AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು

ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳು ‘ಪುಷ್ಪ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯಕ್ಕೆ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೂಟಿಂಗ್​ ಬಿಡುವಿನಲ್ಲಿ ರಶ್ಮಿಕಾ ಮಂದಣ್ಣ ಅವರು ಖುಷಿಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಚಿತ್ರತಂಡದವರ ಕ್ಯಾಂಡಿಡ್​ ಫೋಟೋಗಳನ್ನು ರಶ್ಮಿಕಾ ಕ್ಲಿಕ್ಕಿಸಿದ್ದಾರೆ.

‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು
ಸುಕುಮಾರ್​, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Feb 12, 2024 | 7:21 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವುಗಳ ಪೈಕಿ ಪುಷ್ಪ 2’ (Pushpa 2) ಸಿನಿಮಾದ ಮೇಲಿರುವ ನಿರೀಕ್ಷೆ ಎಲ್ಲಕ್ಕಿಂತ ಹೆಚ್ಚು. ಈ ಸಿನಿಮಾದಲ್ಲಿ ಘಟಾನುಘಟಿಗಳು ಕೆಲಸ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿದ್ದೇ ‘ಪುಷ್ಪ’ ಸಿನಿಮಾ. ಆದ್ದರಿಂದ ಅದರ ಸೀಕ್ವೆಲ್​ ಎಂದರೆ ಅವರಿಗೆ ಸಹಜವಾಗಿಯೇ ಕಾಳಜಿ ಜಾಸ್ತಿ ಇದೆ. ಹಾಗಾಗಿ ಅವರು ಬಹಳ ಖುಷಿಯಿಂದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಈ ಸಿನಿಮಾಗೆ ಸುಕುಮಾರ್​ (Sukumar) ಅವರು ನಿರ್ದೇಶನ ಮಾಡುತ್ತಿದ್ದಾರೆ. ಶೂಟಿಂಗ್​ ಸೆಟ್​ನಲ್ಲಿ ಅವರ ಫೋಟೋವನ್ನು ಕ್ಲಿಕ್ಕಿಸಿದ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಪೋಟೋ ವೈರಲ್​ ಆಗಿದೆ.

‘ಪುಷ್ಪ 2’ ಸಿನಿಮಾದ ನಾಯಕ ಅಲ್ಲು ಅರ್ಜುನ್​ ಕೂಡ ಈ ಮೊದಲು ನಿರ್ದೇಶಕ ಸುಕುಮಾರ್​ ಅವರ ಕ್ಯಾಂಡಿಡ್​ ಫೋಟೋಗಳನ್ನು ಕ್ಲಿಕ್ಕಿಸಿ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದರು. ಆ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿತ್ತು. ಈಗ ರಶ್ಮಿಕಾ ಮಂದಣ್ಣ ಅವರ ಸರದಿ. ಸಿಂಹದ ಪ್ರತಿಮೆ ಮೇಲೆ ಸುಕುಮಾರ್​ ಅವರು ಕೈಯಿಟ್ಟು ಒರಗಿಕೊಂಡು ನಿಂತಿರುವಾಗ ರಶ್ಮಿಕಾ ಮಂದಣ್ಣ ಅವರು ಈ ಫೋಟೋ ತೆಗೆದಿದ್ದಾರೆ. ಒಟ್ಟಿನಲ್ಲಿ ಖುಷಿಖುಷಿಯಾಗಿ ‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಸಾಗುತ್ತಿದೆ.

ಇದನ್ನೂ ಓದಿ: ಅರೆಸ್ಟ್​ ಆಗಿದ್ದ ‘ಪುಷ್ಪ 2’ ಚಿತ್ರದ ನಟ ಜಗದೀಶ್​ ಮತ್ತೆ ಶೂಟಿಂಗ್​ ಸೆಟ್​ಗೆ ಹಾಜರಿ

‘ಪುಷ್ಪ’ ತೆರೆಕಂಡಿದ್ದು 2021ರ ಡಿಸೆಂಬರ್​ನಲ್ಲಿ. ಎರಡು ವರ್ಷ ಕಳೆದರೂ ಸೀಕ್ವೆಲ್​ ಬಗ್ಗೆ ಜನರಿಗೆ ಇರುವ ಕ್ರೇಜ್​ ಕಡಿಮೆ ಆಗಿಲ್ಲ. ಆ ಕ್ರೇಜ್​ ಇನ್ನಷ್ಟು ಹೆಚ್ಚಾಗುವ ರೀತಿಯಲ್ಲಿ ಶೂಟಿಂಗ್​ ಸೆಟ್​ನ ಫೋಟೋಗಳನ್ನು ಚಿತ್ರತಂಡದವರು ಹಂಚಿಕೊಳ್ಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರು ಗಾಢವಾಗಿ ಚರ್ಚೆ ಮಾಡುತ್ತಿರುವ ಫೋಟೋ ವೈರಲ್​ ಆಗಿತ್ತು. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ.

ಅಲ್ಲು ಅರ್ಜುನ್​ ಅವರಿಗೆ ‘ಪುಷ್ಪ’ ಸಿನಿಮಾದ ನಟನೆಗೆ ನ್ಯಾಷನಲ್​ ಅವಾರ್ಡ್​ ಸಿಕ್ಕಿತು. ಆ ಬಳಿಕ ‘ಪುಷ್ಪ 2’ ಮೇಲೆ ಇರುವ ನಿರೀಕ್ಷೆ ನೂರು ಪಟ್ಟು ಜಾಸ್ತಿ ಆಯಿತು. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಬಹುದು ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದರು. ಆದರೆ ಅದನ್ನು ಚಿತ್ರತಂಡ ತಳ್ಳಿಹಾಕಿತು. ಅಂದುಕೊಂಡಂತೆಯೇ ಆಗಸ್ಟ್​ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ಅಭಿನಯಿಸುತ್ತಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ ಎಂದು ಅಭಿಮಾನಿಗಳು ಭರವಸೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ