ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಂತರದ ಸಂಪ್ರದಾಯಗಳು ಎಲ್ಲರ ಗಮನ ಸೆಳೆದಿವೆ. ಮದುವೆ ಬಳಿಕ ತಿರುಪತಿಗೆ ಭೇಟಿ, ನಂತರ ವಿಜಯ್ ದೇವರಕೊಂಡ ಹುಟ್ಟೂರು ನಾಗರ್ ಕರ್ನೋಲ್‌ಗೆ ದಂಪತಿ ತೆರಳಿದ್ದಾರೆ. ಫಾರ್ಮ್‌ಹೌಸ್‌ನಲ್ಲಿ ಸತ್ಯನಾರಾಯಣ ಪೂಜೆ ನಡೆಸಿ, 2000ಕ್ಕೂ ಹೆಚ್ಚು ಜನರಿಗೆ ಅನ್ನದಾನ ಮಾಡಿದರು. ಟೀಕೆಗಳನ್ನು ಲೆಕ್ಕಿಸದೆ ಈ ಜೋಡಿ ಸಂತೋಷದಿಂದ ಜೀವನ ಸಾಗಿಸುತ್ತಿದೆ.

ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ
ರಶ್ಮಿಕಾ-ವಿಜಯ್

Updated on: Mar 02, 2026 | 3:08 PM

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆಗಿದ್ದಾರೆ. ಇವರ ಮದುವೆ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಯಿತು. ಇವರ ವಿವಾಹ ಫೋಟೋಗೆ ಕೋಟಿ ಕೋಟಿ ಲೈಕ್ಸ್ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಪತಿ ವಿಜಯ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಈಗ ಇವರು ಮದುವೆ ಬಳಿಕವೂ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

ಕೆಲವರು ಕೆಲಸದ ಕಾರಣಕ್ಕೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದರೆ, ಮದುವೆ ಬಳಿಕ ಹುಟ್ಟೂರಿಗೆ ಭೇಟಿ ಕೊಡೋದು ಸಂಪ್ರದಾಯ. ಈ ಸಂಪ್ರದಾಯವನ್ನು ವಿಜಯ್ ಹಾಗೂ ರಶ್ಮಿಕಾ ಮರೆತಿಲ್ಲ. ಹೌದು, ಮದುವೆ ಆದ ಬಳಿಕ ವಿಜಯ್ ದೇವರಕೊಂಡ ಸ್ವಂತ ಊರಿಗೆ ದಂಪತಿ ತೆರಳಿದ್ದಾರೆ. ತೆಲಂಗಾಣದ ನಾಗರ್ ಕರ್ನೋಲ್ ತುಮ್ಮನ್​ಪೆಟ್​ಗೆ ಭೇಟಿ ಕೊಟ್ಟಿದ್ದಾರೆ.

ವಿಜಯ್ ಅವರು ಸ್ವಂತ ಊರಲ್ಲಿ ಫಾರ್ಮ್​​ಹೌಸ್ ಹೊಂದಿದ್ದಾರೆ. ಅಲ್ಲಿ ಇಂದು (ಮಾರ್ಚ್ 2) ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ಅಲ್ಲದೆ, ಗ್ರಾಮದ 2000ಕ್ಕೂ ಹೆಚ್ಚು ಜನಕ್ಕೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ರಶ್ಮಿಕಾ ಹಾಗೂ ವಿಜಯ್ ಊರಿಗೆ ಬರುತ್ತಿದ್ದಂತೆ ಎಲ್ಲರೂ ಅವರನ್ನು ಪ್ರೀತಿಯಿಂದ ಸ್ವಾಗತಿಸಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ತಿರುಪತಿಗೆ ಭೇಟಿ ನೀಡಿದಾಗಲೂ ರಶ್ಮಿಕಾ ಹಾಗೂ ವಿಜಯ್ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ವಿಷಯವನ್ನು ದಂಪತಿ ಮುಚ್ಚಿಟ್ಟಿದ್ದರು. ವಿವಾಹ ಆಗುವ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ಸಿನಿಮಾ ಕೂಡ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ರಶ್ಮಿಕಾ ವಿವಾಹದ ಕುರಿತು ಒಂದು ವರ್ಗದ ಜನರು ಅಪಸ್ವರ ತೆಗೆದಿದ್ದಾರೆ. ಆದರೆ, ಇದಕ್ಕೆ ರಶ್ಮಿಕಾ ಮಂದಣ್ಣ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಟೀಕೆಗಳಿಗೆ ಕಿವಿಕೊಡದೆ ಇಬ್ಬರೂ ಹಾಯಾಗಿ ಜೀವನ ಸಾಗಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us