AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಒಮ್ಮೆ ಮಾತನಾಡಿದ್ರೆ ಮೂರು ವಿವಾದ ಆಗುತ್ತೆ’; ಹೊಸ ಸಿನಿಮಾ ಘೋಷಿಸಿ ಬೇಸರಗೊಂಡ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಹಾಗೂ ಮೈತ್ರಿ ಮೂವಿ ಮೇಕರ್ಸ್ ‘ಪುಷ್ಪ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳು ನಡೆಯುತ್ತಿರುವಾಗಲೇ ಅವರು ರಶ್ಮಿಕಾ ಜೊತೆ ಕೈ ಜೋಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 23, 2023 | 7:16 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಬೇಡಿಕೆ ಹೆಚ್ಚಿದೆ. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ರಶ್ಮಿಕಾ ಕೈಯಲ್ಲಿ ಎರಡು ದೊಡ್ಡ ಬಜೆಟ್ ಚಿತ್ರ ಕೂಡ ಇದೆ. ಹೀಗಿರುವಾಗಲೇ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಯುಗಾದಿ ಪ್ರಯುಕ್ತ ಈ ವಿಚಾರ ರಿವೀಲ್ ಆಗಿದೆ. ಇದು ಹಿಟ್ ಕಾಂಬಿನೇಷನ್​​ನ ಸಮಾಗಮ ಅನ್ನೋದು ವಿಶೇಷ. ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಮಾಡಿದ ಹೊಸ ವಿಡಿಯೋ ಸಖತ್ ಫನ್ನಿ ಆಗಿದೆ. ಇದರಲ್ಲಿ ರಶ್ಮಿಕಾ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತೆಲುಗು ಇಂಡಸ್ಟ್ರಿಗೆ ಕಾಲಿಟ್ಟಿದ್ದು ‘ಚಲೋ’ ಸಿನಿಮಾ ಮೂಲಕ. ವೆಂಕಿ ಕುಡುಮುಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ವೆಂಕಿ ನಿರ್ದೇಶನದ, ರಶ್ಮಿಕಾ-ನಿತೀನ್ ನಟನೆಯ ‘ಭೀಷ್ಮ’ ಸಿನಿಮಾ ಕೂಡ ಗೆದ್ದಿತು. ಈಗ ನಿತೀನ್, ವೆಂಕಿ ಹಾಗೂ ರಶ್ಮಿಕಾ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಬರುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ಪುಷ್ಪ’ ಚಿತ್ರಕ್ಕೆ ಬಂಡವಾಳ ಹೂಡಿದ್ದ ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಲಿದೆ.

ವೆಂಕಿ ನಿರ್ದೇಶನದ ಸಿನಿಮಾ ಹಾಸ್ಯ ಪ್ರಧಾನವಾಗಿರುತ್ತದೆ. ಜೊತೆಗೆ ರೊಮ್ಯಾಂಟಿಕ್ ಅಂಶವೂ ಇರುತ್ತದೆ. ‘ಚಲೋ’ ಹಾಗೂ ‘ಭೀಷ್ಮ’ ಗೆಲ್ಲಲು ಇದೇ ಅಂಶ ಕಾರಣ ಆಗಿತ್ತು. ಈಗ ವೆಂಕಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಕಾಮಿಡಿ ಹೈಲೈಟ್ ಆಗಲಿದೆ. ಅವರು ರಶ್ಮಿಕಾ ಜೊತೆ ಮಾಡುತ್ತಿರುವ ಮೂರನೇ ಸಿನಿಮಾ ಇದು ಅನ್ನೋದು ವಿಶೇಷ.

ಇದನ್ನೂ ಓದಿ: ‘ಮನೆ ಕೆಲಸದವರ ಕಾಲಿಗೂ ನಮಸ್ಕಾರ ಮಾಡ್ತೀನಿ’: ಕಲಿತ ಸಂಸ್ಕಾರದ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

ರಶ್ಮಿಕಾ ಮಂದಣ್ಣ ಹಾಗೂ ಮೈತ್ರಿ ಮೂವಿ ಮೇಕರ್ಸ್ ‘ಪುಷ್ಪ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳು ನಡೆಯುತ್ತಿರುವಾಗಲೇ ಅವರು ರಶ್ಮಿಕಾ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕಾಗಿ ರಶ್ಮಿಕಾ ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ಇನ್ನಷ್ಟೇ ಶೀರ್ಷಿಕೆ ಅಂತಿಮವಾಗಬೇಕಿದೆ. ಈ ಸಿನಿಮಾದ ಪ್ರೋಮೋ ಹೈಲೈಟ್ ಆಗಿದೆ.

ಇದನ್ನೂ ಓದಿ: ಇನ್ಮುಂದೆ ‘ಸಾಮಿ ಸಾಮಿ..’ ಸ್ಟೆಪ್ ಮಾಡದಿರಲು ನಿರ್ಧರಿಸಿದ ರಶ್ಮಿಕಾ ಮಂದಣ್ಣ; ಕಾರಣ ತಿಳಿಸಿದ ನಟಿ

ನಿತೀನ್ ವಿವಾದದ ವಿಚಾರ ಎತ್ತುತ್ತಾರೆ. ‘ವಿವಾದದ ಬಗ್ಗೆ ಮಾತ್ರ ಮಾತನಾಡಬೇಡಿ. ನಾನು ಒಮ್ಮೆ ಮಾತನಾಡಿದರೆ ಮೂರು ವಿವಾದ ಆಗುತ್ತದೆ’ ಎಂದು ಬೇಸರಗೊಳ್ಳುತ್ತಾರೆ ರಶ್ಮಿಕಾ. ಇದಕ್ಕೆ ಉತ್ತರಿಸಿರೋ ನಿತೀನ್, ‘ನಿಮ್ಮದೇ ಬೆಟರ್. ನಾನು ಒಂದು ಸಿನಿಮಾ ಹಿಟ್ ಕೊಟ್ಟರೆ ಮೂರು ಫ್ಲಾಪ್ ಕೊಡ್ತೀನಿ’ ಎಂದು ನಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?