AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಬೇರ’ ಗೆದ್ದ ಖುಷಿಯಲ್ಲಿ ಹೊಸ ಚಿತ್ರ ಘೋಷಿಸಿದ ರಶ್ಮಿಕಾ; ವಾರಿಯರ್ ಅವತಾರ

ರಶ್ಮಿಕಾ ಮಂದಣ್ಣ ಅವರ 'ಕುಬೇರ' ಸಿನಿಮಾ 100 ಕೋಟಿ ರೂಪಾಯಿ ಗಳಿಸಿದೆ. ಈಗ , ಅವರು ಹೊಸ ಸಿನಿಮಾವನ್ನು ಘೋಷಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಟೈಟಲ್ ಜೂನ್ 27 ರಂದು ರಿವೀಲ್ ಆಗಲಿದೆ.

‘ಕುಬೇರ’ ಗೆದ್ದ ಖುಷಿಯಲ್ಲಿ ಹೊಸ ಚಿತ್ರ ಘೋಷಿಸಿದ ರಶ್ಮಿಕಾ; ವಾರಿಯರ್ ಅವತಾರ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jun 26, 2025 | 11:35 AM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರ ಜೀವನದಲ್ಲಿ ಈಗ ಎಲ್ಲವೂ ಒಳ್ಳೆಯದೇ ಆಗುತ್ತಿದೆ. ಅವರು ನಟಿಸಿದ ಸಿನಿಮಾಗಳು ಯಶಸ್ಸು ಕಾಣುತ್ತಿವೆ. ಲವ್ ಲೈಫ್ ಕೂಡ ಚೆನ್ನಾಗಿದೆ. ಇತ್ತೀಚೆಗೆ ರಿಲೀಸ್ ಅವರ ನಟನೆಯ ‘ಕುಬೇರ’ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇದೇ ಖುಷಿಯಲ್ಲಿ ಅವರು ಮತ್ತೊಂದು ಸಿನಿಮಾ ಘೋಷಿಸಲು ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರದ್ದು ವಾರಿಯರ್ ಅವತಾರ. ಈ ಚಿತ್ರದ ಟೈಟಲ್ ಜೂನ್ 27ರಂದು ಅನೌನ್ಸ್ ಆಗಲಿದೆ.

ರಶ್ಮಿಕಾ ಮಂದಣ್ಣ ಈವರೆಗೆ ಮಾಡಿದ ಬಹುತೇಕ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಮರಸುತ್ತುವ ಪಾತ್ರ ಸಿಕ್ಕಿದ್ದೇ ಹೆಚ್ಚು. ಈಗ ಅವರಿಗೆ ಮಹಿಳಾ ಪ್ರಧಾನ ಸಿನಿಮಾ ಸಿಕ್ಕಿದೆ ಎನ್ನಲಾಗಿದೆ. ಸದ್ಯ ಅಸ್ಪಷ್ಟವಾದ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇದನ್ನೂ ಓದಿ
Image
ನಿಧನ ಹೊಂದುವ ಹಿಂದಿನ ದಿನ ಸಾಯುವ ದೃಶ್ಯವನ್ನೇ ಶೂಟ್ ಮಾಡಿದ್ದ ಶಂಕರ್ ನಾಗ್
Image
ಡ್ರಗ್ ಕೇಸ್​ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್; ಬೆಳೆಯುತ್ತಲೇ ಇದೆ ಪಟ್ಟಿ
Image
ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಪುನೀತ್ ಸಾಂಗ್
Image
‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್

ಕಾಡಿನ ಮಧ್ಯೆ ರಶ್ಮಿಕಾ ನಿಂತಿದ್ದಾರೆ. ಅವರು ವಾರಿಯರ್ ರೀತಿ ಕಾಣಿಸಿದ್ದಾರೆ. ಅವರ ಕೈಯಲ್ಲಿ ಯಾವುದೋ ಆಯುಧ ರೀತಿಯ ವಸ್ತುವಿದೆ. ‘ಬೇಟೆಗೊಳಗಾಗಿ ಗಾಯಗೊಂಡರೂ ಅಚಲವಾಗಿ ನಿಂತಿದ್ದಾಳೆ’ಎಂಬ ಅರ್ಥ ಬರುವ ರೀತಿಯಲ್ಲಿ ಪೋಸ್ಟರ್ ಮೇಲೆ ಬರೆಯಲಾಗಿದೆ. ಈ ಸಿನಿಮಾದ ಪೋಸ್ಟರ್ ಹಾಗೂ ಟೈಟಲ್ ಜೂನ್ 27ರ ಮುಂಜಾನೆ 10:08ಕ್ಕೆ ರಿಲೀಸ್ ಆಗಲಿದೆ.

ಈ ಚಿತ್ರವನ್ನು ಅನ್​ಫಾರ್ಮುಲಾ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿದೆ. ಈ ಸಂಸ್ಥೆಗೆ ಇದು ಮೊದಲ ಅನುಭವ. ಸಿನಿಮಾ ಬಗ್ಗೆ ಹಾಗೂ ನಿರ್ಮಾಣ ಸಂಸ್ಥೆ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ಚಿತ್ರದ ಟೈಟಲ್ ಜೊತೆ ಈ ವಿಚಾರವೂ ರಿವೀಲ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಕುಬೇರ’ ಸೆಟ್​ನ ವಿಶೇಷ ಚಿತ್ರಗಳನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಈಗಾಗಲೇ ‘ದಿ ಗರ್ಲ್​ಫ್ರೆಂಡ್’ ಹೆಸರಿನ ಮಹಿಳಾ ಪ್ರಧಾನ ಚಿತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಶೂಟ್ ಭರದಿಂದ ಸಾಗುತ್ತಿದೆ. ಹೀಗಿರುವಾಗಲೇ ಅವರ ಮತ್ತೊಂದು ಚಿತ್ರ ಅನೌನ್ಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು