AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮುಚ್ಚುಮರೆ ಇಲ್ಲದೆ ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಅವರ ಡೇಟಿಂಗ್ ವದಂತಿಗಳನ್ನು ಮತ್ತಷ್ಟು ಬಲಪಡಿಸಿದೆ. ಆದರೆ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ರಶ್ಮಿಕಾ ಅವರ 'ಕುಬೇರ' ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Rashmika Mandanna: ಮುಚ್ಚುಮರೆ ಇಲ್ಲದೆ ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್
ವಿಜಯ್ - ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 18, 2025 | 7:25 AM

Share

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ಪ್ರೀತಿಯಲ್ಲಿ ಇದ್ದಾರೆ ಎಂಬ ಅನುಮಾನ ಅಭಿಮಾನಿಗಳಿಗೆ ಮೊದಲಿನಿಂದಲೂ ಇದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ. ಆದರೆ, ಅವರ ಸುತ್ತಾಟದಿಂದ ಈ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜೂನ್ 20ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಇಡೀ ತಂಡ ಬ್ಯುಸಿ ಇದೆ. ಇದರ ಭಾಗವಾಗಿ ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ವಿಜಯ್ ಕೂಡ ಅಲ್ಲಿಯೇ ಇದ್ದರು. ಇಬ್ಬರೂ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರಿನಲ್ಲಿ ಒಟ್ಟಾಗಿ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೇಳೆ ಇಬ್ಬರೂ ಮುಖವನ್ನು ಮುಚ್ಚಿಕೊಂಡಿದ್ದರು.

ಇದನ್ನೂ ಓದಿ
Image
ಕೇವಲ 25 ಲಕ್ಷ ರೂ. ಗಳಿಸಿದ ‘ಥಗ್ ಲೈಫ್; ಕರ್ನಾಟಕದಲ್ಲಿ ರಿಲೀಸ್ ಆದರೆ ನಷ್ಟ
Image
ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ
Image
ರವಿಚಂದ್ರನ್​ಗೆ ನೋವಾಗದಂತೆ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ತಂದೆ ವೀರಸ್ವಾಮಿ

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸದ್ಯ ತಮ್ಮದೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇವರು ಈವರೆಗೆ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇವರು ಮುಂದೊಂದು ದಿನ ನಿಶ್ಚಿತಾರ್ಥ ಘೋಷಣೆ ಮಾಡಿದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ರಶ್ಮಿಕಾ ಹಾಗೂ ವಿಜಯ್ ಅನೇಕ ಕಡೆಗಳಲ್ಲಿ ಒಟ್ಟಾಗಿ ಸುತ್ತಾಟ ನಡೆಸುತ್ತಾರೆ. ಆದರೆ, ಇವರು ಒಟ್ಟಿಗೆ ಇರೋ ಫೋಟೋನ ಪೋಸ್ಟ್ ಮಾಡಿಲ್ಲ. ಆದರೆ, ವೆಕೇಶನ್ ವೇಳೆ ತೆಗೆದುಕೊಂಡ ಫೋಟೋ ಪೋಸ್ಟ್ ಮಾಡುವಾಗ ಹಿಂದಿರೋ ಬ್ಯಾಕ್​ಗ್ರೌಂಡ್ ಮೂಲಕ ಇಬ್ಬರೂ ಒಟ್ಟಿಗೆ ಇದ್ದ ವಿಚಾರ ಗೊತ್ತಾಗುತ್ತದೆ.

ಇದನ್ನೂ ಓದಿ:  ಸಲ್ಮಾನ್-ರಶ್ಮಿಕಾ ಸಿನಿಮಾದಿಂದ 91 ಕೋಟಿ ನಷ್ಟ, ತನಿಖೆಯಿಂದ ಗೊತ್ತಾಯ್ತು ಹಲವು ವಿಷಯ

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಿದ್ದರು. ಅವರಿಗೆ ವಿಜಯ್ ಅವರಲ್ಲಿ ಯಾವ ವಿಷಯ ಇಷ್ಟ ಎಂದು ಕೇಳಿದಾಗ ‘ಎಲ್ಲಾ ವಿಚಾರಗಳೂ ಇಷ್ಟ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಸದ್ಯ ರಶ್ಮಿಕಾಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಹೀಗಾಗಿ, ಅವರು ಸದ್ಯಕ್ಕಂತೂ ವಿವಾಹ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ‘ಕುಬೇರ’ ಜೂನ್ 20ಕ್ಕೆ ರಿಲೀಸ್ ಆಗುತ್ತಿದೆ. ಇದು ತಮಿಳು ಸಿನಿಮಾ. ಈ ಚಿತ್ರಕ್ಕೆ ಧನುಷ್ ಹೀರೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!