AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?

ರಶ್ಮಿಕಾ ಮಂದಣ್ಣ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬಂದಿದ್ದಾರೆ. ಅವರು  ತರಾತುರಿಯಲ್ಲಿದ್ದರು. ಅವರು ಹೊರ ಬರುತ್ತಿದ್ದಂತೆ ಎದುರು ನಿಂತಿದ್ದ ಕಾರನ್ನು ಏರಲು ಹೊರಟರು. ಆದರೆ, ಅದು ಅವರ ಕಾರು ಆಗಿರಲಿಲ್ಲ.

ತಮ್ಮದೇ ಎಂದು ಭಾವಿಸಿ ಬೇರೆಯವರ ಕಾರು ಏರ ಹೊರಟ ರಶ್ಮಿಕಾ ಮಂದಣ್ಣ; ಮುಂದೇನಾಯ್ತು?
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jan 08, 2024 | 8:48 AM

Share

ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚಾಗಿದೆ. ಏನೇ ಮಾಡಿದರೂ ಅದು ಹೈಲೈಟ್ ಆಗುತ್ತದೆ. ಅವರು ಹೋದಲ್ಲೆಲ್ಲ ಪಾಪರಾಜಿಗಳು ಹಿಂದೆ ಹಿಂದೆ ಬರುತ್ತಾರೆ. ಈಗ ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಗೊತ್ತಿಲ್ಲದೆ ತಪ್ಪೊಂದನ್ನು ಮಾಡಿದ್ದಾರೆ. ಅದು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನು ಅಭಿಮಾನಿಗಳು ಫನ್ ಆಗಿ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬಂದಿದ್ದಾರೆ. ಅವರು  ತರಾತುರಿಯಲ್ಲಿದ್ದರು. ಅವರು ಹೊರ ಬರುತ್ತಿದ್ದಂತೆ ಎದುರು ನಿಂತಿದ್ದ ಕಾರನ್ನು ಏರಲು ಹೊರಟರು. ಆಗ ರಶ್ಮಿಕಾ ತಂಡದವರು ‘ಆ ಕಾರಲ್ಲ’ ಎಂದು ಕೂಗಿದ್ದಾರೆ. ಆಗ ರಶ್ಮಿಕಾ ನಗುತ್ತಲೇ ತಮ್ಮ ಕಾರಿನ ಬಳಿ ಹೋಗಿದ್ದಾರೆ.

ಶನಿವಾರ (ಜನವರಿ 6) ಮುಂಬೈನಲ್ಲಿ ‘ಅನಿಮಲ್’ ಸಿನಿಮಾದ ಸಕ್ಸಸ್ ಮೀಟ್ ನಡೆದಿದೆ. ಇದರಲ್ಲಿ ಭಾಗವಹಿಸಲು ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೆ ವಿಳಂಬ ಆಯಿತು ಎನ್ನುವ ಕಾರಣಕ್ಕೆ ಅವರು ತರಾತುರಿಯಲ್ಲಿ ಇದ್ದರು ಎನ್ನಲಾಗಿದೆ.

‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಬಾಲಿವುಡ್​ನಲ್ಲಿ ಅವರ ಜನಪ್ರಿಯತೆ ಹೆಚ್ಚುತ್ತಿದೆ.

View this post on Instagram

A post shared by Voompla (@voompla)

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಆಸ್ತಿ ಮೌಲ್ಯ ಎಷ್ಟು ಗೊತ್ತೆ? ಇರುವ ಕಾರುಗಳ್ಯಾವುವು?

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಲ್ಲದೆ ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ. ಹಲವು ಸಿನಿಮಾ ಆಫರ್​ಗಳು ರಶ್ಮಿಕಾನ ಹುಡುಕಿ ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾ ಮಾಡುತ್ತಿದ್ದಾರೆ. ಸದ್ಯಕ್ಕಂತೂ ಅವರು ಕನ್ನಡಕ್ಕೆ ಮರಳೋದು ಅನುಮಾನ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ