರೆ. ‘ರಣಬಲಿ’ ಒಂದು ಪಿರಿಯಡ್ ಆಕ್ಷನ್ ಡ್ರಾಮಾ ಆಗಿದ್ದು, ರಾಹುಲ್ ಸಂಕೃತ್ಯನ್ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಒಂದು ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಗಮನ ಸೆಳೆದಿತ್ತು. ಮದುವೆ ಬಳಿಕ ಇಬ್ಬರೂ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಜೊತೆಗೆ ಇಬ್ಬರೂ ಒಟ್ಟಿಗೆ ನಟಿಸುತ್ತಿರುವ ಮೂರನೇ ಸಿನಿಮಾ ಇದಾಗಿದೆ.

ಇದನ್ನೂ ಓದಿ:ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು?

ವಿಜಯ್ ಹಾಗೂ ರಶ್ಮಿಕಾ ಅವರಿಗೆ ‘ರಣಬಲಿ’ ಸೆಟ್​​ನಲ್ಲಿ ಆರತಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋನಲ್ಲಿ ರಶ್ಮಿಕಾ, ಹಣೆಗೆ ಕುಂಕುಮ, ಕೆನ್ನೆಗೆ ಅರಿಶಿಣ ಧರಿಸಿ ಬಹಳ ಖುಷಿಯಿಂದ ಆರತಿ ಮಾಡಿಸಿಕೊಂಡಿದ್ದಾರೆ. ಜೊತೆಯಲ್ಲಿ ವಿಜಯ್ ದೇವರಕೊಂಡ ಸಹ ಇದ್ದಾರೆ. ಇಡೀ ಚಿತ್ರತಂಡ ನೂತನ ವಧು-ವರರಿಗೆ ಮದುವೆಯ ಶುಭಾಶಯಗಳನ್ನು ಕೋರಿದೆ.

ರಶ್ಮಿಕಾ ಮಂದಣ್ಣ ನಟಿಸಿರುವ ‘ಕಾಕ್​​ಟೇಲ್ 2’ ಸಿನಿಮಾ ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಇದೀಗ ಅವರು ‘ರಣಬಲಿ’ ಸಿನಿಮಾನಲ್ಲಿ ನಟಿಸಲು ಆರಂಭಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂದು ಹಿಂದಿ ಸಿನಿಮಾ ಹಾಗೂ ಅಲ್ಲು ಅರ್ಜುನ್ ಜೊತೆಗೆ ಅಟ್ಲಿ ನಿರ್ದೇಶಿಸಲಿರುವ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ಸಹ ನಟಿಸಲಿದ್ದಾರೆ. ಇನ್ನು ವಿಜಯ್ ದೇವರಕೊಂಡ ‘ರಣಬಲಿ’ಯ ಜೊತೆಗೆ ‘ರೌಡಿ ಜನಾರ್ಧನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ರಣಬಲಿ’ ಬಳಿಕ ರಶ್ಮಿಕಾ ಮತ್ತು ವಿಜಯ್ ಅವರು ಒಟ್ಟಿಗೆ ‘ಗೀತಾ ಗೋವಿಂದಂ 2’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ