AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?

ರಶ್ಮಿಕಾ ಮಂದಣ್ಣ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬಂದಿದ್ದಾರೆ. ಅವರು  ತರಾತುರಿಯಲ್ಲಿದ್ದರು. ಅವರು ಹೊರ ಬರುತ್ತಿದ್ದಂತೆ ಎದುರು ನಿಂತಿದ್ದ ಕಾರನ್ನು ಏರಲು ಹೊರಟರು. ಆದರೆ, ಅದು ಅವರ ಕಾರು ಆಗಿರಲಿಲ್ಲ.

ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jan 08, 2024 | 8:48 AM

Share

ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚಾಗಿದೆ. ಏನೇ ಮಾಡಿದರೂ ಅದು ಹೈಲೈಟ್ ಆಗುತ್ತದೆ. ಅವರು ಹೋದಲ್ಲೆಲ್ಲ ಪಾಪರಾಜಿಗಳು ಹಿಂದೆ ಹಿಂದೆ ಬರುತ್ತಾರೆ. ಈಗ ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಗೊತ್ತಿಲ್ಲದೆ ತಪ್ಪೊಂದನ್ನು ಮಾಡಿದ್ದಾರೆ. ಅದು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನು ಅಭಿಮಾನಿಗಳು ಫನ್ ಆಗಿ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬಂದಿದ್ದಾರೆ. ಅವರು  ತರಾತುರಿಯಲ್ಲಿದ್ದರು. ಅವರು ಹೊರ ಬರುತ್ತಿದ್ದಂತೆ ಎದುರು ನಿಂತಿದ್ದ ಕಾರನ್ನು ಏರಲು ಹೊರಟರು. ಆಗ ರಶ್ಮಿಕಾ ತಂಡದವರು ‘ಆ ಕಾರಲ್ಲ’ ಎಂದು ಕೂಗಿದ್ದಾರೆ. ಆಗ ರಶ್ಮಿಕಾ ನಗುತ್ತಲೇ ತಮ್ಮ ಕಾರಿನ ಬಳಿ ಹೋಗಿದ್ದಾರೆ.

ಶನಿವಾರ (ಜನವರಿ 6) ಮುಂಬೈನಲ್ಲಿ ‘ಅನಿಮಲ್’ ಸಿನಿಮಾದ ಸಕ್ಸಸ್ ಮೀಟ್ ನಡೆದಿದೆ. ಇದರಲ್ಲಿ ಭಾಗವಹಿಸಲು ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೆ ವಿಳಂಬ ಆಯಿತು ಎನ್ನುವ ಕಾರಣಕ್ಕೆ ಅವರು ತರಾತುರಿಯಲ್ಲಿ ಇದ್ದರು ಎನ್ನಲಾಗಿದೆ.

‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಬಾಲಿವುಡ್​ನಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ.

View this post on Instagram

A post shared by Voompla (@voompla)

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಆಸ್ತಿ ಮೌಲ್ಯ ಎಷ್ಟು ಗೊತ್ತೆ? ಇರುವ ಕಾರುಗಳ್ಯಾವುವು?

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಲ್ಲದೆ ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ. ಹಲವು ಸಿನಿಮಾ ಆಫರ್​ಗಳು ರಶ್ಮಿಕಾನ ಹುಡುಕಿ ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾ ಮಾಡುತ್ತಿದ್ದಾರೆ. ಸದ್ಯಕ್ಕಂತೂ ಅವರು ಕನ್ನಡಕ್ಕೆ ಮರಳೋದು ಅನುಮಾನ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ