ಅಲ್ಲು ಅರ್ಜುನ್​ಗೆ ಸರಿಸಾಟಿಯಾಗಿ ನಿಲ್ಲೋಕೆ ಹೊರಟ ರಶ್ಮಿಕಾ ಮಂದಣ್ಣ; ಇದಕ್ಕೆ ಅವರು ಮಾಡ್ತಿರೋದೇನು?

ಅಲ್ಲು ಅರ್ಜುನ್​ ಹಾಗೂ ರಶ್ಮಿಕಾ ‘ಪುಷ್ಪ’ ಸಿನಿಮಾದಲ್ಲಿ ಒಟ್ಟಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ಸುಕುಮಾರ್​ ಆ್ಯಕ್ಷನ್​ಕಟ್​ ಹೇಳುತ್ತಿರುವ ಈ ಚಿತ್ರ ಎರಡು ಪಾರ್ಟ್​​​ಗಳಲ್ಲಿ ತೆರೆಗೆ ಬರುತ್ತಿದೆ.

ಅಲ್ಲು ಅರ್ಜುನ್​ಗೆ ಸರಿಸಾಟಿಯಾಗಿ ನಿಲ್ಲೋಕೆ ಹೊರಟ ರಶ್ಮಿಕಾ ಮಂದಣ್ಣ; ಇದಕ್ಕೆ ಅವರು ಮಾಡ್ತಿರೋದೇನು?
ರಶ್ಮಿಕಾ ಮಂದಣ್ಣ - ಅಲ್ಲು ಅರ್ಜುನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 05, 2021 | 8:20 PM

ಅಲ್ಲು ಅರ್ಜುನ್​ ಡಾನ್ಸ್​ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಹಾಕುವ ಸ್ಟೆಪ್​ ಕಲಿಯೋದು ಅಷ್ಟು ಸುಲಭದ ಮಾತಲ್ಲ. ಅಲ್ಲು ಜತೆ ತೆರೆ ಹಂಚಿಕೊಳ್ಳುವ ನಟಿಯರಿಗೆ ಸ್ಟೆಪ್​ ಮ್ಯಾಚ್​ ಮಾಡೋದು ಹೇಗೆ ಎನ್ನುವ ಆತಂಕ ಇದ್ದೇ ಇರುತ್ತದೆ. ಡಾನ್ಸ್​ ಮಾಡುವುದರಲ್ಲಿ ಅಲ್ಲು ಅಷ್ಟು ನಿಸ್ಸೀಮರು. ಈಗ ರಶ್ಮಿಕಾಗೂ ಇದೇ ಚಿಂತೆ ಕಾಡಿದೆ. ಅಲ್ಲುಗೆ ಸರಿಸಾಟಿಯಾಗಿ ನಿಲ್ಲೋಕೆ ಅವರು ಡಾನ್ಸ್ ಕ್ಲಾಸ್​ಗೆ ತೆರಳುತ್ತಿದ್ದಾರೆ ಅನ್ನೋದು ವಿಶೇಷ.

ಅಲ್ಲು ಅರ್ಜುನ್​ ಹಾಗೂ ರಶ್ಮಿಕಾ ‘ಪುಷ್ಪ’ ಸಿನಿಮಾದಲ್ಲಿ ಒಟ್ಟಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ಸುಕುಮಾರ್​ ಆ್ಯಕ್ಷನ್​ಕಟ್​ ಹೇಳುತ್ತಿರುವ ಈ ಚಿತ್ರ ಎರಡು ಪಾರ್ಟ್​​​ಗಳಲ್ಲಿ ತೆರೆಗೆ ಬರುತ್ತಿದೆ. ಸುಕುಮಾರ್​ ಸಿನಿಮಾದಲ್ಲಿ ಕಥೆ ಜತೆಗೆ ಡಾನ್ಸ್​ಗೂ ಹೆಚ್ಚಿನ ಆದ್ಯತೆ ಇರುತ್ತದೆ. ಈ ಮೊದಲು ಕೂಡ ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ ಪುಷ್ಪದಲ್ಲೂ ಅಲ್ಲು ಹಾಗೂ ರಶ್ಮಿಕಾ ಒಟ್ಟಾಗಿ ಡಾನ್ಸ್​ ಮಾಡಲಿದ್ದಾರೆ. ಅಲ್ಲು ಹೆಜ್ಜೆಗೆ ಮ್ಯಾಚ್​ ಮಾಡೋಕೆ ರಶ್ಮಿಕಾ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

ರಶ್ಮಿಕಾ ಸದ್ಯ ಡಾನ್ಸ್ ಕ್ಲಾಸ್​ಗೆ ತೆರಳುತ್ತಿದ್ದಾರೆ. ಸಿನಿಮಾದಲ್ಲಿ ಬರುವ ಸಾಂಗ್​ ಒಂದಕ್ಕಾಗಿ ರಶ್ಮಿಕಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಅಲ್ಲು ಹೆಜ್ಜೆ ಜತೆ ಮ್ಯಾಚ್​ ಮಾಡಿಕೊಳ್ಳಲು ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಮಹೇಶ್​ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಬರುವ ಸಾಂಗ್​ ಒಂದರಲ್ಲಿ ರಶ್ಮಿಕಾ ಸಖತ್​ ಆಗಿ ಸ್ಟೆಪ್​ ಹಾಕಿದ್ದರು. ಈ ಮೂಲಕ ತಾವು ಉತ್ತಮ ಡಾನ್ಸರ್​ ಎಂಬುದನ್ನೂ ಸಾಬೀತು ಮಾಡಿದ್ದರು ರಶ್ಮಿಕಾ. ಈಗ ಅಲ್ಲು ಸಿನಿಮಾದಲ್ಲಿ ಅವರ ಡಾನ್ಸ್​ ಹೇಗಿರಲಿದೆ ಅನ್ನೋದು ಸದ್ಯದ ಕುತೂಹಲ.

ಪುಷ್ಪ ಸಿನಿಮಾ ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಆಗುತ್ತಿದೆ. ಮೊದಲ ಪಾರ್ಟ್​ ಇದೇ ಕ್ರಿಸ್​ಮಸ್​ಗೆ ತೆರೆಗೆ ಬರುತ್ತಿದೆ. ತೆಲುಗು, ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ಒಟ್ಟಿಗೆ ಬಿಡುಗಡೆ ಆಗುತ್ತಿದೆ. ಫಹಾದ್ ಫಾಸಿಲ್ ಈ ಸಿನಿಮಾದಲ್ಲಿ ನೆಗೆಟಿವ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಅವರ ಲುಕ್ ರಿಲೀಸ್​ ಮಾಡಿತ್ತು.

ಇದನ್ನೂ ಓದಿ: ತೆಲುಗಿನಲ್ಲಿ ಮೊದಲ ಚಿತ್ರದ ರಿಲೀಸ್​ಗೂ ಮುನ್ನವೇ ಹೆಚ್ಚಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ, ಪೂಜಾ, ಕೃತಿ ಕಥೆಯೇನು?

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ