AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಒಮ್ಮೆ ಮಾತನಾಡಿದ್ರೆ ಮೂರು ವಿವಾದ ಆಗುತ್ತೆ’; ಹೊಸ ಸಿನಿಮಾ ಘೋಷಿಸಿ ಬೇಸರಗೊಂಡ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಹಾಗೂ ಮೈತ್ರಿ ಮೂವಿ ಮೇಕರ್ಸ್ ‘ಪುಷ್ಪ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳು ನಡೆಯುತ್ತಿರುವಾಗಲೇ ಅವರು ರಶ್ಮಿಕಾ ಜೊತೆ ಕೈ ಜೋಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 23, 2023 | 7:16 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಬೇಡಿಕೆ ಹೆಚ್ಚಿದೆ. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ರಶ್ಮಿಕಾ ಕೈಯಲ್ಲಿ ಎರಡು ದೊಡ್ಡ ಬಜೆಟ್ ಚಿತ್ರ ಕೂಡ ಇದೆ. ಹೀಗಿರುವಾಗಲೇ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಯುಗಾದಿ ಪ್ರಯುಕ್ತ ಈ ವಿಚಾರ ರಿವೀಲ್ ಆಗಿದೆ. ಇದು ಹಿಟ್ ಕಾಂಬಿನೇಷನ್​​ನ ಸಮಾಗಮ ಅನ್ನೋದು ವಿಶೇಷ. ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಮಾಡಿದ ಹೊಸ ವಿಡಿಯೋ ಸಖತ್ ಫನ್ನಿ ಆಗಿದೆ. ಇದರಲ್ಲಿ ರಶ್ಮಿಕಾ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತೆಲುಗು ಇಂಡಸ್ಟ್ರಿಗೆ ಕಾಲಿಟ್ಟಿದ್ದು ‘ಚಲೋ’ ಸಿನಿಮಾ ಮೂಲಕ. ವೆಂಕಿ ಕುಡುಮುಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ವೆಂಕಿ ನಿರ್ದೇಶನದ, ರಶ್ಮಿಕಾ-ನಿತೀನ್ ನಟನೆಯ ‘ಭೀಷ್ಮ’ ಸಿನಿಮಾ ಕೂಡ ಗೆದ್ದಿತು. ಈಗ ನಿತೀನ್, ವೆಂಕಿ ಹಾಗೂ ರಶ್ಮಿಕಾ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಬರುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ಪುಷ್ಪ’ ಚಿತ್ರಕ್ಕೆ ಬಂಡವಾಳ ಹೂಡಿದ್ದ ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಲಿದೆ.

ವೆಂಕಿ ನಿರ್ದೇಶನದ ಸಿನಿಮಾ ಹಾಸ್ಯ ಪ್ರಧಾನವಾಗಿರುತ್ತದೆ. ಜೊತೆಗೆ ರೊಮ್ಯಾಂಟಿಕ್ ಅಂಶವೂ ಇರುತ್ತದೆ. ‘ಚಲೋ’ ಹಾಗೂ ‘ಭೀಷ್ಮ’ ಗೆಲ್ಲಲು ಇದೇ ಅಂಶ ಕಾರಣ ಆಗಿತ್ತು. ಈಗ ವೆಂಕಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಕಾಮಿಡಿ ಹೈಲೈಟ್ ಆಗಲಿದೆ. ಅವರು ರಶ್ಮಿಕಾ ಜೊತೆ ಮಾಡುತ್ತಿರುವ ಮೂರನೇ ಸಿನಿಮಾ ಇದು ಅನ್ನೋದು ವಿಶೇಷ.

ಇದನ್ನೂ ಓದಿ: ‘ಮನೆ ಕೆಲಸದವರ ಕಾಲಿಗೂ ನಮಸ್ಕಾರ ಮಾಡ್ತೀನಿ’: ಕಲಿತ ಸಂಸ್ಕಾರದ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

ರಶ್ಮಿಕಾ ಮಂದಣ್ಣ ಹಾಗೂ ಮೈತ್ರಿ ಮೂವಿ ಮೇಕರ್ಸ್ ‘ಪುಷ್ಪ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳು ನಡೆಯುತ್ತಿರುವಾಗಲೇ ಅವರು ರಶ್ಮಿಕಾ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕಾಗಿ ರಶ್ಮಿಕಾ ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ಇನ್ನಷ್ಟೇ ಶೀರ್ಷಿಕೆ ಅಂತಿಮವಾಗಬೇಕಿದೆ. ಈ ಸಿನಿಮಾದ ಪ್ರೋಮೋ ಹೈಲೈಟ್ ಆಗಿದೆ.

ಇದನ್ನೂ ಓದಿ: ಇನ್ಮುಂದೆ ‘ಸಾಮಿ ಸಾಮಿ..’ ಸ್ಟೆಪ್ ಮಾಡದಿರಲು ನಿರ್ಧರಿಸಿದ ರಶ್ಮಿಕಾ ಮಂದಣ್ಣ; ಕಾರಣ ತಿಳಿಸಿದ ನಟಿ

ನಿತೀನ್ ವಿವಾದದ ವಿಚಾರ ಎತ್ತುತ್ತಾರೆ. ‘ವಿವಾದದ ಬಗ್ಗೆ ಮಾತ್ರ ಮಾತನಾಡಬೇಡಿ. ನಾನು ಒಮ್ಮೆ ಮಾತನಾಡಿದರೆ ಮೂರು ವಿವಾದ ಆಗುತ್ತದೆ’ ಎಂದು ಬೇಸರಗೊಳ್ಳುತ್ತಾರೆ ರಶ್ಮಿಕಾ. ಇದಕ್ಕೆ ಉತ್ತರಿಸಿರೋ ನಿತೀನ್, ‘ನಿಮ್ಮದೇ ಬೆಟರ್. ನಾನು ಒಂದು ಸಿನಿಮಾ ಹಿಟ್ ಕೊಟ್ಟರೆ ಮೂರು ಫ್ಲಾಪ್ ಕೊಡ್ತೀನಿ’ ಎಂದು ನಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ