AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ರಕ್ತ, ಕಣ್ಣಲ್ಲಿ ಬೆಂಕಿ; ‘ಮೈಸಾ’ ಚಿತ್ರದಲ್ಲಿ ರಶ್ಮಿಕಾ ಬೆಚ್ಚಿಬೀಳಿಸೋ ಅವತಾರ

ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಎಂಬ ಹೊಸ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಮತ್ತು ಲುಕ್ ಸಂಪೂರ್ಣವಾಗಿ ಭಿನ್ನವಾಗಿದೆ. ರೊಮ್ಯಾಂಟಿಕ್ ಪಾತ್ರಗಳಿಂದ ದೂರ ಸರಿದು, ಒಂದು ಮಹಿಳಾ ಪ್ರಧಾನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

ಮುಖಕ್ಕೆ ರಕ್ತ, ಕಣ್ಣಲ್ಲಿ ಬೆಂಕಿ; ‘ಮೈಸಾ’ ಚಿತ್ರದಲ್ಲಿ ರಶ್ಮಿಕಾ ಬೆಚ್ಚಿಬೀಳಿಸೋ ಅವತಾರ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Jun 27, 2025 | 10:30 AM

Share

ರಶ್ಮಿಕಾ ಮಂದಣ್ಣ (Rashmika Mandanna) ಅಂದಕೂಡಲೇ ನೆನಪಾಗೋದು ಅವರ ಸುಂದರ ನಗು, ಅವರ ಮುದ್ದಾದ ನೋಟ. ಬಹುತೇಕ ಚಿತ್ರಗಳಲ್ಲಿ ಅವರು ಹೀಗೆಯೇ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇರೋ ಫೋಟೋಗಳು ಇದೇ ರೀತಿಯಲ್ಲಿ ಇದೆ. ಆದರೆ, ರಶ್ಮಿಕಾ ಅವರ ಹೊಸ ಅವತಾರ ಅಭಿಮಾನಿಗಳನ್ನು ಬೆಚ್ಚಿ ಬೀಳಿಸುವಂತೆ ಇದೆ. ‘ಮೈಸಾ’ ಹೆಸರಿನ ಹೊಸ ಚಿತ್ರವನ್ನು ಅವರು ಘೋಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಅವರ ಗೆಟಪ್ ಭಿನ್ನವಾಗಿದೆ.

ರಶ್ಮಿಕಾ ಮಂದಣ್ಣ ರೊಮ್ಯಾಂಟಿಕ್ ಚಿತ್ರಗಳ ಮೂಲಕ ಹೆಚ್ಚು ಇಷ್ಟ ಆಗುತ್ತಾರೆ. ಅವರು ಇತ್ತೀಚೆಗೆ ನಟನೆಯಲ್ಲಿ ಪಳಗಿದ್ದಾರೆ. ಹೀಗಾಗಿ, ವಿವಿಧ ರೀತಿಯ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಈಗ ಮಹಿಳಾ ಪ್ರಧಾನ ಸಿನಿಮಾ ಒಂದನ್ನು ಅವರು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಮೈಸಾ’ ಎಂಬ ಟೈಟಲ್ ಇಡಲಾಗಿದೆ. ಈ ಶೀರ್ಷಿಕೆ ಗಮನ ಸೆಳೆಯುವಂತಿದೆ. ಅವರ ಲುಕ್ ಕೂಡ ಭಿನ್ನವಾಗಿದೆ.

ಇದನ್ನೂ ಓದಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ
Image
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ
Image
ವಿಚ್ಛೇದನ ಹಂತದಲ್ಲಿದ್ದ ನಟಿ ಈಗ ಪ್ರೆಗ್ನೆಂಟ್; ಆದರೆ, ಪತಿಗೇ ಗೊತ್ತೇ ಇಲ್ಲ
Image
ಡ್ರಗ್ಸ್ ತೆಗೆದುಕೊಳ್ಳೋ ಕಲಾವಿದರು ಇನ್ಮುಂದೆ ಚಿತ್ರರಂಗದಿಂದ ಬ್ಯಾನ್

ರಶ್ಮಿಕಾ ಕೈಯಲ್ಲಿ ಆಯುಧ ಇದೆ. ಮುಖಕ್ಕೆ ರಕ್ತ ಅಂಟಿದೆ. ಅವರು ಕಣ್ಣಲ್ಲೇ ಸುಡುತ್ತಿದ್ದಾರೆ. ‘ಮೈಸಾ’ ಪ್ಯಾನ್ ಇಂಡಿಯಾ ಚಿತ್ರ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ. ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಎಂಬುವವರು ಚಿತ್ರಕ್ಕೆ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಕುಬೇರ’ ಗೆದ್ದ ಖುಷಿಯಲ್ಲಿ ಹೊಸ ಚಿತ್ರ ಘೋಷಿಸಿದ ರಶ್ಮಿಕಾ; ವಾರಿಯರ್ ಅವತಾರ

ರಶ್ಮಿಕಾ ಅವರಿಗೆ ಈ ಪಾತ್ರ ಸಿಕ್ಕಿದ್ದಕ್ಕೆ ಖುಷಿ ಇದೆ. ಅವರು ತಮ್ಮ ಅಭಿನಯ ಸಾಬೀತು ಮಾಡಲು ಒಂದೊಳ್ಳೆಯ ಅವಕಾಶಕ್ಕಾಗಿ ಕಾದಿದ್ದರು. ಈಗ ಆ ಅವಕಾಶ ಅವರಿಗೆ ಸಿಕ್ಕಿದೆ. ಇದಕ್ಕೆ ಅವರು ಖುಷಿಯಾಗಿದ್ದಾರೆ. ಕೆಲವೊಮ್ಮೆ ನಾಯಕಿಯರನ್ನು ಮರ ಸುತ್ತಿಸುವ ಪಾತ್ರಕ್ಕೆ ಮಾತ್ರ ಸೀಮಿತ ಮಾಡುತ್ತಾರೆ. ಆದರೆ, ಈಗ ಈ ರೀತಿ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ‘ಪುಷ್ಪ 2’ ಚಿತ್ರದಲ್ಲಿ ಅವರ ಪಾತ್ರಕ್ಕೆ ಸಾಕಷ್ಟು ಬೇಡಿಕೆ ಇದೆ. ಸಿನಿಮಾ ಉದ್ದಕ್ಕೂ ಅವರು ಕಾಣಿಸಿಕೊಳ್ಳುತ್ತಾರೆ. ಇತ್ತೀಚೆಗೆ ರಿಲೀಸ್ ಆಗಿ ಹಿಟ್ ಆದ ‘ಕುಬೇರ’ ಸಿನಿಮಾದಲ್ಲೂ ರಶ್ಮಿಕಾ ನಟನೆಯನ್ನು ಹೊಗಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:29 am, Fri, 27 June 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು