AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಸಹಾಯಕಿ ಮೇಲೆ ರೇಗಾಡಿದ ರಶ್ಮಿಕಾ ಮಂದಣ್ಣ: ಕ್ಯಾಮೆರಾ ಆಫ್​ ಮಾಡಿಸಿದ ಸಿಬ್ಬಂದಿ; ಏನ್​ ಡ್ರಾಮಾ ಗುರೂ

Rashmika Mandanna Viral Video: ‘ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ. ಟ್ಯಾಲೆಂಟ್​ಗೆ ಎಲ್ಲಿ ಬೆಲೆ ಇದೆಯೋ ಅಲ್ಲಿಗೆ ನಾನು ಹೋಗುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಅವರು ಸಿಟ್ಟು ಮಾಡಿಕೊಂಡಿದ್ದಾರೆ.

Rashmika Mandanna: ಸಹಾಯಕಿ ಮೇಲೆ ರೇಗಾಡಿದ ರಶ್ಮಿಕಾ ಮಂದಣ್ಣ: ಕ್ಯಾಮೆರಾ ಆಫ್​ ಮಾಡಿಸಿದ ಸಿಬ್ಬಂದಿ; ಏನ್​ ಡ್ರಾಮಾ ಗುರೂ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: May 26, 2023 | 2:53 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಒಂದು ವಿಡಿಯೋ ವೈರಲ್​ ಆಗಿದೆ. ತಮಗೆ ಮೇಕಪ್​ ಮಾಡಲು ಬಂದ ಸಹಾಯಕಿಯ ಮೇಲೆ ಅವರು ರೇಗಾಡಿದ್ದಾರೆ. ‘ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ. ಟ್ಯಾಲೆಂಟ್​ಗೆ ಎಲ್ಲಿ ಬೆಲೆ ಇದೆಯೋ ಅಲ್ಲಿಗೆ ನಾನು ಹೋಗುತ್ತೇನೆ’ ಎಂದು ಅವರು ಸಿಟ್ಟು ಮಾಡಿಕೊಂಡಿದ್ದಾರೆ. ಆ ದೃಶ್ಯವನ್ನು ಮೊಬೈಲ್​ನಲ್ಲಿ ಶೂಟ್​ ಮಾಡಲಾಗುತ್ತಿತ್ತು. ರೆಕಾರ್ಡಿಂಗ್​ ನಿಲ್ಲಿಸುವಂತೆ ರಶ್ಮಿಕಾ ಅವರ ಸಿಬ್ಬಂದಿ ತಾಕೀತು ಮಾಡಿದ್ದಾರೆ. ಈ ವಿಡಿಯೋ (Rashmika Mandanna Viral Video) ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ಅಷ್ಟಕ್ಕೂ ರಶ್ಮಿಕಾ ಮಂದಣ್ಣ ಅವರು ಹೀಗೆಲ್ಲ ಕೂಗಾಡಿದ್ದು ಯಾಕೆ? ಅವರಿಗೆ ಕಿರಿಕಿರಿ ಆಗುವಂತಹ ಘಟನೆ ಏನಾಯಿತು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡರು. ಆದರೆ ಇದೆಲ್ಲವೂ ಡ್ರಾಮಾ ಎಂಬುದು ಈಗ ಬಯಲಾಗಿದೆ. ರಶ್ಮಿಕಾ ಮಂದಣ್ಣ ಅವರು ಈ ರೀತಿ ಮಾಡಿದ್ದು ಒಂದು ಖಾಸಗಿ ಕಂಪನಿಯ ಜಾಹೀರಾತಿನ ಸಲುವಾಗಿ. ಆ ಜಾಹೀರಾತು (Rashmika Mandanna Advertisement) ಪ್ರಸಾರ ಆಗುವುದಕ್ಕೂ ಮುನ್ನ ನೆಟ್ಟಿಗರಲ್ಲಿ ಕುತೂಹಲ ಮೂಡಿಸುವ ಸಲುವಾಗಿ ಈ ರೀತಿ ವಿಡಿಯೋ ಮಾಡಿ ವೈರಲ್​ ಮಾಡಿಸಲಾಗಿದೆ. ಈ ಸತ್ಯ ಗೊತ್ತಾದ ಬಳಿಕ ನೆಟ್ಟಿಗರು ‘ಏನ್​ ಡ್ರಾಮಾ ಗುರೂ’ ಅಂತ ಕಮೆಂಟ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಲವು ಕಂಪನಿಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಅದರಿಂದ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತದೆ. ಆದರೆ ಕೆಲವು ವಿವಾದಗಳು ಕೂಡ ಅಂಟಿಕೊಳ್ಳುತ್ತವೆ. ಈ ಹಿಂದೆ ಪುರುಷರ ಒಳ ಉಡುಪಿನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಂಡಿದ್ದ ರೀತಿಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಟ್ರೋಲ್​ಗಳಿಗೆಲ್ಲ ರಶ್ಮಿಕಾ ತಲೆ ಕೆಡಿಸಿಕೊಂಡಿಲ್ಲ. ತಮ್ಮ ಕೆಲಸದ ಮೇಲೆ ಅವರು ಸಂಪೂರ್ಣ ಗಮನ ಹರಿಸಿದ್ದಾರೆ.

ಇತ್ತೀಚೆಗೆ ಚಿಕನ್​ ಬರ್ಗರ್​ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಆದರೆ ತಾವು ನಾನ್​-ವೆಜ್​ ತಿನ್ನಲ್ಲ ಎಂದು ಅವರು ಈ ಹಿಂದೆ ಹೇಳಿಕೊಂಡಿದ್ದರು. ಹಾಗಾಗಿ ರಶ್ಮಿಕಾ ಮಂದಣ್ಣ ಅವರ ಈ ದ್ವಂದ್ವನೀತಿಯನ್ನು ನೆಟ್ಟಿಗರು ಪ್ರಶ್ನಿಸಿದ್ದರು. ‘ರಶ್ಮಿಕಾ ಮಂದಣ್ಣ ಅವರು ಹೊಸ ಜಾಹೀರಾತಿನಲ್ಲಿ ನಾನ್​-ವೆಜ್​ ತಿನ್ನುತ್ತಿದ್ದಾರೆ. ಆದರೆ ತಮ್ಮನ್ನು ತಾವು ಸಸ್ಯಾಹಾರಿ ಎಂದು ಹೇಳಿಕೊಂಡಿದ್ದರು. ಜನರಿಗೆ ಇದು ಇಷ್ಟ ಆಗಿಲ್ಲ. ನಮ್ಮನ್ನು ಮೂರ್ಖರನ್ನಾಗಿಸೋದು ನಿಲ್ಲಿಸಿ ಅಂತ ಜನರು ಕಮೆಂಟ್ ಮಾಡಿದ್ದಾರೆ. ಜನರ ಪ್ರತಿಕ್ರಿಯೆ​ ನೋಡಿದ ಜಾಹೀರಾತಿನ ಕಮೆಂಟ್​ ಆಯ್ಕೆಯನ್ನೇ ನಿಷ್ಕ್ರಿಯಗೊಳಿಸಲಾಗಿದೆ’ ಎಂದು ‘ಬಾಲಿವುಡ್​ ಗರಿಮಾ ಕುಮಾ​ರ್​’ ಎಂಬ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: Rashmika Mandanna: ಇದು ರಶ್ಮಿಕಾ ಮಂದಣ್ಣ ಅಂತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಈ ಫೋಟೋದ ಅಸಲಿಯತ್ತು ಏನು?

ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಕಾರಣದಿಂದ ಅವರನ್ನು ಅನೇಕ ಕಂಪನಿಗಳು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳುತ್ತಿವೆ. ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು​ ಫಾಲೋ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!