AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಹೊಸ ಪ್ರಾಜೆಕ್ಟ್​ ಘೋಷಿಸಿ, ಸೆ.4ಕ್ಕೆ ಟ್ರೇಲರ್ ರಿಲೀಸ್ ಎಂದ ರಶ್ಮಿಕಾ; ರೋಹಿತ್, ಗಂಗೂಲಿಗೇನು ಕೆಲಸ?

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ‘ಗುಡ್​ಬೈ’, ‘ಮಿಷನ್​ ಮಜ್ನು’, ‘ಅನಿಮಲ್​’ ಸಿನಿಮಾಗಳು ಅಧಿಕೃತವಾಗಿ ಘೋಷಣೆ ಆಗಿವೆ. ಈ ಮಧ್ಯೆ ‘ಮೆಗಾ ಬ್ಲಾಕ್​ಬಸ್ಟರ್’ ಘೋಷಿಸಲಾಗಿದೆ.

ಏಕಾಏಕಿ ಹೊಸ ಪ್ರಾಜೆಕ್ಟ್​ ಘೋಷಿಸಿ, ಸೆ.4ಕ್ಕೆ ಟ್ರೇಲರ್ ರಿಲೀಸ್ ಎಂದ ರಶ್ಮಿಕಾ; ರೋಹಿತ್, ಗಂಗೂಲಿಗೇನು ಕೆಲಸ?
TV9 Web
| Edited By: |

Updated on:Sep 02, 2022 | 10:45 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಹೊಸಹೊಸ ಸಿನಿಮಾ ಘೋಷಿಸುವ ಮೂಲಕ ಫ್ಯಾನ್ಸ್​ಗೆ ಖುಷಿ ನೀಡುತ್ತಿದ್ದಾರೆ. ಈಗ ಅವರು ಏಕಾಏಕಿ ಹೊಸ ಪ್ರಾಜೆಕ್ಟ್ ಘೋಷಿಸಿದ್ದಾರೆ. ಅದರ ಹೆಸರು ‘ಮೆಗಾ ಬ್ಲಾಕ್​​ಬಸ್ಟರ್​’! (Mega Blockbuster). ಸೆಪ್ಟೆಂಬರ್ 4ರಂದು ಇದರ ಟ್ರೇಲರ್ ಕೂಡ ರಿಲೀಸ್ ಆಗಲಿದೆ. ರಶ್ಮಿಕಾ ಯಾವಾಗ ಈ ಹೊಸ ಸಿನಿಮಾ ಒಪ್ಪಿಕೊಂಡರು, ಯಾವಾಗ ಶೂಟಿಂಗ್ ಮುಗಿಸಿದರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ ಎಂಬ ಚರ್ಚೆ ನಡೆಯುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ‘ಗುಡ್​ಬೈ’, ‘ಮಿಷನ್​ ಮಜ್ನು’, ‘ಅನಿಮಲ್​’ ಸಿನಿಮಾಗಳು ಅಧಿಕೃತವಾಗಿ ಘೋಷಣೆ ಆಗಿವೆ. ಇದಲ್ಲದೆ, ಟೈಗರ್ ಶ್ರಾಫ್ ಹಾಗೂ ಕಾರ್ತಿಕ್ ಆರ್ಯನ್ ಮಾಡುತ್ತಿರುವ ಎರಡು ಪ್ರತ್ಯೇಕ ಸಿನಿಮಾಗಳಿಗೆ ರಶ್ಮಿಕಾ ನಾಯಕಿ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ಈ ಮಧ್ಯೆ ‘ಮೆಗಾ ಬ್ಲಾಕ್​ಬಸ್ಟರ್’ ಘೋಷಿಸಲಾಗಿದೆ. ಮೂಲಗಳ ಪ್ರಕಾರ ಇದು ಜಾಹೀರಾತಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಹಲವು ಸೆಲೆಬ್ರಿಟಿಗಳು ಇದೇ ಮಾದರಿಯ ಪೋಸ್ಟರ್​ ಶೇರ್ ಮಾಡಿಕೊಂಡಿರುವುದು ಈ ರೀತಿಯ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

‘ಮೆಗಾ ಬ್ಲಾಕ್​​ಬಸ್ಟರ್’ ಎಂದು ಟೈಟಲ್ ಬರೆದುಕೊಂಡಿರುವ ಪೋಸ್ಟರ್​​ ಅನ್ನು ರಶ್ಮಿಕಾ ಮಾತ್ರವಲ್ಲ, ತ್ರಿಷಾ ಕೃಷ್ಣ, ತಮಿಳು ನಟ ಕಾರ್ತಿ, ಕಪಿಲ್ ಶರ್ಮಾ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೌರವ್​ ಗಂಗೂಲಿ ಮೊದಲಾದವರು ಹಂಚಿಕೊಂಡಿದ್ದಾರೆ. ಪೋಸ್ಟರ್​ನಲ್ಲಿ ಯಾವುದೇ ನಿರ್ದೇಶಕರು, ನಿರ್ಮಾಪಕರ ಹೆಸರು ಇಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿದೆ.

ಇದನ್ನೂ ಓದಿ: ಬಾಲಿವುಡ್​ನ ಮತ್ತೋರ್ವ ಸ್ಟಾರ್ ನಟನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ?; ಕೊಡಗಿನ ಕುವರಿ ಓಟಕ್ಕಿಲ್ಲ ಬ್ರೇಕ್

ಆರಂಭದಲ್ಲಿ ರಶ್ಮಿಕಾ ಮಾಡಿದ ಪೋಸ್ಟ್ ಕಂಡು ಇದು ಸಿನಿಮಾ ಅನೌನ್ಸ್​ಮೆಂಟ್ ಎಂದೇ ಫ್ಯಾನ್ಸ್ ಭಾವಿಸಿದ್ದರು. ಎಲ್ಲರೂ ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದರು. ಕೆಲವರು ರಶ್ಮಿಕಾಗೆ ಆಲ್​ ದಿ ಬೆಸ್ಟ್ ಎಂದು ವಿಶ್ ಮಾಡಿದ್ದರು. ಆದರೆ, ಅನೇಕರು ಇದೇ ಮಾದರಿಯ ಪೋಸ್ಟರ್ ಹಂಚಿಕೊಂಡ ನಂತರದಲ್ಲಿ ಇದು ಯಾವುದೋ ಬ್ರ್ಯಾಂಡ್​ನ ಪ್ರಮೋಷನ್​ಗೆ ಮಾಡಿದ ಜಾಹೀರಾತು ಎಂಬುದು ಫ್ಯಾನ್ಸ್​ಗೆ ಮನವರಿಕೆ ಆಗಿದೆ.

Published On - 7:09 am, Fri, 2 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್