AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 08, 2021 | 7:36 AM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ರಿಲೀಸ್​ ಆಗಿ ದೊಡ್ಡ ಮಟ್ಟದ ಹೈಪ್​ ಪಡೆದುಕೊಂಡಿದೆ. ಅದರಲ್ಲೂ ಈ ವೆಬ್​ ಸೀರಿಸ್​ನಲ್ಲಿ ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಫಿದಾ ಆಗಿದ್ದಾರೆ. ಇನ್ನು ಸಮಂತಾ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್​ ಮಾಡಿದ್ದರು. ಸದ್ಯ, ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಹೊಗಳುತ್ತಿದ್ದಾರೆ.

ಸೀಸನ್​ 2 ರಿಲೀಸ್​ಗೂ ಮೊದಲೇ ಸಮಂತಾ ಅಕ್ಕಿನೇನಿ ಸಾಕಷ್ಟು ಸುದ್ದಿಯಲ್ಲಿದ್ದರು. ಅವರು ರಾಜಲಕ್ಷ್ಮಿ ಚಂದ್ರನ್​ (ರಾಜಿ) ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿ ಬಾರಿ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಮಂತಾ ಈ ಬಾರಿ ಅವತಾರ ಬದಲಿಸಿದ್ದಾರೆ. ಚೆನ್ನೈನ ಗಾರ್ಮೆಂಟ್​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ರಾಜಿ (ಸಮಂತಾ) ತುಂಬಾನೇ ಮುಗ್ಧೆ. ನಂತರ ಅವರ ನಿಜವಾದ ಅವತಾರ ಬಯಲಾಗುತ್ತದೆ. ರಾಜಿ ಪಾತ್ರ ನೋಡಿ ಎಲ್ಲರೂ ಅಕ್ಷರಶಃ ದಂಗಾಗಿದ್ದರು.

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ. ಈ ವಿಡಿಯೋ ನೋಡಿದ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಕೂಡ ಈ ವಿಡಿಯೋಗೆ ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ನೋಡಿದ ರಶ್ಮಿಕಾ ಬೆಂಕಿ ಸ್ಮೈಲಿ ಹಾಕಿ ಸಮಂತಾ ಅವರನ್ನು ಹೊಗಳಿದ್ದಾರೆ. ಇನ್ನು, ಈ ವಿಡಿಯೋ ನೋಡಿದ ಅನುಪಮಾ ಪರಮೇಶ್ವರನ್​ ಕೂಡ ವಿಡಿಯೋ ಬಗ್ಗೆ ಅಚ್ಚರಿ ಹೊರ ಹಾಕಿದ್ದಾರೆ.

‘ರಾಜಿ ಪಾತ್ರ ಕಾಲ್ಪನಿಕವೇ ಆಗಿರಬಹುದು. ಆದರೆ ಅಸಮಾನತೆಯ ಯುದ್ಧದಲ್ಲಿ ಮಡಿದ ಹಾಗೂ ಇಂದಿಗೂ ಆ ಯುದ್ಧದ ನೆನಪಿನಲ್ಲಿ ನೋವು ಅನುಭವಿಸುತ್ತಿರುವ ಎಲ್ಲರಿಗೂ ಈ ಪಾತ್ರ ನಮನ ಸಲ್ಲಿಸುತ್ತದೆ ಎಂಬುದು ನನ್ನ ಅಭಿಪ್ರಾಯ. ರಾಜಿ ಪಾತ್ರವನ್ನು ತುಂಬ ಸೂಕ್ಷ್ಮವಾಗಿ ಮತ್ತು ಎಚ್ಚರಿಕೆಯಿಂದ ಬಿಂಬಿಸಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಒಂದು ವೇಳೆ ವಿಫಲವಾಗಿದ್ದರೆ, ಅಂತಹ ಅಸಂಖ್ಯಾತ ಜನರು ತಿರಸ್ಕಾರಕ್ಕೆ ಒಳಗಾಗುತ್ತಿದ್ದರು’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಮಂತಾ ಪಾತ್ರದ ಬಗ್ಗೆ ತಿಳಿಸಿದ್ದರು.

ಇದನ್ನೂ ಓದಿ: ಸಮಂತಾ ರಾಜಿ ಆಗಲು ಒಪ್ಪಿಕೊಂಡಿದ್ದು ಏಕೆ? ಭಾರಿ ವಿವಾದದ ಬಳಿಕ ಬಾಯ್ಬಿಟ್ಟ ನಟಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?