AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 08, 2021 | 7:36 AM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ರಿಲೀಸ್​ ಆಗಿ ದೊಡ್ಡ ಮಟ್ಟದ ಹೈಪ್​ ಪಡೆದುಕೊಂಡಿದೆ. ಅದರಲ್ಲೂ ಈ ವೆಬ್​ ಸೀರಿಸ್​ನಲ್ಲಿ ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಫಿದಾ ಆಗಿದ್ದಾರೆ. ಇನ್ನು ಸಮಂತಾ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್​ ಮಾಡಿದ್ದರು. ಸದ್ಯ, ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಹೊಗಳುತ್ತಿದ್ದಾರೆ.

ಸೀಸನ್​ 2 ರಿಲೀಸ್​ಗೂ ಮೊದಲೇ ಸಮಂತಾ ಅಕ್ಕಿನೇನಿ ಸಾಕಷ್ಟು ಸುದ್ದಿಯಲ್ಲಿದ್ದರು. ಅವರು ರಾಜಲಕ್ಷ್ಮಿ ಚಂದ್ರನ್​ (ರಾಜಿ) ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿ ಬಾರಿ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಮಂತಾ ಈ ಬಾರಿ ಅವತಾರ ಬದಲಿಸಿದ್ದಾರೆ. ಚೆನ್ನೈನ ಗಾರ್ಮೆಂಟ್​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ರಾಜಿ (ಸಮಂತಾ) ತುಂಬಾನೇ ಮುಗ್ಧೆ. ನಂತರ ಅವರ ನಿಜವಾದ ಅವತಾರ ಬಯಲಾಗುತ್ತದೆ. ರಾಜಿ ಪಾತ್ರ ನೋಡಿ ಎಲ್ಲರೂ ಅಕ್ಷರಶಃ ದಂಗಾಗಿದ್ದರು.

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ. ಈ ವಿಡಿಯೋ ನೋಡಿದ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಕೂಡ ಈ ವಿಡಿಯೋಗೆ ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ನೋಡಿದ ರಶ್ಮಿಕಾ ಬೆಂಕಿ ಸ್ಮೈಲಿ ಹಾಕಿ ಸಮಂತಾ ಅವರನ್ನು ಹೊಗಳಿದ್ದಾರೆ. ಇನ್ನು, ಈ ವಿಡಿಯೋ ನೋಡಿದ ಅನುಪಮಾ ಪರಮೇಶ್ವರನ್​ ಕೂಡ ವಿಡಿಯೋ ಬಗ್ಗೆ ಅಚ್ಚರಿ ಹೊರ ಹಾಕಿದ್ದಾರೆ.

‘ರಾಜಿ ಪಾತ್ರ ಕಾಲ್ಪನಿಕವೇ ಆಗಿರಬಹುದು. ಆದರೆ ಅಸಮಾನತೆಯ ಯುದ್ಧದಲ್ಲಿ ಮಡಿದ ಹಾಗೂ ಇಂದಿಗೂ ಆ ಯುದ್ಧದ ನೆನಪಿನಲ್ಲಿ ನೋವು ಅನುಭವಿಸುತ್ತಿರುವ ಎಲ್ಲರಿಗೂ ಈ ಪಾತ್ರ ನಮನ ಸಲ್ಲಿಸುತ್ತದೆ ಎಂಬುದು ನನ್ನ ಅಭಿಪ್ರಾಯ. ರಾಜಿ ಪಾತ್ರವನ್ನು ತುಂಬ ಸೂಕ್ಷ್ಮವಾಗಿ ಮತ್ತು ಎಚ್ಚರಿಕೆಯಿಂದ ಬಿಂಬಿಸಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಒಂದು ವೇಳೆ ವಿಫಲವಾಗಿದ್ದರೆ, ಅಂತಹ ಅಸಂಖ್ಯಾತ ಜನರು ತಿರಸ್ಕಾರಕ್ಕೆ ಒಳಗಾಗುತ್ತಿದ್ದರು’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಮಂತಾ ಪಾತ್ರದ ಬಗ್ಗೆ ತಿಳಿಸಿದ್ದರು.

ಇದನ್ನೂ ಓದಿ: ಸಮಂತಾ ರಾಜಿ ಆಗಲು ಒಪ್ಪಿಕೊಂಡಿದ್ದು ಏಕೆ? ಭಾರಿ ವಿವಾದದ ಬಳಿಕ ಬಾಯ್ಬಿಟ್ಟ ನಟಿ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!