AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 08, 2021 | 7:36 AM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ರಿಲೀಸ್​ ಆಗಿ ದೊಡ್ಡ ಮಟ್ಟದ ಹೈಪ್​ ಪಡೆದುಕೊಂಡಿದೆ. ಅದರಲ್ಲೂ ಈ ವೆಬ್​ ಸೀರಿಸ್​ನಲ್ಲಿ ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಫಿದಾ ಆಗಿದ್ದಾರೆ. ಇನ್ನು ಸಮಂತಾ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್​ ಮಾಡಿದ್ದರು. ಸದ್ಯ, ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಹೊಗಳುತ್ತಿದ್ದಾರೆ.

ಸೀಸನ್​ 2 ರಿಲೀಸ್​ಗೂ ಮೊದಲೇ ಸಮಂತಾ ಅಕ್ಕಿನೇನಿ ಸಾಕಷ್ಟು ಸುದ್ದಿಯಲ್ಲಿದ್ದರು. ಅವರು ರಾಜಲಕ್ಷ್ಮಿ ಚಂದ್ರನ್​ (ರಾಜಿ) ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿ ಬಾರಿ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಮಂತಾ ಈ ಬಾರಿ ಅವತಾರ ಬದಲಿಸಿದ್ದಾರೆ. ಚೆನ್ನೈನ ಗಾರ್ಮೆಂಟ್​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ರಾಜಿ (ಸಮಂತಾ) ತುಂಬಾನೇ ಮುಗ್ಧೆ. ನಂತರ ಅವರ ನಿಜವಾದ ಅವತಾರ ಬಯಲಾಗುತ್ತದೆ. ರಾಜಿ ಪಾತ್ರ ನೋಡಿ ಎಲ್ಲರೂ ಅಕ್ಷರಶಃ ದಂಗಾಗಿದ್ದರು.

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ. ಈ ವಿಡಿಯೋ ನೋಡಿದ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಕೂಡ ಈ ವಿಡಿಯೋಗೆ ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ನೋಡಿದ ರಶ್ಮಿಕಾ ಬೆಂಕಿ ಸ್ಮೈಲಿ ಹಾಕಿ ಸಮಂತಾ ಅವರನ್ನು ಹೊಗಳಿದ್ದಾರೆ. ಇನ್ನು, ಈ ವಿಡಿಯೋ ನೋಡಿದ ಅನುಪಮಾ ಪರಮೇಶ್ವರನ್​ ಕೂಡ ವಿಡಿಯೋ ಬಗ್ಗೆ ಅಚ್ಚರಿ ಹೊರ ಹಾಕಿದ್ದಾರೆ.

‘ರಾಜಿ ಪಾತ್ರ ಕಾಲ್ಪನಿಕವೇ ಆಗಿರಬಹುದು. ಆದರೆ ಅಸಮಾನತೆಯ ಯುದ್ಧದಲ್ಲಿ ಮಡಿದ ಹಾಗೂ ಇಂದಿಗೂ ಆ ಯುದ್ಧದ ನೆನಪಿನಲ್ಲಿ ನೋವು ಅನುಭವಿಸುತ್ತಿರುವ ಎಲ್ಲರಿಗೂ ಈ ಪಾತ್ರ ನಮನ ಸಲ್ಲಿಸುತ್ತದೆ ಎಂಬುದು ನನ್ನ ಅಭಿಪ್ರಾಯ. ರಾಜಿ ಪಾತ್ರವನ್ನು ತುಂಬ ಸೂಕ್ಷ್ಮವಾಗಿ ಮತ್ತು ಎಚ್ಚರಿಕೆಯಿಂದ ಬಿಂಬಿಸಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಒಂದು ವೇಳೆ ವಿಫಲವಾಗಿದ್ದರೆ, ಅಂತಹ ಅಸಂಖ್ಯಾತ ಜನರು ತಿರಸ್ಕಾರಕ್ಕೆ ಒಳಗಾಗುತ್ತಿದ್ದರು’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಮಂತಾ ಪಾತ್ರದ ಬಗ್ಗೆ ತಿಳಿಸಿದ್ದರು.

ಇದನ್ನೂ ಓದಿ: ಸಮಂತಾ ರಾಜಿ ಆಗಲು ಒಪ್ಪಿಕೊಂಡಿದ್ದು ಏಕೆ? ಭಾರಿ ವಿವಾದದ ಬಳಿಕ ಬಾಯ್ಬಿಟ್ಟ ನಟಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್